NEWSನಮ್ಮಜಿಲ್ಲೆನಮ್ಮರಾಜ್ಯ

ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಧರೆಗುರುಳಿದ ಮರ, ವಿದ್ಯುತ್‌ ಕಂಬಗಳು

ಮೂರು ದಿನಗಳ ಕಾಲ ಎಲ್ಲೆಲ್ಲಿ ಮಳೆ ಬರಲಿದೆ?

ವಿಜಯಪಥ ಸಮಗ್ರ ಸುದ್ದಿ

ಬೀದರ್: ತಡರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಜಿಲ್ಲೆಯಾದ್ಯಂತ ಅವಾಂತರ ಸೃಷ್ಟಿಯಾಗಿದ್ದು, ಬೃಹತ್‌ ಗಾತ್ರದ ಮರಗಳು ನೆಲ ಕಚ್ಚಿವೆ, ವಿದ್ಯುತ್‌ ತಂತಿಗಳು ಧರೆಗುರುಳಿದ ಪರಿಣಾಮ ಹಲವೆಡೆ ಮನೆಗಳ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.

ಬೀದರ್ ನಗರ, ಔರಾದ್, ಕಮಲನಗರ ಸೇರಿ ಜಿಲ್ಲೆಯ ಹಲವೆಡೆ ಭಾರಿ ಮಳೆ ಸುರಿದಿದೆ. ಔರಾದ್ ಪಟ್ಟಣ ಸೇರಿ ಸಂತಪುರ, ಚಿಂತಾಕಿ, ವಡಗಾವ್ ಹೋಬಳಿ ಮತ್ತು ಮಲ‌ನಗರ ತಾಲೂಕಿ‌ನ ಮದನೂರ, ಖತಗಾಂವ, ಮೂರ್ಕಿ ಸೇರಿ ಹಲವೆಡೆ‌ ಬಿರುಗಾಳಿ ಸಹಿತ ಮಳೆಯಾಗಿದ್ದು ಅವಾಂತರ ಸೃಷ್ಟಿಯಾಗಿದೆ.

ಬಿರುಗಾಳಿ ಸಹಿತ ಸುರಿದ ಮಳೆಗೆ ಕಮಲನಗರದ ರೈಲ್ವೆ ನಿಲ್ದಾಣದಲ್ಲಿ ಬೃಹತ್ ಮರ ನೆಲಕ್ಕುರುಳಿದ್ದು ಮದನೂರ ಗ್ರಾಮದಲ್ಲಿ ವಿದ್ಯುತ್ ತಂತಿಗಳು ಹರಿದು ಬಿದ್ದಿದ್ದರಿಂದ ಹಲವು ಗಂಟೆಗಳ ಕಾಲ ವಿದ್ಯುತ್ ಸಂಪರ್ಕ‌ ಕಡಿತಗೊಂಡಿದೆ. ಅಲ್ಲದೇ ಕೆಲ ಮನೆಯ ಸೀಟುಗಳು ಹಾರಿ ದಿನಬಳಕೆ ವಸ್ತುಗಳೆಲ್ಲ ಹಾನಿಯಾಗಿವೆ. ಸದ್ಯ ಬೀದರ್‌ನಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದೆ.

ಎಲ್ಲೆಲ್ಲಿ ಮಳೆ ಮುನ್ಸೂಚನೆ: ಏ.13 (ಇಂದು): ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ದಾವಣಗೆರ , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ತುಮಕೂರು, ಮಂಡ್ಯ.

ಏ.14ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್ ಗದಗ, ಕಲ್ಬುರ್ಗಿ ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ.

ಏ.15ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಚಿತ್ರದುರ್ಗಾ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ