CrimeNEWSನಮ್ಮರಾಜ್ಯ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಇಳಿಮುಖ: ವೇಗ ಮಿತಿ ಹೆಚ್ಚಿಸಲು ಚಿಂತನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಇಳಿಮುಖವಾಗಿದ್ದು ಒಂದಕಿಗೆ ಸಾವಿನ ಸಂಖ್ಯೆ ಇಳಿದಿದೆ.

ಪೊಲೀಸರ ಕಟ್ಟುನಿಟ್ಟಿನ ಈ ಕ್ರಮಕ್ಕೆ ಅಪಘಾತ ಸಂಖ್ಯೆ ಕಡಿಮೆಯಾಗಿದೆ. ಬೆಂಗಳೂರಿನಿಂದ ಮೈಸೂರಿನವರೆಗೆ ಮೇ ತಿಂಗಳೊಂದರಲ್ಲೇ 29 ಮಂದಿ ಅವಘಡದಲ್ಲಿ ಅಸುನೀಗಿದ್ದರು. ಜೂನ್ ತಿಂಗಳಿನಲ್ಲಿ 28ಮಂದಿ ಮೃತಪಟ್ಟಿದ್ದರು. ಆದರೆ, ಜುಲೈನಲ್ಲಿ ಆ ಸಂಖ್ಯೆ 8ಕ್ಕೆ ಇಳಿದಿತ್ತು.

ರಾಮನಗರ ವ್ಯಾಪ್ತಿಯಲ್ಲಿ 3, ಮಂಡ್ಯ ವ್ಯಾಪ್ತಿಯಲ್ಲಿ 5 ಮಂದಿ ಪ್ರಯಾಣಿಕರು ಅಸುನೀಗಿದ್ದರು. ಇನ್ನು ಈ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದು, ಅಪಘಾತ ಸಂಖ್ಯೆಯಲ್ಲಿ ಇಳಿಮುಖ ವಾಗಿರುವ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಕಾರ್ಯವನ್ನು ಮೆಚ್ಚಿ ಶ್ಲಾಘಿಸಿದ್ದಾರೆ.

ಮುಂದಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಮತ್ತಷ್ಟು ಇಳಿಮುಖ ಆದರೆ ಈಗ ವಿಧಿಸಿರುವ 80 ಕಿಮೀ ವೇಗ ಮಿತಿಯನ್ನು ಸ್ವಲ್ಪ ಸಡಿಸಿಲಿ ಏರಿಕೆಗೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಪ್ರತಿ ಗಂಟೆಗೆ 80 ರಿಂದ 100 ಕಿಮೀಗೆ ಏರಿಸುವ ಮೂಲಕ ಹಿಂದೆ ಇದ್ದ ಮಿತಿಯನ್ನು ಕಾಯ್ದುಕೊಳ್ಳುವುದತ್ತಾ ಪೊಲೀಸ್ ಇಲಾಖೆ ಚಿಂತನೆ ನಡೆಸುತ್ತಿದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ