NEWSನಮ್ಮಜಿಲ್ಲೆರಾಜಕೀಯ

ಬಿಎಂಟಿಸಿ ಯಲ್ಲಿ ಟಿಕೆಟ್ ರಹಿತ ಪ್ರಯಾಣ:  9.23 ಲಕ್ಷ ರೂ. ದಂಡ

ಸಂಸ್ಥೆಯ ನಿರ್ವಾಹಕರ ವಿರುದ್ಧ 2373 ಪ್ರಕರಣಗ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡಿದವರಿಂದ   9.23 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅನಧಿಕೃತವಾಗಿ ಪ್ರಯಾಣ ಮಾಡುವುದು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಫೆಬ್ರವರಿ-2020 ರ ಮಾಹೆಯಲ್ಲಿ  ಒಟ್ಟು 17,134 ಟ್ರಿಪ್ ಗಳನ್ನು ತಪಾಸಿಸಿ, 5127 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆಹಚ್ಚಿ, ಅವರಿಂದ ಒಟ್ಟು   8,96,150 ರೂ.ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ದ 2373 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 274 ಪುರುಷ ಪ್ರಯಾಣಿಕರಿಂದ ಒಟ್ಟು  27,400 ರೂ. ಗಳನ್ನು ಮೋಟಾರು ವಾಹನ ಕಾಯ್ದೆ 1988 ಕಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ.

ಒಟ್ಟಾರೆ ಫೆಬ್ರವರಿಯಲ್ಲಿ 5401 ಪ್ರಯಾಣಿಕರಿಂದ ಒಟ್ಟು   9,23,550 ರೂ. ದಂಡವನ್ನು ವಸೂಲಿ ಮಾಡಲಾಗಿದೆ.

ಪ್ರಯಾಣಿಕರು ಬೆಂಗಳುರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್, ದಿನದ ಪಾಸು,  ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ . ಜತೆಗೆ  ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ  ಮೀಸಲಾಗಿರುವ ಅಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಸಂಸ್ಥೆ ಅಧಿಕಾರಿಗಳು ಮನವಿ ಮಾಡಿದ್ದಾರೆ. .

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ