NEWSನಮ್ಮಜಿಲ್ಲೆ

ಬಿಎಂಟಿಸಿಯಲ್ಲಿ ಮಾ.8ರಂದು ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ – ಮಾ.9ರಿಂದ 29ರವರೆಗೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೂ ಸೌಲಭ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಹಿಳೆಯರಿಗೆ ಸಿಹಿಸುದ್ದಿ ನೀಡಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಇದೇ ಮಾ.8ರ ಮಹಿಳಾ ದಿನಾಚರಣೆಯಂದು ಬಿಎಂಟಿಸಿಯಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ಹೀಗಾಗಿ ಅಂದು ಮಹಿಳೆಯರು ಬಿಎಂಟಿಸಿ ಬಸ್‌ಗಳಲ್ಲಿ ಎಲ್ಲಿಗೆ ಪ್ರಯಾಣಿಸಿದರೂ ಹಣ ನೀಡುವ ಅಗತ್ಯವಿಲ್ಲ. ಮಹಿಳಾ ಪ್ರಯಾಣಿಕರನ್ನು ಉತ್ತೇಜಿಸುವ ಉದ್ದೇಶದಿಂದ ಬಿಎಂಟಿಸಿ ಈ ಪ್ಲಾನ್ ಮಾಡಿರುವುದಾಗಿ ತಿಳಿಸಿದೆ.

ಇನ್ನು ರಾಜಧಾನಿಯಲ್ಲಿ 40,86,580 ಮಹಿಳೆಯರಿದ್ದು, ಪ್ರತಿದಿನ 10,21,645 ಜನರು ಪ್ರಯಾಣ ಮಾಡುತ್ತಾರೆ. ಮಾರ್ಚ್ 8ರಂದು ಉಚಿತ ಪ್ರಯಾಣ ಹಿನ್ನೆಲೆ ಈ ಸಂಖ್ಯೆ ದುಪ್ಪಟ್ಟು ಆಗಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದು, ಈ ಉಚಿತ ಪ್ರಯಾಣದಿಂದ ಬಿಎಂಟಿಸಿಗೆ 8,17,31,600 ರೂಪಾಯಿ ಹೊರೆ ಆಗಲಿದೆ ಎಂದು ಅಂದಾಜಿಸಿದ್ದಾರೆ.

ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣ ಮಾಡುವುದರಿಂದ ಅವರಿಗೆ ಒಂದು ಸುವರ್ಣ ಅವಕಾಶ ಕಲ್ಪಿಸಿದಂತಾಗಿ ಇದರಿಂದ ಸರ್ಕಾರದ ಘನತೆ ಹೆಚ್ಚಾಗಲಿದೆ. ಜತೆಗೆ ಸಾರ್ವಜನಿಕ ಸಾರಿಗೆ ಉತ್ತೇಜಿಸಿದಂತಾಗಲಿದ್ದು, ಮಹಿಳೆಯರಿಗೆ ಸುರಕ್ಷಿತ ಮತ್ತು ಭದ್ರತೆಯುಳ್ಳ ಸಾರ್ವಜನಿಕ ಸಾರಿಗೆ ಸೌಲಭ್ಯ ಎಂದರೆ ಬಿಎಂಟಿಸಿ ಮಾತ್ರ ಎಂಬ ಬಗ್ಗೆ ಇನ್ನಷ್ಟು ಅರಿವು ಮೂಡಿಸಿದಂತಾಗಲಿದೆಯಂತೆ.

ಇನ್ನು ಇದೇ ಮಾ. 9, 2023 ರಿಂದ ಮಾ. 29, 2023ರವರೆಗೆ ದ್ವಿತೀಯ ಪಿಯ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಬಿಎಂಟಿಸಿ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪ್ರಯಾಣದ ವೇಳೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷಾ ಪತ್ರವನ್ನು ಕಡ್ಡಾಯವಾಗಿ ತೋರಿಸಬೇಕು. ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಮಾತ್ರ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ ಎಂದು ತಿಳಿಸಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ