NEWS

ಬಿಜೆಪಿ ಶಾಸಕರಿಗೆ ಸ್ಯಾಂಟ್ರೋ ರವಿ  12 ಹುಡುಗಿಯರ  ಪೂರೈಕೆ – ಸಾಕ್ಷಿ ಬಹಿರಂಗಪಡಿಸಲು ಎಚ್‌ಡಿಕೆಗೆ ಎಎಪಿ ಸಲಹೆ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಪರೇಷನ್‌ ಕಮಲದ ಸಂದರ್ಭದಲ್ಲಿ ಮುಂಬೈ ರೆಸಾರ್ಟ್‌ನಲ್ಲಿದ್ದ ಬಿಜೆಪಿ ಪರ ಶಾಸಕರಿಗೆ ಸ್ಯಾಂಟ್ರೋ ರವಿಯು 12 ಹುಡುಗಿಯರನ್ನು ಪೂರೈಸಿದ್ದ ಎಂಬ ಆರೋಪಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಎಚ್.ಡಿ.ಕುಮಾರಸ್ವಾಮಿ ಬಹಿರಂಗಪಡಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿ ಮುಖಂಡ ಬ್ರಿಜೇಶ್‌ ಕಾಳಪ್ಪ ಆಗ್ರಹಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬ್ರಿಜೇಶ್‌ ಕಾಳಪ್ಪ, “ಮುಂಬೈ ರೆಸಾರ್ಟ್‌ಗೆ 12 ಹುಡುಗಿಯರನ್ನು ಪೂರೈಸಲಾಗಿತ್ತು ಎಂಬ ಕುಮಾರಸ್ವಾಮಿಯವರ ಆರೋಪವು ಗಂಭೀರ ಸ್ವರೂಪದ್ದಾಗಿದೆ. ಆದರೆ ಕುಮಾರಸ್ವಾಮಿಯವರು ಕೇವಲ ಹೇಳಿಕೆ ನೀಡಿ ಸುಮ್ಮನಾಗುವ ಮೂಲಕ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ.

ಬಿಜೆಪಿಯ ಅನೈತಿಕ ರಾಜಕಾರಣಕ್ಕೆ ಸಂಬಂಧಿಸಿದ ಪುರಾವೆಗಳನ್ನು ಕುಮಾರಸ್ವಾಮಿ ಶೀಘ್ರವೇ ಬಹಿರಂಗ ಪಡಿಸಲಿ. ಹಿಟ್‌ ಅಂಡ್‌ ರನ್‌ ಮಾಡುವ ಬದಲು ಜವಾಬ್ದಾರಿಯುತ ನಾಯಕರಂತೆ ರಾಜ್ಯದ ಜನತೆಯ ಮುಂದೆ ಸಾಕ್ಷಿಗಳನ್ನು ತೆರೆದಿಡಲಿ ಎಂದು ಹೇಳಿದರು.

ರಾಜ್ಯ ಬಿಜೆಪಿಯು ಕೇಂದ್ರ ಬಿಜೆಪಿಯ ಸಹಕಾರದೊಂದಿಗೆ ದೊಡ್ಡ ಪ್ರಮಾಣದ ಅಕ್ರಮಗಳನ್ನು ಮಾಡಿ ಅಧಿಕಾರಕ್ಕೆ ಬಂದಿದೆ. ಚುನಾವಣೆಯಲ್ಲಿ ಜನಾದೇಶ ಬಾರದಿದ್ದರೂ ಶಾಸಕರನ್ನು ಖರೀದಿಸುವ ಮೂಲಕ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಧಿಕಾರ ಪಡೆದುಕೊಂಡಿದೆ.

ಮಹಿಳೆಯರನ್ನು ಬಳಸಿಕೊಂಡು ಅನೈತಿಕ ಚಟುವಟಿಕೆಗಳ ಮೂಲಕ ಶಾಸಕರನ್ನು ರೆಸಾರ್ಟ್‌ನಲ್ಲಿ ಹಿಡಿದಿಟ್ಟುಕೊಳ್ಳುವ ಹಂತಕ್ಕೆ ರಾಜಕಾರಣ ತಲುಪಿರುವುದು ಬಹುದೊಡ್ಡ ದುರಂತ. ಅಧಿಕಾರಕ್ಕಾಗಿ ಬಿಜೆಪಿ ಯಾವ ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದು ಇದರಿಂದ ಸ್ಪಷ್ಟವಾಗಿದೆ ಎಂದರು.

ಭಾರತೀಯ ಸಂಸ್ಕೃತಿಯ ಬಗ್ಗೆ ಪುಖಾಂನುಪುಂಖವಾಗಿ ಮಾತನಾಡುವ ಬಿಜೆಪಿಯವರು ಮಹಿಳೆಯರನ್ನು ಹೀಗೆ ಬಳಸಿಕೊಂಡಿರುವುದು ಖಂಡನೀಯ. ಆಮ್‌ ಆದ್ಮಿ ಪಾರ್ಟಿಯು ಹಲವು ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ. 50ಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ.

ಆದರೆ ಬಿಜೆಪಿಯು ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮಹಿಳೆಯರನ್ನು ಬಳಸಿಕೊಂಡಿದೆ. ಮಹಿಳೆಯರ ವಿಚಾರದಲ್ಲಿ ಎರಡೂ ಪಕ್ಷಗಳಿಗಿರುವ ವ್ಯತ್ಯಾಸವನ್ನು ಇದರಿಂದ ತಿಳಿಯಬಹುದು ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು