CrimeNEWSನಮ್ಮಜಿಲ್ಲೆ

ಬೈಕ್‌-KSRTC ಬಸ್‌ ನಡುವೆ ಅಪಘಾತ: ಸ್ಥಳದಲ್ಲೇ ಒಬ್ಬ ಸಾವು ಮತ್ತೊಬ್ಬನಿಗೆ ತೀವ್ರ ಗಾಯ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ರಾಮನಗರ-ಮಾಗಡಿ ರಸ್ತೆಯ ಜೋಡುಗಟ್ಟೆ ತಿರುವಿನ ಬಳಿ ನಡೆದಿದೆ.

ಹಾರೋಹಳ್ಳಿ ಸಮೀಪದ ಬಿಲ್ಲನಕುಪ್ಪೆಯ ದರ್ಶನ್ ಎಂಬ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟವರು. ಇನ್ನು ಹಿಂಬದಿ ಸವಾರ ಶರತ್ ಗಂಭೀರವಾಗಿ ಗಾಯಗೊಂಡಿದ್ದು ಮಾಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇಂದು ಬೆಳಗ್ಗೆ 70.40ರ ಸುಮಾರಿನಲ್ಲಿ ಅವಘಡ ಸಂಭವಿಸಿದ್ದು, ಬೈಕ್‌ ಸವಾರ ವಿದ್ಯಾರ್ಥಿಗಳ ಅತೀ ವೇಗದ ಚಾಲನೆಯೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಈ ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ತಿರುವಿನಲ್ಲಿ ವೇಗವಾಗಿ ಬಂದು ಬಲಗಡೆಯಲ್ಲಿ ಬರುತ್ತಿದ್ದ ಬಸ್‌ಗೆ ನೇರವಾಗಿ ಡಿಕ್ಕಿಯಾಗಿದೆ. ಪರಿಣಾಮ ತಲೆ ಛಿದ್ರವಾಗಿ ಒಂದುಕಾಲು ಕೂಡ ಮುರಿದು ಹೋಗಿದೆ. ಇನ್ನು ಮೃತನ ಕೈ ಬಸ್‌ ಮುಂಭಾಗ ಸಿಲುಕಿಕೊಂಡಿದ್ದು ಆ ಭೀಕರತೆಯನ್ನು ಹೇಳುವಂತಿದೆ.

ಇನ್ನು ಬೈಕ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತನು ತಲೆಗೆ ಹೆಲ್ಮೆಟ್ ಧರಿಸದೆ ಇದ್ದಿದ್ದರಿಂದ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಆತ ಸ್ಥಳದಲ್ಲೆ ಅಸುನೀಗಿದ್ದಾನೆ. ಒಂದು ವೇಳೆ ಹೆಲ್ಮೆಟ್ ಧರಿಸಿದ್ದರೆ ಆತನ ಜೀವ ಉಳಿಯುತ್ತಿತ್ತೋ  ಏನೋ ಎಂದು ಸ್ಥಳದಲ್ಲಿದ್ದವರು ಹೇಳುತ್ತಿದ್ದರು.

ಐಟಿಐ ಕಾಲೇಜಿನ ವಿದ್ಯಾರ್ಥಿಗಳಾದ ಇವರು ಇಂದು ಹಾರೋಹಳ್ಳಿ ಇಂದ ಮಾಗಡಿಗೆ ಪರೀಕ್ಷೆ ಬರೆಯಲು ಹೋಗುತ್ತಿದ್ದರು. ಇನ್ನು ಪರೀಕ್ಷೆ ಬರೆಯಲು ತಡವಾಗುತ್ತದೆ ಎಂದು ಅತಿವೇಗದಲ್ಲಿ ವಾಹನ ಚಲಾಯಿಸಿಕೊಂಡು ಬರುತ್ತಿದ್ದದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು