NEWSನಮ್ಮಜಿಲ್ಲೆನಮ್ಮರಾಜ್ಯ

ಬೆಂಗಳೂರು: ವಕೀಲರ ಮೇಲಿನ ಹಲ್ಲೆ ತಡೆಗೆ ಕಾಯ್ದೆ ರೂಪಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ವಕೀಲರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಕೀಲರ ಮೇಲಿನ ಹಲ್ಲೆ ತಡೆಯಲು ಸಂರಕ್ಷಣಾ ಕಾಯಿದೆ ರೂಪಿಸುವಂತೆ ಆಗ್ರಹಿಸಿ ಶುಕ್ರವಾರ‌ ರಾಜ್ಯಾದ್ಯಂತ ಎಲ್ಲ ತಾಲೂಕು, ಜಿಲ್ಲಾ ಕೋರ್ಟ್‌ಗಳಲ್ಲಿನ ಕಲಾಪದಿಂದ ಹೊರಗುಳಿದು ವಕೀಲರು ಪ್ರತಿಭಟನೆ ನಡೆಸಿದರು.

ಅದೇ ರೀತಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಬೆಂಗಳೂರು ವಕೀಲರ ಸಂಘದಿಂದ ಆನಂದರಾವ್‌ ವೃತ್ತದ ಗಾಂಧಿಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪ್ರತಿಭಟನಾ ನಿರತ ವಕೀಲರು, ವಕೀಲರ ರಕ್ಷಣೆಗೆ ಸರ್ಕಾರಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕಾಯಿದೆ, ಕಾನೂನು ರೂಪಿಸಿಲ್ಲ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ವಕೀಲರ ಮೇಲೆ ಹಲ್ಲೆಗಳು ನಡೆಯುತ್ತಿವೆ. ವಕೀಲರ ಮೇಲಿನ ಹಲ್ಲೆ ತಡೆಯಲು ಸಂರಕ್ಷಣಾ ಕಾನೂನು ರೂಪಿಸುವಂತೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿತ್ತು.

ಆ ಸಂದರ್ಭದಲ್ಲಿ ಅವರು ಬಜೆಟ್‌ನಲ್ಲಿ ರಕ್ಷಣೆ ಒದಗಿಸುವ ಸಲುವಾಗಿ ಸವಲತ್ತು ನೀಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಬಜೆಟ್‌ನಲ್ಲಿ ವಕೀಲರಿಗೆ ಯಾವುದೇ ಸಲವಲತ್ತುಗಳನ್ನು ಈವರೆಗೂ ಒದಗಿಸಲಿಲ್ಲ. ರಾಜ್ಯ ಸರ್ಕಾರ ಕೂಟ ಬಜೆಟ್‌ನಲ್ಲಿ ವಕೀಲರ ಸವಲತ್ತಿಗಾಗಿ ಏನನ್ನೂ ಘೋಷಣೆ ಮಾಡಲಿಲ್ಲ ಎಂದು ಆರೋಪಿಸಿದರು.

ವಕೀಲರಿಗೆ ಏನೇ ತೊಂದರೆಯಾದರೂ ಬಾರ್‌ಕೌನ್ಸಿಲ್‌ನಿಂದ ಸೌಲಭ್ಯಗಳು ದೊರೆಯುತ್ತಿವೆಯೇ ಹೊರೆತು ಸರ್ಕಾರಗಳಿಂದ ಯಾವುದೇ ಸೌಲಭ್ಯಗಳು ಸಿಗದಂತಾಗಿದೆ. ಇದರಿಂದಾಗಿ ವಕೀಲರು ತೀವ್ರ ತೊಂದರೆ ಅನುಭವಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ವಕೀಲರಿಗೆ ಸೌಲಭ್ಯ ನೀಡುವ ಸಲುವಾಗಿ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿದರು.

ವಕೀಲ ವೃತ್ತಿಯಲ್ಲಿ ತೊಡಗಿರುವ ಹಲವರು ಆರ್ಥಿಕ ತೊಂದರೆಯಲ್ಲಿದ್ದಾರೆ. ಇದರ ನಡೆಯೂ ತಮ್ಮ ಸೇವೆಯನ್ನು ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಕೀಲರ ಹಾಗೂ ಅವರ ಕುಟುಂಬಕ್ಕೆ ಪಿಂಚಣಿ ಸವಲತ್ತು ನೀಡುವಂತೆ ನಿರ್ದೇಶನ ನೀಡಬೇಕು. ಭದ್ರತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

 

ನಗರದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆವರಣದಿಂದ ಹೊರಟ ಪ್ರತಿಭಟನಾ ಮರೆವಣಿಗೆ ಸಿಟಿ ಸಿವಿಲ್‌ ಕೋರ್ಟ್‌ ಮಾರ್ಗವಾಗಿ ಆನಂದರಾವ್‌ ವೃತ್ತ ತಲುಪಿತು ಪ್ರತಿಭಟನೆ ನಡೆಸಿ ಬಳಿಕ ಗೃಹ ಸಚಿವ ಆರಗಜ್ಞಾನೇಂದ್ರ ಅವರಿಗೆ ಈ ಅಧಿವೇಶದನಲ್ಲಿ ವಕೀಲರ ರಕ್ಷಣೆ ಕಾಯಿದೆ ಬಗ್ಗೆ ಧ್ವನಿ ಎತ್ತುವಂತೆ ಮನವಿ ಸಲ್ಲಿಸಲಾಯಿತು.

ಬೆಂಗಳೂರು ವಕೀಲ ಸಂಘದ ಅಧ್ಯಕ್ಷ ವಿವೇಕ್‌ ಸುಬ್ಬಾರೆಡ್ಡಿ, ಪ್ರದಾನ ಕಾರ್ಯದರ್ಶಿ ಟಿ.ಜಿ. ರವಿ, ಖಜಾಂಚಿ ಎಚ್‌ಎಂಟಿ ಹರೀಶ್‌, ವಕೀಲರಾದ ಎಚ್‌.ಬಿ. ಶಿವರಾಜು, ಕಿರಣ್‌ ಕುಮಾರ್‌, ಬೈರಾರೆಡ್ಡಿ, ಸತ್ಯಣ್ಣ, ಕಾಂತರಾಜು ಸೇರಿದಂತೆ ಸಾವಿರಾರು ವಕೀಲರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ