NEWSಸಂಸ್ಕೃತಿ

ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್‌ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌ (47) ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಶುಕ್ರವಾರ ರಾತ್ರಿ ಅವರಿಗೆ ತೀವ್ರ  ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಚಿಕಿತ್ಸೆಗಾಗಿ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದಾರೆ.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದರು. ಅದರಿಂದ ಹೊರಬಂದ ಬಳಿಕ ಸಾಮಾಜಿಕ, ಜಾಗೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು. ಬಿಜೆಪಿ, ಸಂಘ ಪರಿವಾರದ ಸಿದ್ಧಾಂತ ವಿರೋಧಿಸಿ ಸಾಕಷ್ಟು ನಿಷ್ಠುರಗಳನ್ನೂ ಕಟ್ಟಿಕೊಂಡಿದ್ದರು. ಮೂಲತ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾದ ಮಹೇಂದ್ರ ಕುಮಾರ್ ಬೆಂಗಳೂರಿನಲ್ಲಿ ವಾಸವಾಗಿದ್ದರು.

“ನಮ್ಮ ಧ್ವನಿ” ಎಂಬ ಸಂಘಟನೆ ಸಂಸ್ಥಾಪಕರಾಗಿ,  ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್ ಮೂಲಕ ವಿವಿಧ ವಿಷಯಗಳ ಬಗ್ಗೆ ಮಾತನಾಡಿ ಜನಪ್ರಿಯರಾಗಿದ್ದರು. ಜನಪರ ಹೋರಾಟಗಾರ, ಶಾಂತಿಪ್ರಿಯ, ಸೌಹಾರ್ದಪರ, ಪ್ರಗತಿಪರ ನಿಲುವುಗಳ ಮಹೇಂದ್ರ  ಅವರ ನಿಧನ ರಾಜ್ಯಕ್ಕೆ ಬಹು ದೊಡ್ಡ ಆಘಾತವಾಗಿದೆ. ಮಹೇಂದ್ರ ಕುಮಾರ್  ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಬಿಜೆಪಿಯ ನಿಲುವುಗಳನ್ನು ವಿರೋಧಿಸಿ ಜೆಡಿಎಸ್‌ ಪಕ್ಷ ಸೇರಿದ್ದರು. ಇತ್ತೀಚೆಗೆ ನಡೆದ ಸಿಎಎ, ಎನ್‌ಆರ್‌ಸಿ ವಿರುದ್ಧದ ಹೋರಾಟದಲ್ಲಿ ತೊಡಗಿದ್ದರು. ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನೋವನ್ನು ಉಂಟು ಮಾಡಿದೆ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬಕ್ಕೆ ನೋವು ನೀಗಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

 

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ