NEWSನಮ್ಮಜಿಲ್ಲೆಬೆಂಗಳೂರು

ಬೆಂಗಳೂರು ಟ್ರಾಫಿಕ್‌ ನಿಯಂತ್ರಣಕ್ಕೆ ದೆಹಲಿ ಮಾದರಿ ಪ್ರೀಮಿಯಂ ಬಸ್‌ ಸಂಚಾರ BMTC ಮೂಲಕ ಆರಂಭಿಸಿ:  ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್‌ ಹಾಗೂ ಮಾಲಿನ್ಯ ನಿಯಂತ್ರಣದ ದೃಷ್ಟಿಯಿಂದ ದೆಹಲಿ ಮಾದರಿಯ ಪ್ರೀಮಿಯಂ ಬಸ್‌ಗಳ ಸಂಚಾರವನ್ನು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೂ ಬಿಎಂಟಿಸಿ ಮೂಲಕ ಆರಂಭಿಸಬೇಕು ಎಂದು ರಾಜ್ಯ ಸರ್ಕಾರವನ್ನು  ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ.

ಈ ವಿಚಾರವಾಗಿ ಇಂದು ಸುದ್ದಿಗಾರರಿಗೆ  ಪ್ರತಿಕ್ರಿಯಿಸಿದ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಅವರು,   ದೆಹಲಿಯಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ಸರ್ಕಾರವು “ಪ್ರೀಮಿಯಂ ಬಸ್‌ ಅಗ್ರಿಗೇಟರ್‌ ಪಾಲಿಸಿ 2023″ಗೆ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ಇನ್ನು ಈ ಮೂಲಕ ದೆಹಲಿಯಲ್ಲಿ ಬಡತನ ರೇಖೆಗಿಂತ ಮೇಲಿರುವ ಮಧ್ಯಮ ವರ್ಗ ಹಾಗೂ ಶ್ರೀಮಂತ ವರ್ಗದವರನ್ನು ಬಸ್‌ಗಳಲ್ಲಿ ಸಂಚರಿಸುವಂತೆ ಉತ್ತೇಜನ ನೀಡುವ ಸಲುವಾಗಿ ಆ್ಯಪ್‌ ಆಧಾರಿತ ಆನ್‌ಲೈನ್‌ ಬಸ್‌ ಸೇವೆ ಯೋಜನೆಯನ್ನು ಆರಂಭಿಸಿದೆ. ಇ-ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿದೆ. ರಾಜ್ಯಪಾಲರ ಅನುಮೋದನೆ ಸಿಗುತ್ತಿದ್ದಂತೆ ಪ್ರೀಮಿಯಂ ಬಸ್‌ ಸೇವೆಗೆ ಚಾಲನೆ ಸಿಗಲಿದೆ ಎಂದರು.

ಬೆಂಗಳೂರಲ್ಲೂ ಕೂಡ ಬಡವರು ಮತ್ತು ಬಡ ಮಧ್ಯಮ ವರ್ಗದವರು ಬಸ್‌ಗಳಲ್ಲಿ ಸಂಚರಿಸುತ್ತಾರೆ. ಹಾಗೆಯೇ ಮಧ್ಯಮ ವರ್ಗದವರು ಮತ್ತು ಶ್ರೀಮಂತ ವರ್ಗದವರು ತಮ್ಮ ಖಾಸಗಿ ವಾಹನಗಳನ್ನು ಬಿಟ್ಟು ಬಸ್‌ಗಳಲ್ಲೇ ದಿನನಿತ್ಯ ಓಡುವಂತೆ ಉತ್ತೇಜನ ನೀಡುವ ಸಲುವಾಗಿ ದೆಹಲಿ ಮಾದರಿಯ ಪ್ರೀಮಿಯಂ ಬಸ್‌ಗಳ ಸೇವೆಯನ್ನು ರಾಜ್ಯದ ಬೆಂಗಳೂರಿನಂತಹ ನಗರಗಳಲ್ಲಿ ಆರಂಭಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರನ್ನು ಒತ್ತಾಯಿಸಿದರು.

ಎಸಿ, ವೈಫೈ, ಜಿಪಿಎಸ್‌, ಸಿಸಿಟಿವಿ ಸೇರಿದಂತೆ ಲಕ್ಸೂರಿ ಖಾಸಗಿ ವಾಹನಗಳಲ್ಲಿರುವ ಎಲ್ಲ ರೀತಿಯ ವ್ಯವಸ್ಥೆಗಳನ್ನು ಒಳಗೊಂಡ ಆಧುನಿಕ ಬಸ್‌ಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮೂಲಕ  ಸಂಚಾರ ಆರಂಭಿಸಿದರೆ ಸ್ವಂತ ಕಾರುಗಳನ್ನು ಬಿಟ್ಟು ಬಸ್‌ಗಳಲ್ಲೇ ಸಂಚರಿಸಲು ಆರಂಭಿಸುತ್ತಾರೆ. ಈ ಮೂಲಕ ಸಂಚಾರ ದಟ್ಟಣೆ, ವಾಯು ಮಾಲಿನ್ಯದಂತಹ ಪ್ರಮುಖ ಸಮಸ್ಯೆಗಳನ್ನು ಹತೋಟಿಗೆ ತರಬಹುದು ಎಂದು ಅಭಿಪ್ರಾಯಪಟ್ಟರು.

ಪ್ರೀಮಿಯಂ ಬಸ್‌ಗಳಲ್ಲಿ ಆನ್‌ಲೈನ್‌ ಮೂಲಕ ಸೀಟ್‌ ಕಾಯ್ದಿರಿಸುವುದು ಹಾಗೂ ಪೇಮೆಂಟ್‌ ಮಾಡುವ ಅವಕಾಶವಿದೆ. ನಿಂತು ಪ್ರಯಾಣಿಸುವುದಕ್ಕೆ ಅವಕಾಶವಿಲ್ಲ. ಎಲ್ಲರಿಗೂ ಆಸನಗಳು ಸಿಗಲಿವೆ. ಬಸ್‌ ಒಳಗೆ ಟಿಕೆಟ್‌ ಹರಿಯುವ ಸಂಪ್ರದಾಯ ಇರುವುದಿಲ್ಲ. ನೂಕುನುಗ್ಗಲು, ಅನವಶ್ಯಕ ಗದ್ದಲ ಇರುವುದಿಲ್ಲ. ಸ್ವಂತ ಗಾಡಿಯಲ್ಲಿ ಆರಾಮದಾಯಕವಾಗಿ, ಅನುಕೂಲಕರವಾಗಿ ಪ್ರಯಾಣಿಸಿದಂತೆ ದಿನನಿತ್ಯ ಓಡಾಡಬಹುದು ಎಂದು ಜಗದೀಶ್‌ ವಿವರಿಸಿದರು.

ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಿಸಲು 190 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಕೊರೆಯಲು ಡಿ.ಕೆ.ಶಿವಕುಮಾರ್‌ ಅವರು ಮುಂದಾಗಿದ್ದಾರೆ. ಇಂತಹ ಅಪಾಯಕಾರಿ ಮತ್ತು ಅವೈಜ್ಞಾನಿಕ ಯೋಜನೆಗಳಿಗೆ ಕೈಹಾಕುವ ಬದಲು ದೆಹಲಿ ಸರ್ಕಾರದ  ಕ್ರಾಂತಿಕಾರಿ ಯೋಜನೆಗಳನ್ನು ನಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವುದು ಉತ್ತಮ ಎಂದರು.

ಸಲೀಂ ಅವರಂತಹ ದಕ್ಷ ಅಧಿಕಾರಿಗಳನ್ನು ನೇಮಿಸಿ: ಬೆಂಗಳೂರು ನಗರದ ವಾಹನಗಳ ಸುಗಮ ಸಂಚಾರ ಹಾಗೂ ಸಂಚಾರ ನಿಯಮಗಳ ಜಾರಿ ಹೊಣೆಯನ್ನು ನಿರ್ವಹಿಸಲು ಹೊಸದಾಗಿ ಸೃಷ್ಟಿಸಿದ್ದ ಬೆಂಗಳೂರು ವಿಶೇಷ ಟ್ರಾಫಿಕ್ ಕಮಿಷನರ್ ಹುದ್ದೆಯನ್ನು ಮರು ಸ್ಥಾಪಿಸಬೇಕು ಹಾಗೂ ಸಮರ್ಥವಾಗಿ ನಿಭಾಯಿಸುತ್ತಿದ್ದ ಎಡಿಜಿಪಿ, ವಿಶೇಷ ಕಮಿಷನರ್‌ ಎಂ.ಎ.ಸಲೀಂ ಅವರನ್ನು ಪುನಃ ಮುಂದುವರಿಸಬೇಕು ಅಥವಾ ಅಂಥ ದಕ್ಷ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಜಗದೀಶ್‌ ವಿ ಸದಂ ಒತ್ತಾಯಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ