CrimeNEWSನಮ್ಮರಾಜ್ಯ

ಬೆಂಗಳೂರಿನಿಂದ ವಿಜಯಪುರಕ್ಕೆ ಬರುತ್ತಿದ್ದ ಬಸ್‌ ಟೈರ್​ ಬ್ಲಾಸ್ಟ್‌: ಕ್ಷಣಾರ್ಧದಲ್ಲೇ ಬಸ್‌ ಭಸ್ಮ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಬೆಂಗಳೂರಿಂದ ವಿಜಯಪುರಕ್ಕೆ ಬರುತ್ತಿದ್ದ ಜನತಾ ಟ್ರಾವೆಲ್ಸ್​​ಗೆ ಸೇರಿದ ಬಸ್​ನ ಟೈರ್​ ಬ್ಲಾಸ್ಟ್‌ಆದ ಪರಿಣಾಮ ಬಸ್‌ಗೆ ಬೆಂಕಿಹೊತ್ತಿಕೊಂಡು ಕ್ಷಣಾರ್ಧದಲ್ಲಿ ಭಸ್ಮವಾದ ಘಟನೆ ನಡೆದಿದೆ. ಸದ್ಯ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಬೆಂಗಳೂರು – ವಿಜಯಪುರ ಮಾರ್ಗವಾಗ ಕಾರ್ಯಾಚರಣೆ ಮಾಡುತ್ತಿದ್ದ ಜನತಾ ಟ್ರಾವೆಲ್ಸ್​​ಗೆ ಸೇರಿದ ಬಸ್​ ಹಿಟ್ಟನಹಳ್ಳಿ ಬಳಿ ಬರುತ್ತಿದ್ದಂತೆ ಟೈರ್​ ಬ್ಲಾಸ್ಟ್​ ಆಗಿದೆ. ಆ ಕ್ಷಣದಲ್ಲೇ ಬಸ್‌ಗೆ ಬೆಂಕಿಹೊತ್ತುಕೊಂಡು ಧಗ ಧಗ ಹೊತ್ತಿ ಉರಿದಿದೆ. ಆದರೆ ಟೈರ್​ ಬ್ಲಾಸ್ಟ್​ ಆದ ಶಬ್ಧ ಕೇಳಿದ ಬಸ್​​ನಲ್ಲಿದ್ದ ಎಲ್ಲರೂ ತಕ್ಷಣ ಕೆಳಕ್ಕೆ ಇಳಿದಿದ್ದಾರೆ.

ಹೀಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ದೊಡ್ಡ ಅನಾಹುತವೊಂದು ತಪ್ಪಿದೆ ಎಂದು ಆತಂಕದಿಂದಲೇ ಹೇಳಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದರಿಂದ ನಡು ರಸ್ತೆಯಲ್ಲೇ ಬಸ್​ ಸಂಪೂರ್ಣ ಸುಟ್ಟು ಕರಕಾಲಾಗಿದ್ದು ಭಾರೀ ಪ್ರಮಾಣದಲ್ಲಿ ಸುತ್ತಂಉತ್ತ ಹೊಗೆ ಆವರಿಸಿಕೊಂಡಿತ್ತು. ಜತೆ ಬಸ್‌ನಲ್ಲಿದ್ದ ಪ್ರಯಾಣಿಕರ ಬ್ಯಾಗ್​​ಗಳೆಲ್ಲ ಸುಟ್ಟು ಭಸ್ಮವಾಗಿವೆ.

ಘಟನೆಯಿಂದ ಪ್ರಯಾಣಿಕರು ಗಾಬರಿಗೊಂಡಿದ್ದು, ಬ್ಯಾಗ್​ಗಳು ಬೆಂಕಿಗಾಹುತಿ ಆಗಿದ್ದರಿಂದ ಬ್ಯಾಗ್​ನಲ್ಲಿದ್ದ ಬೆಳೆ ಬಾಳುವ ವಸ್ತುಗಳು, ಬಟ್ಟೆಗಳು, ನಗದು ಒಡವೆ ಎಲ್ಲ ಸುಟ್ಟು ಕರಕಲಾಗಿವೆ ಎಂದು ಕಣ್ಣೀರು ಹಾಕುತ್ತ ಗೋಳಾಡುತ್ತಿದ್ದರು.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದು, ಅಗ್ನಿ ಶಾಮಕ‌ದಳ ಕೂಡ ಸ್ಥಳದಲ್ಲಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು