CrimeNEWSನಮ್ಮರಾಜ್ಯಬೆಂಗಳೂರು

ಬೈಕ್‌ಗಳ ನಡುವೆ ಭೀಕರ ಅಪಘಾತ: ಇಬ್ಬರು ಮೃತ, ಮತ್ತೊಬ್ಬರ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಮಾರುತಿನಗರ ಮುಖ್ಯರಸ್ತೆಯಲ್ಲಿ ರಾತ್ರಿ ನಡೆದಿದೆ.

ಸರ್ಕಾರಿ ಪ್ರಾಧ್ಯಾಪಕ ನರಸಪ್ಪ (51) ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಯುವತಿ ರಕ್ಷಾ (21) ಎಂಬುವರು ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಚಂದನ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ರಾತ್ರಿ 11.45ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ಅಜಾಗರೂಕ ಚಾಲನೆಯೇ ಕಾರಣ ಎಂದು ಹೇಳಲಾಗುತ್ತಿದೆ. ರಕ್ಷಾ ಹಾಗೂ ಚಂದನ್ ಈ ಇಬ್ಬರು ಸ್ನೇಹಿತರು ಪಲ್ಸರ್ ಬೈಕ್​ನಲ್ಲಿ ಮಾರುತಿನಗರ ಕಡೆಯಿಂದ ಕೆಎಲ್ಇ ಕಾಲೇಜು ಕಡೆಗೆ ಹೊರಟಿದ್ದರು. ಈ ವೇಳೆ ಬೈಕ್​ ಅನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ನರಸಪ್ಪಗೆ ಡಿಕ್ಕಿ ಹೊಡೆದಿದ್ದಾರೆ.

ಪರಿಣಾಮ ನರಸಪ್ಪ ತೀವ್ರ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದ್ದಾರೆ. ರಕ್ಷಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಬೈಕ್‌ನಲ್ಲಿ ತೆರಳುತ್ತಿದ್ದ ಈ ಮೂವರು ಕೂಡ ಹೆಲ್ಮೆಟ್‌ ಹಾಕಿರಲಿಲ್ಲ. ಒಂದು ವೇಳೆ ಹೆಲ್ಮೆಟ್‌ ಹಾಕಿದ್ದರು ಜೀವ ಉಳಿಯುತ್ತಿತ್ತೇನೋ.

ಇನ್ನು ರಕ್ಷಾ ಕಿಡ್​ ಕೇರ್​​​ನಲ್ಲಿ ಕೆಲಸ ಮಾಡುತ್ತಿದ್ದರೆ, ಚಂದನ್ ಕಾಲೇಜು ವಿದ್ಯಾರ್ಥಿಯಾಗಿದ್ದ. ಅಪಘಾತ ಸಂಬಂಧ ಕೆಂಗೇರಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು