NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ಬೆಂಗಳೂರು ಬಂದ್‌, ಹೋರಾಟ ಹತ್ತಿಕ್ಕಲು ರಾಜ್ಯ ಸರ್ಕಾರದ  ಯತ್ನ  ಖಂಡನಾರ್ಹ: ಜಗದೀಶ್ ವಿ. ಸದಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊನೆಯ ಕ್ಷಣಗಳಲ್ಲಿ ಬೆಂಗಳೂರು ಬಂದ್‌ಗೆ ಅನುಮತಿ ನಿರಾಕರಿಸುವ ಮೂಲಕ ರಾಜ್ಯ ಸರ್ಕಾರ ನಾಡಿನ ಜನತೆಗೆ ದ್ರೋಹ ಬಗೆದಿದೆ. ನಮ್ಮ ಜನರ ಕುಡಿಯುವ ನೀರಿಗಾಗಿ, ನಮ್ಮ ಜನರ ಬದುಕಿಗಾಗಿ ಹೋರಾಡುವುದಕ್ಕೂ ಅನುಮತಿ ನಿರಾಕರಿಸುತ್ತಿರುವುದು ದುಃಖಕರ ವಿಚಾರ ಎಂದು ಎಎಪಿ ಮುಖಂಡ ಜಗದೀಶ್ ವಿ. ಸದಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ನಾಡಿನ ಹಿತಾಸಕ್ತಿಯನ್ನು ಕಡೆಗಣಿಸಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲಕ್ಕೆ ನಿಂತಿವೆ.ಶಾಲೆಗಳು, ಖಾಸಗಿ ಬಸ್‌, ಓಲಾ, ಉಬರ್‌, ಟ್ಯಾಕ್ಸಿ, ಆಟೋ, ಗೂಡ್ಸ್‌ ವಾಹನ, ಎಪಿಎಂಸಿ ಮಾರುಕಟ್ಟೆ, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಮಾಲ್‌, ಮಲ್ಟಿಪ್ಲೆಕ್ಸ್‌ಗಳು, ಅಂಗಡಿ ಮಳಿಗೆಗಳು, ಕೈಗಾರಿಕೆಗಳು ಸ್ವಯಂ ಪ್ರೇರಣೆಯಿಂದ ಬಂದ್‌ಗೆ ಬೆಂಬಲ ನೀಡಿವೆ.

ಆದರೆ ರಾಜ್ಯ ಸರ್ಕಾರ ಬಂದ್‌ಗೆ ಅವಕಾಶ ನೀಡದೆ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ. ಪೊಲೀಸ್‌ ಇಲಾಖೆಯ ಮೂಲಕ ಹೋರಾಟವನ್ನು ಹತ್ತಿಕ್ಕಲು ಯತ್ನಿಸುತ್ತಿದೆ. ಇದು ಖಂಡನಾರ್ಹ ನಡೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರ ಉಳಿಸಿಕೊಳ್ಳಲು ರಾಜ್ಯದ ಹಿತಾಸಕ್ತಿಯನ್ನು ಬಲಿಕೊಡುತ್ತಿರುವುದು ನಾಚಿಕೆಗೇಡಿನ ವಿಚಾರ. ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾಗುವ ಮೂಲಕ ನಾಡಿನ ಜನರ ಶಾಪಕ್ಕೆ ಗುರಿಯಾಗುವುದು ನಿಶ್ಚಿತ. ನಾಡಿನ ಜನತೆ ನೀರಿನ ಬಗ್ಗೆ ಮನವರಿಕೆ ಮಾಡಿಕೊಂಡಿದ್ದಾರೆ, ಸ್ವಯಂ ಪ್ರೇರಣೆಯಿಂದ ಬೀದಿಗಿಳಿಯುತ್ತಿದ್ದಾರೆ, ಬೆಂಗಳೂರು ಬಂದ್‌ ಹತ್ತಿಕ್ಕಲು ಯಾರಿಗೂ ಸಾಧ್ಯವಿಲ್ಲ. ಬಂದ್‌ ಯಶಸ್ವಿಯಾಗೇ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು