NEWSಕೃಷಿನಮ್ಮಜಿಲ್ಲೆ

ಬರ ಘೋಷಿಸದಿದ್ದರೆ ಪೊನ್ನಂಪೇಟೆ ತಾಲೂಕು ಬಂದ್ ಅಧಿಕಾರಿಗಳಿಗೆ ರೈತರ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡದಿದ್ದರೆ ಪೊನ್ನಂಪೇಟೆ ತಾಲೂಕು ಬಂದ್ ಮಾಡಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ಬರ ಪರಿಹಾರ ಕುರಿತು ಪೊನ್ನಂಪೇಟೆ ತಾಲೂಕು ರೈತರೊಂದಿಗೆ ರೈತರ ಅಹವಾಲು ಕೇಳುವ ಸಂಬಂಧ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಎನ್. ಎಸ್ ಪ್ರಶಾಂತ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ರೈತರು ಎಚ್ಚರಿಕೆ ನೀಡಿದ್ದಾರೆ.

ಪೊನ್ನಂಪೇಟೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಇದುವರೆಗೆ ಘೋಷಣೆ ಮಾಡಿಲ್ಲ, ವರದಿಯಂತೆ ಶೇಕಡ 60ರಷ್ಟು ಮಳೆ ಪ್ರಮಾಣ ಈ ಬಾರಿ ಕಡಿಮೆಯಾಗಿದೆ. ಶೇಕಡ 50ರಷ್ಟು ಮಳೆ ಇಲ್ಲದಿದ್ದಾಗ ಅದು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡುತ್ತದೆ. ಆದರೆ ಪೊನ್ನಂಪೇಟೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಇದುವರೆಗೆ ಘೋಷಣೆ ಮಾಡಿಲ್ಲ. ಇದರಿಂದ ರೈತರು ತುಂಬಾ ನಷ್ಟ ಅನುಭವಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ರೈತ ಸಂಘದ ಪದಾಧಿಕಾರಿಗಳು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ತಹಶೀಲ್ದಾರ್ ಎನ್. ಎಸ್ ಪ್ರಶಾಂತ್ ಮಾತನಾಡಿ ಸರ್ಕಾರ ನಮ್ಮಿಂದ ವರದಿಯನ್ನು ಪಡೆದಿಲ್ಲ ಕೊಡಗಿನ ಮೂರು ತಾಲೂಕನ್ನು ಮಾತ್ರ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ. ನಾವು ಯಾವುದೇ ವರದಿಯನ್ನು ನೀಡಿಲ್ಲ ಇದೀಗ ಸಂಪೂರ್ಣ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಮಾಹಿತಿ ನೀಡಿದರು. ಇದೇ ಸಂದರ್ಭ ಸಭೆಯಲ್ಲಿ ಕಾಫಿ ಬೋರ್ಡಿನ ಉಪ ನಿರ್ದೇಶಕರು ಶ್ರೀದೇವಿ ಉಪಸ್ಥಿತರಿದ್ದು ಮಳೆಯ ಕೊರತೆ ಪ್ರಮಾಣ ಅಂಕಿ ಅಂಶಗಳನ್ನು ಸಭೆಯ ಮುಂದಿಟ್ಟರು.

ಕೃಷಿ ಇಲಾಖೆಯ ಎ. ಡಿ ಎಲ್ ಆರ್ ಶಿವಮೂರ್ತಿ, ಕೃಷಿ ಅಧಿಕಾರಿಗಳಾದ ಶ್ರೀಮತಿ ರೀನ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿ ಶ್ರೀಮತಿ ದೀನಾ, ಪೊನ್ನಂಪೇಟೆ ಕಂದಾಯ ಅಧಿಕಾರಿಗಳಾದ ಸುಧೀಂದ್ರ ಮುಂತಾದವರು ಉಪಸ್ಥಿತರಿದ್ದು ಮಾಹಿತಿ ನೀಡಿದರು.

ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮನುಸೋಮಯ್ಯ, ಪೊನ್ನಂಪೇಟೆ ತಾಲೂಕಿನಲ್ಲಿ ಮಳೆ ಇಲ್ಲದೆ ಗದ್ದೆಗಳೆಲ್ಲವೂ ಒಣಗುತ್ತಿದೆ ಭತ್ತ ನಾಟಿ ಮಾಡಿ ಸಂಪೂರ್ಣ ಒಣಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ, ಕಾಫಿ ತೋಟದಲ್ಲಿ ಕೂಡ ಕಾಫಿ, ಒಳ್ಳೆ ಮೆಣಸು ಸಂಪೂರ್ಣ ನಾಶವಾಗುವ ಹಂತದಲ್ಲಿದೆ.

ನೀರಿಗೆ ತೊಂದರೆಯಾಗೋ ಎಲ್ಲ ಲಕ್ಷಣಗಳು ಕಂಡುಬರುತ್ತವೆ. ಇಷ್ಟೆಲ್ಲ ಆದರೂ ಕೂಡ ಕೃಷಿ ಇಲಾಖೆ ಯಾವುದೇ ಮಾಹಿತಿಗಳನ್ನು ಸರ್ಕಾರಕ್ಕೆ ನೀಡಿಲ್ಲ. ರೈತರೆಲ್ಲ ಕಂಗಲಾಗಿದ್ದಾರೆ ಹತ್ತು ದಿನದೊಳಗೆ ಬರಪೀಡಿತ ಪ್ರದೇಶವೆಂದು ಘೋಷಿಸಿ ಪರಿಹಾರ ನೀಡದಿದ್ದರೆ ತೀವ್ರ ಸ್ವರೂಪದ ಪ್ರತಿಭಟನೆ ಹಾಗೂ ಪೊನ್ನಂಪೇಟೆ ತಾಲೂಕು ಬಂದ್ ನಡೆಸುವುದಾಗಿ ಎಚ್ಚರಿಸಿದರು.

ಸಭೆಯಲ್ಲಿ ಸುಜಯ್, ಅಜ್ಜಮಾಡ ಚಂಗಪ್ಪ ಜಿಲ್ಲಾ ಸಂಚಾಲಕರಾದ ಪುಚ್ಚಿಮಾಡ ಸುಭಾಷ್, ಎಂ.ಪ್ರವೀಣ್, ಎ.ಮಂಜು, ಭವಿಕುಮಾರ್, ರೈತ ಸಂಘದ ಹೋಬಳ್ಳಿ ಅಧ್ಯಕ್ಷರು ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು