NEWSನಮ್ಮಜಿಲ್ಲೆನಮ್ಮರಾಜ್ಯ

ಬಿಬಿಎಂಪಿ ಶಾಲಾ ಶಿಕ್ಷಕರಿಗೆ ವಿದೇಶ ಪ್ರವಾಸ ಯೋಗ !

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಶಾಲಾ ಶಿಕ್ಷಕರು ಇನ್ನು ಬಿಬಿಎಂಪಿ ಪ್ರಾಯೋಜನೆಯಲ್ಲಿ ವಿದೇಶ ಪ್ರವಾಸ ಮಾಡಬಹುದು. ಸುಮ್ಮನೇ ಅಲ್ಲ. ಶಾಲೆಗೆ ನೂರಕ್ಕೆ ನೂರರಷ್ಟು ಫಲಿತಾಂಶ ಬಂದರೆ ಮಾತ್ರ!

ಶಾಲಾ ಫಲಿತಾಂಶವನ್ನು ವೃದ್ಧಿಸಲು ಈ ವಿನೂತನ ಯೋಜನೆ ಕೈಗೊಳ್ಳಲಾಗಿದೆ. ಬಳ್ಳಾರಿಯಲ್ಲಿಯೂ ಹಿಂದೆ ಇದೇ ರೀತಿಯ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಘೋಷಣೆಯ ಬಳಿಕ 70ರಿಂದ 80 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿದ್ದವು. ಈ ಪರಿಣಾಮ ನೋಡಿ ಇಲೂ ಯೋಜನೆ ವಿಸ್ತರಿಸಲು ಚಿಂತಿಸಲಾಗಿದೆ.

ಶೇಕಡ ನೂರು ಫಲಿತಾಂಶ ಪಡೆದ ಶಾಲಾ ಶಿಕ್ಷಕರಿಗೆ ಶೈಕ್ಷಣಿಕ ಪ್ರವಾಸದಂತಹ ಕೊಡುಗೆಗಳನ್ನು ನೀಡುವ ಮೂಲಕ ಶೈಕ್ಷಣಿಕತೆಗೆ ಮತ್ತಷ್ಟು ಉತ್ತೇಜನ ನೀಡಲು ಪಾಲಿಕೆ ಮುಂದಾಗಿದ್ದು, ವಿನೂತನ ಯೋಜನೆಯ ರೂಪುರೇಷೆ ರೂಪಿಸಲಾಗುತ್ತಿದೆ.

ಈ ಯೋಜನೆಗೆ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿ ಉಪಯೋಗಿಸಿಕೊಳ್ಳಲು ಚಿಂತನೆ ನಡೆದಿದ್ದು, ಮೇಲಧಿಕಾರಿಗಳ ಅನುಮತಿ ಸಿಕ್ಕ ಮೇಲೆ ಪ್ರಕಟಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಆದರೆ ಈ ಯೋಜನೆಗೂ ಮುನ್ನ ಬಿಬಿಎಂಪಿ ಶಾಲೆಗಳಲ್ಲಿನ ಮೂಲಸೌಕರ್ಯ ಉನ್ನತೀಕರಣ, ಪಾತಾಳಕ್ಕಿಳಿದಿರುವ ಹಾಜರಾತಿ ನೋಂದಣಿ ಹೆಚ್ಚಳ, ಮೂಲಭೂತ ಅಗತ್ಯ ಸೌಕರ್ಯಗಳ ಅಳವಡಿಕೆ ಆಗಬೇಕು ಎಂದು ಶಿಕ್ಷಕರು ಹೇಳುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ