CrimeNEWSನಮ್ಮರಾಜ್ಯ

ಪ್ರತಿಭಟನಾಕಾರರ ವಿರುದ್ಧ ದಾಖಲಾದ ಪ್ರಕರಣಗಳು ಹಿಂದಕ್ಕೆ

ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ l ಸನ್ನಡತೆ ಕೈದಿಗಳ ಬಿಡುಗಡೆಗೂ ಒಪ್ಪಿಗೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಹೂಡಿದ್ದ 46 ಪ್ರಕರಣಗಳನ್ನು ಹಿಂಪಡೆಯಲಾಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ  ರಾಜ್ಯ ಸಚಿವ ಸಂಪುಟ ಘಟನೋತ್ತರ ಅನುಮೋದನೆ ನೀಡಿದೆ. ಜೊತೆಗೆ, ಇಂತಹ ಸಾರ್ವಜನಿಕ ವಿಷಯಗಳಲ್ಲಿ ಹೋರಾಟ ಮಾಡಿದವರ ವಿರುದ್ಧ ದಾಖಲಾದ 152 ಪ್ರಕರಣಗಳನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ.

ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ರೈತರ ಮೇಲೆ ಹೂಡಲಾದ ಮೊಕದ್ದಮೆಗಳು ಟಿಪ್ಪು ಜಂಯಂತಿ ಸಂದರ್ಭದಲ್ಲಿ ಉಂಟಾದ ಗಲಭೆಯ ಸಂದರ್ಭದಲ್ಲಿ ಪ್ರತಿಭಟನಾಕಾರರ ವಿರುದ್ಧ ದಾಖಲಿಸಿದ ಪ್ರಕರಣಗಳು,  ಗಣೇಶೋತ್ಸವದಂತಹ ಸಾರ್ವಜನಿಕ ಸಮಾರಂಭದ ಸಂದರ್ಭದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಾವೆಗಳೂ ಒಳಗೊಂಡಂತೆ ಹಲವು ಪ್ರಕರಣಗಳನ್ನು ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸನ್ನಡತೆ ಕೈದಿಗಳ ಅವಧಿ ಪೂರ್ವ ಬಿಡುಗಡೆ : ಶಿಕ್ಷಾ ಅವಧಿ ಕಡಿಮೆ

ಜೀವಾವಧಿ ಶಿಕ್ಷೆಗೊಳಗಾಗಿ 14 ವರ್ಷ ಶಿಕ್ಷೆ ಪೂರ್ಣಗೊಳಿಸಿದ ಅಥವಾ 10 ವರ್ಷ ಶಿಕ್ಷೆ ಅನುಭವಿಸಿದ ಕೈದಿಗಳಿಗೆ ಸನ್ನಡತೆ ಆಧಾರದ ಮೇರೆಗೆ ಅವಧಿ ಪೂರ್ವ ಬಿಡುಗಡೆ ಮಾಡಲು ನಿಯಮಗಳ ಕರಡನ್ನು ರಾಜ್ಯ ಸಚಿವ ಸಂಪುಟದ ಅನುಮೋದಿಸಿದೆ. ಈ ಮುನ್ನ, ದಂಡ ಪ್ರಕ್ರಿಯಾ ಸಂಹಿತೆಯ ಪರಿಚ್ಛೇಧ 167 ( 1 )  ವ್ಯಾಪ್ತಿಗೊಳಪಡುವ ಪ್ರಕರಣಗಳನ್ನು ರಾಜ್ಯಪಾಲರಿಗೆ ಕಳುಹಿಸಿ ಬಿಡುಗಡೆಗೆ ಶಿಫಾರಸು  ಮಾಡಲಾಡಲಾಗುತ್ತಿತ್ತು. ಇದೀಗ ಸನ್ನಡತೆ ಆಧಾರದ ಮೇರೆಗೆ ಶಿಕ್ಷಾ ಅವಧಿಯನ್ನು ಕಡಿಮೆ ಮಾಡಲು ಸೂಕ್ತ ನಿಯಮ ರೂಪಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕು ದಾರೋಜಿ ಗ್ರಾಮಕ್ಕೆ 23.40 ಕೋಟಿ ರೂ ವೆಚ್ಚದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಂಜೂರು ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೆಯ ಹಂತದಲ್ಲಿ ಕೇರಳ-ಕರ್ನಾಟಕದ ಗಡಿಯಲ್ಲಿ ರಸ್ತೆ ಅಭಿವೃದ್ಧಿಗೆ ಕೇಂದ್ರದ ಪಾಲು 1274 ಕೋಟಿ ರೂ ಒಳಗೊಂಡಂತೆ 2729.66 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಸಚಿವ ಸಂಪುಟ ಸಮ್ಮತಿಸಿದೆ.

ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆಯಡಿ ಬ್ಯಾಂಕುಗಳಲ್ಲಿ ರೈತರ ಫಸಲುಗಳಿಗೆ ಮಾಡಿಸಲಾದ ವಿಮೆಯ ರಾಜ್ಯ ಸರ್ಕಾರದ ಪಾಲಿನ 2016 ಸಾಲಿನ ವಿಮಾ ಮೊತ್ತ 18.59 ಕೋಟಿಗಳನ್ನು ಭರಿಸಲು ಸಂಪುಟ ಒಪ್ಪಿಗೆ ನೀಡಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ