CrimeNEWSದೇಶ-ವಿದೇಶ

ಬೈಕ್‌ಗೆ ಕಾರು ಡಿಕ್ಕಿ ಹೊಡೆಸಿದ ಪುಂಡರು: ಕೇಳಿದ ಬೈಕ್‌ ಸವಾರನ ಕಿಟಕಿಗೆ ಕಟ್ಟಿ 2ಕಿಮೀ ಎಳೆದೊಯ್ದರು

ವಿಜಯಪಥ ಸಮಗ್ರ ಸುದ್ದಿ

ಛತ್ತೀಸ್‌ಗಢ: ಕ್ಷುಲ್ಲಕ ವಿಚಾರಕ್ಕೆ ಕೆಲ ಯುವಕರು ಯುವಕನೊಬ್ಬನನ್ನು ಕಾರಿನ ಕಿಟಕಿಯಲ್ಲಿ ಸಿಲುಕಿಸಿ ಸುಮಾರು ಎರಡು ಕಿಲೋ ಮೀಟರ್​ ವರೆಗೆ ಎಳೆದೊಯ್ದ ಹೃದಯ ವಿದ್ರಾವಕ ಘಟನೆಯೊಂದು ಛತ್ತೀಸ್‌ಗಢ ನಡೆದಿದೆ.

ಛತ್ತೀಸ್‌ಗಢದ ದುರ್ಗ್ ನಗರದಲ್ಲಿ ಈ ಘಟನೆ ನಡೆದಿದ್ದು, ಇದಕ್ಕೆ ಕಾರಣ ಯುವಕನ ಬೈಕ್​ಗೆ ಕಾರು ಡಿಕ್ಕಿ ಹೊಡೆಸಿದ ಕಿಡಿಗೇಡಿಗಳನ್ನು ಕೇಳಿದ್ದಕ್ಕೆ ಈ ರೀತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಡಿಕ್ಕಿ ಹೊಡೆಸಿದ್ದರಿಂದ ಯುವಕ ಹಾಗೂ ಕಾರು ಸವಾರರ ನಡುವೆ ವಾಗ್ವಾದ ನಡೆದಿದೆ. ಇದರಿಂದ ಸಿಟ್ಟಿಗೆದ್ದ ಕಾರಿನಲ್ಲಿದ್ದ ಕೆಲ ಪುಂಡರು ಯುವಕನನ್ನ ಕಾರಿನ ಕಿಟಿಕಿಗೆ ಕಟ್ಟಿ, ಸುಮಾರು 2 ಕಿಲೋ ಮೀಟರ್​ವರೆಗೆ ಕಾರು ಚಾಲನೆ ಮಾಡಿಕೊಂಡು ಹೋಗಿದ್ದಾರೆ.

ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಜಾಗ್ರತರಾದ ಪೊಲೀಸರು ಕಾರು ಚಾಲಕ ಜಹೀರುದ್ದೀನ್ ಎಂಬಾತನನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಯುವಕನನ್ನು ಕಾರಿನಲ್ಲಿ ಎಳದೊಯ್ಯತ್ತಿರುವ ದೃಶ್ಯ ವೈರಲ್​ ಆಗಿದ್ದು, ಅನೇಕರು ಈ ಘಟನೆಯ ಬಗ್ಗೆ ಸರಿಯಾದ ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸರನ್ನು ಒತ್ತಾಯಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ