CrimeNEWSನಮ್ಮಜಿಲ್ಲೆ

ಬಿಜೆಪಿ ಶಾಸಕ ರಾಮದಾಸ್‌ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್‌ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು:   ಮಳಲವಾಡಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಸ್.ಎ ರಾಮ​ದಾಸ್ ಅವರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ರಾಮದಾಸ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.

2008ರಲ್ಲಿ ಭೂ ಹಗರಣ ಸಂಬಂಧ ಶಾಸಕ ರಾಮದಾಸ್ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಕುರಿತು ಪೊಲೀಸರು ಬಿ ರಿಪೋಟ್೯ ಸಲ್ಲಿಸಿದ್ದರು. ವರದಿಯನ್ನು ಕೆಳ ನ್ಯಾಯಾಲಯ ಅಂಗೀಕರಿಸಿತ್ತು‌. ಕೆಳ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಆಕ್ಷೇಪಣಾ ಅರ್ಜಿ ಸಲ್ಲಿಸಿದರು.

ಅಷ್ಟರಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದ ರಾಮ​​​​ದಾಸ್ ಅವರ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಗೆ ವರ್ಗಾವಣೆಯಾಗಿತ್ತು. 2019ರಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲು ವಿಶೇಷ ಕೋರ್ಟ್ ಆದೇಶಿಸಿತ್ತು. ಆದರೆ, ವಿಶೇಷ ಕೋರ್ಟ್​ನ ಆದೇಶ ಪ್ರಶ್ನಿಸಿ ರಾಮದಾಸ್ ಹೈಕೋರ್ಟ್​​ನಿಂದ ತಡೆಯಾಜ್ಞೆ ತಂದಿದ್ದರು.

ಇತ್ತೀಚೆಗೆ ರಾಮದಾಸ್ ಅರ್ಜಿಯನ್ನು ವಜಾ ಮಾಡಿ, ಹೈಕೋರ್ಟ್​​ ತಡೆಯಾಜ್ಞೆಯನ್ನು ತೆರವು ಮಾಡಿತ್ತು. ಮತ್ತೆ ವಿಚಾರಣೆ ಮುಂದುವರಿಸಿದ ವಿಶೇಷ ಕೋರ್ಟ್​ರಾಮ​ದಾಸ್ ವಿರುದ್ಧ ಐಪಿಸಿ 420, 468 ಅಡಿ ಕೇಸ್ ದಾಖಲಿಸಲು ಕೋರ್ಟ್ ಸೂಚನೆ ನೀಡಿದೆ.

1994ರಲ್ಲಿ ಅಂದಿನ‌ ಮೈಸೂರು ಡಿಸಿಯಾಗಿದ್ದ ತ.ಮ. ವಿಜಯಭಾಸ್ಕರ್ ಅವರು ಭೂಹಗರಣದ ಬಗ್ಗೆ ತನಿಖೆ ನಡೆಸಿ ರಾಮದಾಸ್ ವಿರುದ್ಧ ವರದಿ ಸಲ್ಲಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು