NEWSನಮ್ಮಜಿಲ್ಲೆ

ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯ ಅಕ್ರಮ ಒತ್ತುವರಿ ತೆರವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಾಗಿದ್ದು, ಇಂದು ಚಿನ್ನಪ್ಪನಹಳ್ಳಿ ಹಾಗೂ ಸಾದರಮಂಗಳ ಸೇರಿದಂತೆ ಒಟ್ಟು 4 ಒತ್ತುವರಿಗಳ ತೆರವು ಮಾಡಲಾಗಿದೆ.

ದೊಡ್ಡಾನೆಕುಂದಿ ವಾರ್ಡ್‌ನ ಚಿನ್ನಪ್ಪನಹಳ್ಳಿ ವ್ಯಾಪ್ತಿಯಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ 3 ಕಟ್ಟಡ (ಜಿ + 4, ಜಿ + 3 ಹಾಗೂ ಜಿ + 2 ಕಟ್ಟಡ)ಗಳನ್ನು ನೆಲಸಮಗೊಳಿಸುವ ಕಾರ್ಯ ಪ್ರಗತಿಯಲ್ಲಿದ್ದು, ಜಿ + 2 ಕಟ್ಟಡವನ್ನು ಈಗಾಗಲೇ ನೆಲಸಮಗೊಳಿಸಲಾಗಿದೆ. ಇನ್ನೆರಡು ಕಟ್ಟಡಗಳ ತೆರವು ಕಾರ್ಯಾಚರಣೆಯು ಪ್ರಗತಿಯಲ್ಲಿದ್ದು, ನಾಳೆ ಬಾಕಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಹೂಡಿ ವಾರ್ಡ್ ಸಾದರ ಮಂಗಳ ವ್ಯಾಪ್ತಿಯಲ್ಲಿ ರಾಜಕಾಲುವೆ ಭಾಗದಲ್ಲಿ ಒತ್ತುವರಿ ಮಾಡಿಕೊಂಡಿದ್ದ ಸುಮಾರು 8 ಮೀಟರ್ ಉದ್ದದ ಕಾಂಪೌಂಡ್ ಗೋಡೆಯನ್ನು ಇಂದು ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.

ತೆರವು ಕಾರ್ಯಾಚರಣೆಯ ವೇಳೆ 1 ಹಿಟಾಚಿ, 1 ಜೆಸಿಬಿ, 1 ಗ್ಯಾಸ್ ಕಟರ್, 1 ಟ್ರ್ಯಾಕ್ಟರ್, 10 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಸ್ಥಳದಲ್ಲಿ ಪಾಲಿಕೆಯ ಇಂಜಿನಿಯರ್‌ಗಳು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ವಿವರ: ಮಹದೇವಪುರ ವಲಯಕ್ಕೆ ಸಂಬಂಧಿಸಿದಂತೆ ತಹಲ್ ವರೆಗೆ 289 ಸರ್ವೇ ನಂಬರ್‌ಗಳಲ್ಲಿ ಒತ್ತುವರಿ ಇರುವುದು ಕಂಡುಬಂದಿದೆ. ಇವುಗಲ್ಲಿ ಇಲ್ಲಿಯವರೆಗೆ 81 ಸಂಖ್ಯೆಯ ಸರ್ವೇ ನಂಬರ್‌ಗಳಲ್ಲಿ ಎಲ್ಲ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಅದರಲ್ಲಿ 157 ಸರ್ವೇ ನಂಬರ್‌ಗಳನ್ನು ಭೂ ಮಾಪನ ಮಾಡಲಾಗಿದ್ದು,

28 ಆದೇಶಗಳನ್ನು ಹೊರಡಿಸಲಾಗಿದೆ. ಈ ಪೈಕಿ ಸಂಬಂಧ ಪಟ್ಟ ಪಾಲಿಕೆ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಅದರಂತೆ ಇಂದು ಚಿನ್ನಪ್ಪನಹಳ್ಳಿ ಹಾಗೂ ಸಾದರಮಂಗಳದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು