NEWSನಮ್ಮರಾಜ್ಯರಾಜಕೀಯ

ಪರಿಷತ್‌ ಕಲಾಪದ ವೇಳೆ ನಿದ್ದೆಗೆ ಜಾರಿದವರನ್ನು ಕೀರ್ತನೆ ಮೂಲಕ ಎಬ್ಬಿಸಿದ ಭೋಜೇಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚರ್ಚೆಯ ಸಂದರ್ಭದಲ್ಲಿ ವಿಧಾನಪರಿಷತ್‍ನಲ್ಲಿ ನಿದ್ದೆ ಮಾಡುತ್ತಿದ್ದವರನ್ನು ನೋಡಿ ವಿಧಾನಪರಿಷತ್ ಜೆಡಿಎಸ್ ಸದಸ್ಯ ಭೋಜೇಗೌಡ ಅವರು ಏರು ಕಂಠದಲ್ಲಿ ದಾಸರ ಪದ ಹಾಡುವ ಮೂಲಕ ನಿದ್ದೆಯಿಂದ ಎಬ್ಬಿಸಿ ಒನ್ಸ್ ಮೋರ್ ಎನಿಸಿಕೊಂಡರು.

ನಿಯಮ 330 ಅಡಿ ನಡೆಯುತ್ತಿದ್ದ ಚರ್ಚೆ ವೇಳೆ ಫಾರೂಕ್ ಅವರೊಂದಿಗೆ ಮಾತನಾಡುತ್ತಿದ್ದ ಭೋಜೇಗೌಡ ಅವರು, ಇದ್ದಕ್ಕಿದ್ದಂತೆ ಗಾಯನ ಶುರುಮಾಡಿದರು.

ರಾಗವಾಗಿ ಹಾಡು ಶುರು ಮಾಡಿದ ಭೋಜೇಗೌಡ ಅವರು ಏರು ಕಂಠದಲ್ಲಿ ದಾಸರ ಪದ ಹಾಡಿದರು. ಈ ವೇಳೆ ನಿದ್ದೆಗೆ ಜಾರಿಗೆ ಹಲವು ಪರಿಷತ್‌ ಸದಸ್ಯರನ್ನು ಎಚ್ಚರಗೊಳಿಸುವುದಕ್ಕೆ ಹಾಡಿದೆ ಎಂದು ಸಮಜಾಯಿಷಿ ನೀಡಿದರು.

88 ಲಕ್ಷ ಜೀವರಾಶಿಗಳ ದಾಟಿ ಬಂದ ಈ ಶರೀರ, ತಾನಲ್ಲ ತನ್ನದಲ್ಲ ಎಂದು ದಾಸರ ಪದ ಭೋಜೇಗೌಡ ಅವರು ಹಾಡುತ್ತಿದ್ದಂತೆ, ಬಿಜೆಪಿ ಸದಸ್ಯರಿಂದ ಒನ್ಸ್ ಮೋರ್ ಎಂಬ ಬೇಡಿಕೆ ಕೇಳಿಬಂತು.

ಈ ವೇಳೆ ಮತ್ತೆ ರಾಗವಾಗಿ ಕೀರ್ತನೆ ಹಾಡಲು ಭೋಜೇಗೌಡ ಆರಂಭಿಸಿದರು. ಈ ಸಂದರ್ಭ ಮತ್ತೆ ಶುರು ಮಾಡಬೇಡಿ ಎಂದು ಸಭಾಪತಿ ಹೊರಟ್ಟಿ ತಮಾಷೆ ಮಾಡಿದರು.

ಮಂಗಳೂರು, ಕರಾವಳಿ, ಉಳ್ಳಾಲ ಸುರತ್ಕಲ್ ಭಾಗದಲ್ಲಿ ಅಸಮರ್ಪಕ ಒಳಚರಂಡಿಯಿಂದ ತೀವ್ರ ಸಮಸ್ಯೆ ಇದೆ ಎಂದು ತಮ್ಮ ಭಾಗದ ಸಮಸ್ಯೆಗಳನ್ನು ಪರಿಷತ್‍ನಲ್ಲಿ ಮಂಡಿಸಿದರು.

ಇದಲ್ಲದೆ ಮಂಗಳೂರು, ಕರಾವಳಿ ಪ್ರದೇಶಗಳಲ್ಲಿ ಸಾಕಷ್ಟು ಕೈಗಾರಿಕಾ ಪ್ರದೇಶಗಳಿವೆ ಇದರಿಂದ ಪರಿಸರ ನಾಶವಾಗುತ್ತಿದೆ. ಈ ಬಗ್ಗೆ ಮಾತನಾಡದೆ ಸುಮ್ಮನಿರುವ ಇವರೆಲ್ಲ ಪರಿಸರ ವಾದಿಗಳಲ್ಲ, ಪರಿಸರ ವ್ಯಾಧಿಗಳು.

ನನ್ನ ಬಗ್ಗೆ ಏನು ಬೇಕಾದ್ರೂ ಬರೀರಿ, ಪರಿಸರ ವ್ಯಾಧಿಗಳಿಂದಾಗಿಯೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂದು ಪರಿಸರ ವಾದಿಗಳ ವಿರುದ್ಧ ಕಿಡಿಕಾರಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು