NEWSನಮ್ಮಜಿಲ್ಲೆ

ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್‌ಗೆ ಸಲಹೆ ಕೊಡಿ: ಡಾ. ಹರೀಶ್ ಕುಮಾರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಕರಡು ಆಯವ್ಯಯದ ತಯಾರಿಕೆಯ ಸಿದ್ಧತೆ ಕಾರ್ಯ ಪ್ರಗತಿಯಲ್ಲಿದ್ದು, ಅದಕ್ಕಾಗಿ ಅತ್ಯಮೂಲ್ಯವಾದ ಸಲಹೆಗಳನ್ನು ನೀಡುವ ಸಲುವಾಗಿ ನಾಗರೀಕರಿಗೆ 10ನೇ ಫೆಬ್ರವರಿ 2025 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ. ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.

ನಗರದ ಎಲ್ಲ ನಾಗರೀಕರು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು(RWAs) ಹಾಗೂ ಸಂಘ-ಸಂಸ್ಥೆಗಳು ತಮ್ಮ ಸಲಹೆ/ಸೂಚನೆಗಳನ್ನು ಪಾಲಿಕೆಗೆ ಸಲ್ಲಿಸಲು ಅನುಕೂಲವಾಗುವಂತೆ ಪಾಲಿಕೆ ಕೇಂದ್ರ ಕಛೇರಿಯ ಮುಖ್ಯ ದ್ವಾರದ ಬಳಿ ಸಲಹಾ ಪೆಟ್ಟಿಗೆ(ಬಾಕ್ಸ್) ಅನ್ನು ಇರಿಸಿದ್ದು, ಸದರಿ ಸಲಹಾ ಪೆಟ್ಟಿಗೆಯ ಮೂಲಕ ಸಲಹೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ.

ಮುಂದುವರಿದು, 2025-26ನೇ ಸಾಲಿನ ಕರಡು ಆಯವ್ಯಯಕ್ಕಾಗಿ ನಗರದ ಎಲ್ಲಾ ನಾಗರೀಕರು, ಸಂಘ-ಸಂಸ್ಥೆಗಳು ತಮ್ಮ ಅತ್ಯಮೂಲ್ಯವಾದ ಸಲಹೆ/ಸೂಚನೆಗಳನ್ನು ಇ-ಮೇಲ್ ಆದ [email protected] ಮೂಲಕವೂ ಸಲ್ಲಿಸಬಹುದಾಗಿದೆ.

ಈ ನಿಟ್ಟಿನಲ್ಲಿ ಬಿಬಿಎಂಪಿ ಆಯವ್ಯಯಕ್ಕಾಗಿ ಸಲಹೆಗಳನ್ನು ನೀಡಲು ಬಯಸುವವರು 10.02.2025ರ ಒಳಗಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಂಡು ನಾಗರೀಕರು/ಸಂಘ-ಸಂಸ್ಥೆಗಳು ತಮ್ಮ ಅತ್ಯಮೂಲ್ಯವಾದ ಸಲಹೆ/ಸೂಚನೆಗಳನ್ನು ನೀಡಲು ತಿಳಿಯಪಡಿಸಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ