ಬೀಡನಹಳ್ಳಿಯಲ್ಲಿ ಸಡಗರ ಸಂಭ್ರಮದಿಂದ ಜರುಗಿದ ಮಾರಮ್ಮ ದೇವಿಯ ವೀರಹಬ್ಬ
ಬೀಡನಹಳ್ಳಿ: ತಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮ ದೇವತೆ ಬೀಡನಹಳ್ಳಿ ಮಾರಮ್ಮನ ದೇವಿಯ ವೀರಹಬ್ಬ ಸಡಗರ ಸಂಭ್ರಮದಿಂದ ಜರುಗಿತು.
ಗ್ರಾಮದಲ್ಲಿ ಪ್ರತಿವರ್ಷದಂತೆ ಕಡೆ ಕಾರ್ತಿಕ ಸೋಮವಾರದ ನಂತರ ಜರುಗುವ ವೀರಹಬ್ಬ ಡಿ.3 ಮತ್ತ ಡಿ.4ರಂದು ಗ್ರಾಮದ ಮುಖಂಡರು ಆಯೋಜನೆ ಮಾಡಿದ್ದು, ಅದರಂತೆ ಸಂಭ್ರಮ ಸಡಗರದಿಂದ ನರವೇರಿತು.
ಬನ್ನೂರು ಹೆಗ್ಗೆರೆಯಿಂದ ಮಂಗಳವಾರ ಸಂಜೆ ಮಜ್ಜನದ ಗಂಗೆ ತಂದು ಪೂಜೆಗಳನ್ನು ಕಟ್ಟಲಾಯಿತು. ಬುಧವಾರ ಮುಂಜಾನೆ ಪೂಜೆಗಳನ್ನು ಹೂ ಹೊಂಬಾಳೆಯಿಂದ ಅಲಂಕರಿಸಿ ಬಾಯಿಬೀಗ ಇರುವವರು ಮಡಿವಂತಿಕೆಯಿಂದ ಒಪ್ಪತ್ತು ಇದ್ದು ಗ್ರಾಮ ದೇವಿಗೆ ಬಾಯಿಬೀಗ ಸೇವೆ ಮಾಡಿ ಹರಕೆ ತೀರಿಸಿದರು.
ಈ ಹಬ್ಬದ ಪ್ರಮುಖ ವಿಷಯವಾದ ವೀರರ ಕುಣಿತ ಅಭಿಮಾನಿಗಳ ಸೂರೆಗೊಂಡಿತು. ಹೌದು ಪ್ರತಿ ವರ್ಷವೂ ನಂಜಾಪುರ ಗ್ರಾಮದ ವೀರರು ಬಂದು ಈ ಸಾಂಪ್ರದಾಯಿಕ ಹಾಗೂ ಸಾಸ್ಕೃತಿಕ ಕಾರ್ಯವನ್ನು ನಡೆಸಿಕೊಡುತ್ತಾರೆ. ಅದರಂತೆ ಪ್ರತಿ ವರ್ಷವರು ಅವರಿಗೆ ಸಂಭಾವನೆ ಕೊಡುವ ಮೂಲಕ ಆಮಂತ್ರಣ ನೀಡಿ ಕರೆಯಲಾಗುತ್ತದೆ.
ಬೀಡನಹಳ್ಳಿ ಗ್ರಾಮದ ಮುಖಂಡರ ಆಹ್ವಾನವನ್ನು ಸ್ವೀಕರಿಸಿ ಈ ಹಬ್ಬಕ್ಕೆ ಕಳಸಪ್ರಾಯವಾದ ವೀರರ ಕುಣಿತವನ್ನು ಮಾಡುವ ಮೂಲಕ ಹಬ್ಬಕ್ಕೆ ಮೆರುಗನ್ನು ನೀಡುತ್ತ ಬಂದಿದ್ದಾರೆ. ಅದರಂತೆ ಮಂಗಳವಾರ ರಾತ್ರಿಯಿಂದ ಬುಧವಾರ ಮುಂಜಾನೆ ವರೆಗೂ ತಮ್ಮ ವೀರರ ಪ್ರದರ್ಶನವನ್ನು ಸಾಂಸ್ಕೃತಿಕವಾಗಿ ತೋರಿಸಿ ಹಾಡು ಕುಣಿತದೊಂದಿಗೆ ಮನರಂಜನೆ ಜತೆಗೆ ಭಕ್ತಿಯನ್ನು ಸಾರುವ ಕೈಂಕರ್ಯವನ್ನು ನೆರವೇರಿಸಿದರು.
ಇನ್ನು ಗ್ರಾಮದಲ್ಲಿ ಎರಡು ದಿನಗಳು ಜರುಗಿದ ಈ ಹಬ್ಬಕ್ಕೆ ಗ್ರಾಮಸ್ಥರು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ನೂರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದೆ. ಜತೆಗೆ ನಯನಮನೋಹರವಾದ ವೀರರ ಕುಣಿತವನ್ನು ರಾತ್ರಿ ಪೂರ್ತಿ ಕಣ್ತುಂಬಿಕೊಂಡರು. ಬುಧವಾರ ಬೆಳಗ್ಗೆ ಗ್ರಾಮದ ಪ್ರತಿ ಮನೆಯ ಹೆಂಗಳೆಯದರು ತಂಬಿಟ್ಟಿನ ಆರತಿಯೊಂದಿಗೆ ಬಂದು ಮಾರಮ್ಮ ದೇವಿಗೆ ಸಾಮೂಹಿಕವಾಗಿ ಪೂಜೆ ನೆರವೇರಿಸುವ ಮೂಲಕ ಹಬ್ಬ ಪೂರ್ಣಗೊಳಿಸಿದರು.

Related
You Might Also Like
ನಾನು ಕಾದು ಕುಳಿತಿದ್ದರೂ ಬಸ್ ನಿಲ್ಲಿಸಿಲ್ಲ – ಚಾಲಕ, ಕಂಡಕ್ಟರ್ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತಾಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣದಲ್ಲಿ ನಿಲ್ಲಿಸದೆ ಹೋಗಿದೆ. ಹೀಗಾಗಿ ನನಗೆ ಸರಿಯಾದ ಸಮಯಕ್ಕೆ ತಲುಪಬೇಕಾದ ಸ್ಥಳಕ್ಕೆ ತಲುಪಲು ಸಾಧ್ಯವಾಗಿಲ್ಲ. ಆದ್ದರಿಂದ ಒಂದು ತಿಂಗಳ...
ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ
ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಬೇಡಿಕೆಗೆ ಮಣಿದಿರುವ ಸಹಕಾರ ಇಲಾಖೆಯು ಏಳನೇ ವೇತನ ಆಯೋಗದ ವರದಿ ಪ್ರಕಾರ...
KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್
ನ್ಯೂಡೆಲ್ಲಿ: ಬಸ್ ಕಾರ್ಯಾಚರಣೆಗಳ ಮೇಲಿನ KSRTCಯ ಏಕಸ್ವಾಮ್ಯವನ್ನು ಕಿತ್ತು ಹಾಕಿ, ಕರ್ನಾಟಕ ಸರ್ಕಾರ 2003ರಲ್ಲಿ ಜಾರಿಗೆ ತಂದಿದ್ದ ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಸಂಬಂಧ...
ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ
ಬೆಂಗಳೂರು: 100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ “ಸ್ಮಶಾನಕ್ಕೆಂದು ಮೀಸಲಿಟ್ಟಿರುವ ಸರ್ಕಾರಿ ಸ್ವತ್ತನ್ನು ಪ್ರಭಾವೀ ವ್ಯಕ್ತಿಯೊಬ್ಬರ ಖಾಸಗಿ ಬಡಾವಣೆಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಸರ್ಕಾರಿ ಅಧಿಕಾರಿ...
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್
ಮೈಸೂರು: ಪ್ರತಿಭಾನ್ವಿತ ಆಟಗಾರರಿಗೆ ಗುರುತಿಸಿ ಕೇಂದ್ರ ಸರ್ಕಾರ ಅರ್ಜುನ್ ಪ್ರಶಸ್ತಿಯನ್ನು ನೀಡುತ್ತದೆ ಅದೇ ರೀತಿ ರಾಜ್ಯ ಸರ್ಕಾರ ಕೂಡ ಏಕಲವ್ಯ ಪ್ರಶಸ್ತಿಯನ್ನು ನಿಲ್ಲಿಸಿರುವುದನ್ನು ಮುಂದುವರಿಸಲಿ ಎಂದು ಅರ್ಜುನ್...
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್ ಬರೆ ಗ್ಯಾರಂಟಿ
ಬೆಂಗಳೂರು: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆಗೆ ಸಂಪರ್ಕ ಕಲ್ಪಿಸುತ್ತಿದ್ದ ದಾರಿಯನ್ನು ಬಿಡದಿಯಿಂದ ಮುಂದೆ ಬುಧವಾರದಿಂದ ದಿಢೀರ್ ಮುಚ್ಚಿದ್ದು ಇದರಿಂದ ಸರ್ವಿಸ್ ರಸ್ತೆಗೆ ಹೋಗಬಹುದೆಂದು ಬರುವ ವಾಹನಗಳ ಸವಾರರು...
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು
ಬಿಡದಿ: ಬೆಂಗಳೂರಿನಿಂದ ರಾಮನಗರಕ್ಕೆ ಹೊತ್ತಿದ್ದ ಸ್ಕಾರ್ಪಿಯೋ ಕಾರೊಂದು ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಘಟನೆ ಬಿಡದಿ ಸಂಮೀಪ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು...
KSRTC ಕನಕಪುರ ಬಸ್ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್ ಆರೋಪ
ಕನಕಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕನಕಪುರ ಬಸ್ ನಿಲ್ದಾಣದಲ್ಲಿ ಪ್ರಸ್ತುತ ಸಂಚಾರ ನಿಯಂತ್ರಕರಾಗಿರುವ ಗೋಪಾಲಯ್ಯ ನಿರ್ವಾಹಕರಿಂದ 10-10 ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಇದು ವಿಡಿಯೋದಲ್ಲಿ...
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ
ಬೆಂ.ಗ್ರಾ: ನೊಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳು ಕರ್ನಾಟಕ ಲೇವಾದೇವಿ ಅಧಿನಿಯಮದಡಿ ಸಾರ್ವಜನಿಕರ ಭದ್ರತೆ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇಕಡಾ 14 ರಷ್ಟು ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ...