NEWSರಾಜಕೀಯಶಿಕ್ಷಣ-

ಪ್ರಶ್ನೆ ಪತ್ರಿಕೆ ಸೋರಿಕೆ: FDA ಪರೀಕ್ಷೆ ದಿಢೀರನೆ ಮುಂದೂಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ಆದ ಹಿನ್ನೆಲೆಯಲ್ಲಿ ನಾಳೆ (ಜ.24) ನಡೆಯಬೇಕಿದ್ದ KPSC / FDA ಪರೀಕ್ಷೆಯನ್ನು ದಿಢೀರನೆ ಮುಂದೂಡಲಾಗಿದೆ.

2019 ರಿಂದ ಬಾಕಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಕೆಪಿಎಸ್ಸಿ ನಾಳೆ ಪರೀಕ್ಷೆ ನಡೆಯಬೇಕಿತ್ತು. ಇನ್ನು ಇರುವ 1114 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಬರೋಬ್ಬರಿ 3.74 ಲಕ್ಷ ಯುವಜನರು ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಇಂದು ದಿಢೀರ್ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಸತ್ಯವತಿ ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ ಮುಂದಿನ ದಿನಗಳಲ್ಲಿ ಪರೀಕ್ಷಾ ದಿನಾಂಕವನ್ನು ತಿಳಿಸಲಾಗುವುದು ಎಂದು ಹೇಳಿದ್ದಾರೆ. ಪೆರೀಕ್ಷೆಗೂ ಮುನ್ನವೇ ಸೋರಿಕೆಯಾಗಿ ಪರೀಕ್ಷೆಯನ್ನು ಮುಂದೂಡಿದ್ದಾರೆ. ಆದರೆ ಇದರಿಂದಾಗಿ ಕಷ್ಟಪಟ್ಟು ಸಿದ್ದತೆ ಮಾಡಿಕೊಂಡಿದ್ದ ಪ್ರತಿಭಾವಂತರ ಪಾಡೇನಾಗಬೇಕು. ಇನ್ನು ವಯೋಮಿತಿ ಮೀರಿದವರಿಗೆ ಇದರಿಂದ ಅನ್ಯಾಯವಾಗುವುದಿಲ್ಲವೆ.

ಸರ್ಕಾರ ಮತ್ತು ಅಧಿಕಾರಿಗಳು ಯುವಜನರು ಅರ್ಜಿ ಸ್ವೀಕರಿಸುವ ಜತೆಗೆ ಅರ್ಜಿ ಶುಲ್ಕವನ್ನು ಪಡೆದುಕೊಂಡಿದ್ದು, ಈಗ ಈ ರೀತಿ ಚೆಲ್ಲಾಟವಾಡುವುದು ಎಷ್ಟು ಸರಿ ಎಂದು ನೊಂದ ಅಭ್ಯರ್ಥಿಗಳು ಪ್ರಶ್ನಿಸುತ್ತಿದ್ದಾರೆ.

ಇನ್ನು ಎರಡು ವರ್ಷದ ಹಿಂದೆಯೇ ನೇಮಕಾತಿಗಾಗಿ ಈ ಅಧಿಸೂಚನೆ ಹೊರಡಿಸಲಾಗಿತ್ತು. ಕೆಪಿಎಸ್ಸಿ ಮತ್ತು ಅದರ ಸುತ್ತಲಿನ ಹುಳುಗಳಿಂದಾಗಿ ರಾಜ್ಯದ ಯುವಕರಿಗೆ ಸರ್ಕಾರಿ ನೌಕರಿ ಗಗನ ಕುಸುಮವಾಗಿರುವುದು ದುರಂತ. ಯುವಜನರ ಓದು, ಪರಿಶ್ರಮಕ್ಕೆ ಬೆಲೆ ಸಿಗಲು ಸರ್ಕಾರ ಕಠಿಣ ನಿರ್ಧಾರ ತಳೆಯಬೇಕಿದೆ ಎಂದು ಹಲವರು ಆಗ್ರಹಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ತುಮಕೂರು: ಡಿಸಿ ಚಂದ್ರಶೇಖರ್ ಅಮಾನತಿಗೆ ದೂರುಕೊಟ್ಟು ಎಂಡಿಗೆ ಒತ್ತಾಯ KSRTC ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್‌: HRMS ತಂತ್ರಾಂಶದ ಮೂಲಕವೇ ರಜೆ ಅರ್ಜಿ ಸಲ್ಲಿಸಬೇಕು- ಮುಖ್ಯ ಸಿಬ್ಬಂದಿ ವ್ಯವಸ... KSRTC ಉತ್ತಮ ಸಾಧನೆ ತೋರಿದ ಡಿಸಿಗಳು, ಉಸ್ತುವಾರಿ ಅಧಿಕಾರಿಗಳು, ಘಟಕ ವ್ಯವಸ್ಥಾಪಕರಿಗೆ ನಗದು ಪುರಸ್ಕಾರ ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ- ನಿಲ್ದಾಣಕ್ಕೂ ಮೊದಲೆ ಇಳಿದ ಮಹಿಳೆ ಪರ ನಿಂತು ನಾನು ಪೊಲೀಸ್‌ ಎಂದಳು!! KSRTC ಚಾಲನಾ ಸಿಬ್ಬಂದಿಗಳು ಅಮ್ಮನ್.., ಅಕ್ಕನ್.. ಅಂತ ಬೈಸಿಕೊಳ್ಳೋದಕ್ಕೆ ಇರುವವರಲ್ಲ: ಶಿಲ್ಪ ಆರ್‌.ಗೌಡ ಗೆದ್ದಲು ಹಿಡಿದು ನುಸಿಯಾದ ಕೆನರಾ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 8 ಲಕ್ಷ ರೂಪಾಯಿ ಈ ಬಾರಿ ಬೀಡನಹಳ್ಳಿ ಹೊರತುಪಡಿಸಿ ಆರೂರುಗಳಲ್ಲಿ ಇಂದು- ನಾಳೆ ಮಾರಿಹಬ್ಬ ಮಾರ್ಚ್‌ 7ರಂದು 2025-26ನೇ ಸಾಲಿನ ಬಜೆಟ್‌ ಮಂಡನೆ: ಸಿಎಂ ಸಿದ್ದರಾಮಯ್ಯ KSRTC: ಸರಿಸಮಾನ ವೇತನ ಘೋಷಣೆ ಮಾಡಿ ಇಲ್ಲ ತೀವ್ರ ಹೋರಾಟ- ಎಚ್ಚರಿಕೆ ಕೊಟ್ಟ 4 ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರು ಮಂಡ್ಯ: ಆಟವಾಡುತ್ತ ಅಣ್ಣ ಸಿಡಿಸಿದ ಗುಂಡಿಗೆ ಮೂರು ವರ್ಷದ ತಮ್ಮ ಬಲಿ