NEWSನಮ್ಮಜಿಲ್ಲೆನಮ್ಮರಾಜ್ಯ

ಪರಿಶಿಷ್ಟರ ₹11 ಸಾವಿರ ಕೋಟಿ ದುರ್ಬಳಕೆ ಮಾಡಿಕೊಂಡ ಸರ್ಕಾರ: ಆ.5ರಂದು ಆಮ್ ಆದ್ಮಿ ಪಕ್ಷದಿಂದ ಬೃಹತ್ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳುಗಳಲ್ಲಿಯೇ ದಲಿತ ವಿರೋಧಿ ಎಂಬುದನ್ನು ಸಾಬೀತು ಪಡಿಸಲು ಹೊರಟಿದೆ ಎಂದು ಆಮ್ ಆದ್ಮಿ ಪಕ್ಷದ ಎಸ್ಸಿ-ಎಸ್ಟಿ ವಿಭಾಗದ ರಾಜ್ಯಾಧ್ಯಕ್ಷ ಪುರುಷೋತ್ತಮ ಆರೋಪಿಸಿದ್ದಾರೆ.

ದಲಿತ ವರ್ಗದ ಶ್ರೇಯೋಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್ಸಿ -ಎಸ್ಪಿ / ಟಿಎಸ್ಪಿ ಯೋಜನೆಯ 11,130 ಕೋಟಿ ರೂಪಾಯಿಗಳನ್ನು ಗ್ಯಾರೆಂಟಿಗಳಿಗಾಗಿ ವಿನಿಯೋಜಿಸುತ್ತಿರುವುದು ಈ ವರ್ಗಕ್ಕೆ ಮಾಡಿದ ಮಹಾ ಅನ್ಯಾಯ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.

ಇದೇ ರೀತಿಯ ದಲಿತರ ಹಣವನ್ನು ದುರ್ಬಳಕೆ ಮಾಡಿಕೊಂಡು ಬಂದಿದ್ದ ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಮತನೀಡಿದ ದಲಿತ ವರ್ಗ ಇಂದು ಮಹಾ ಮೋಸಕ್ಕೆ ಒಳಗಾಗುತ್ತಿರುವುದು ದುರಂತ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು 14 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಈ ಬಾರಿ 4079 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಇಟ್ಟಿದ್ದೆವೆಂದು ತಮ್ಮ ಬಜೆಟ್ ಭಾಷಣದಲ್ಲಿ ಹೇಳುತ್ತಾ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು.

ಇದೀಗ ದಲಿತ ವರ್ಗದಿಂದ ಛೀಮಾರಿ ಹಾಕಿಸಿಕೊಳ್ಳುವ ಪರಿಸ್ಥಿತಿ ಬಂದಿದೆ. ಯಾವುದೇ ಕಾರಣಕ್ಕೂ ದಲಿತ ವರ್ಗಕ್ಕೆ ಈ ರೀತಿ ಅನ್ಯಾವಾಗುವುದನ್ನು ನಾವು ಸಹಿಸುವುದಿಲ್ಲ. ಹೋರಾಟದ ಹಾದಿಯನ್ನು ತುಳಿಯುತ್ತೇವೆ ಎಂದು ಪುರುಷೋತ್ತಮ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪಕ್ಷದ ಉಪಾಧ್ಯಕ್ಷ ಸುರೇಶ್ ರಾಥೋಡ್ ಮಾತನಾಡಿ, ಹೇಳುವುದು ಒಂದು ಮಾಡುವುದು ಇನ್ನೊಂದು ಎಂಬುವುದು ಕಾಂಗ್ರೆಸ್ ಸರ್ಕಾರದ ಪರಿಪಾಠ. ಈ ಬಗ್ಗೆ ರಾಜ್ಯ ವ್ಯಾಪಿ ಹೋರಾಟವನ್ನು ರೂಪಿಸುತ್ತೇವೆ.

ಇದೇ ತಿಂಗಳ ಆಗಸ್ಟ್ 5ರ ಶನಿವಾರ ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ದಲಿತ ನೀತಿಯ ವಿರುದ್ಧ ಹೋರಾಟ ಮಾಡಲಿದ್ದೇವೆ. ನಮ್ಮ ಪ್ರತಿಭಟನೆಗೆ ಅನೇಕ ದಲಿತ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡ ಗಂಗಬೈಲಪ್ಪ ಇನ್ನಿತರರು ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು