CrimeNEWS

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ : ಐವರ ಬಂಧನ..!

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಡ್ರಾಪ್ ಕೇಳಿದ ಬಾಲಕಿಯೊಬ್ಬಳ್ಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಐವರು ಕಾಮುಕ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬುಧವಾರ (ಜು.10) ಈ ಘಟನೆ ಜರುಗಿದ್ದು, ಮತ್ತೋರ್ವ ಬಾಲಕಿ‌ ಮೇಲೂ ಅತ್ಯಾಚಾರಕ್ಕೆ ಯತ್ನಿಸಿದ್ದರು ಈ ಆರೋಪಿಗಳು ಎಂದು ತಿಳಿದು ಬಂದಿದೆ.

ಜೂನ್ 9 ರಂದು ಮೂವರು ಸ್ನೇಹಿತರ ಜತೆ ರಸ್ತೆಯಲ್ಲಿ ಬಾಲಕಿಯರು ನಡೆದು ಹೋಗುತ್ತಿದ್ದರು. ಈ ವೇಳೆ ದಾರಿಯಲ್ಲಿ‌ ಬಂದ ಅಪರಿಚಿತ ಕಾರನ್ನು ಹತ್ತಿ ನಾಗರಹೊಳೆಗೆ ಡ್ರಾಪ್‌ ನೀಡುವಂತೆ ವಿನಂತಿಸಿದ್ದರು ಎನ್ನಲಾಗಿದೆ.

ಇನ್ನು ಮಾರುತಿ 800 ಕಾರಿನಲ್ಲಿ ನಾಗರಹೊಳೆ‌ ಕಡೆ ಬಾಲಕಿಯರು ತೆರಳಿದ್ದು, ಈ ನಡುವೆ ದಾರಿ‌ ಮಧ್ಯೆ ಕಾಫಿ ತೋಟವೊಂದಕ್ಕೆ ಒಬ್ಬ ಬಾಲಕಿಯನ್ನು ಕರೆದುಕೊಂಡು ಹೋಗಿ ಆಕೆ ಮೇಲೆ ನವೀಂದ್ರ, ಅಕ್ಷಯ್​ ಎಂಬುವವರು ಅತ್ಯಾಚಾರ ಎಸಗಿದ್ದಾರೆ.

ಅಲ್ಲದೆ ಮತ್ತೋರ್ವ ಬಾಲಕಿ‌ ಮೇಲೆ ರಾಹುಲ್, ಮನು, ಸಂದೀಪ್​​ ಎಂಬುವವರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಜಾಗೃತರಾದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನಾ‌ ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂತ್ರಸ್ತ ಬಾಲಕಿಯರಿಂದ ಕುಟ್ಟ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದ್ದು, ಆತ್ಯಾಚಾರಿಗಳ ಹೆಡೆಮುರಿಕಟ್ಟಲು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಇನ್ನು ಈ ಅತ್ಯಾಚಾರಿ ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದು ಸತ್ಯ ಎಂದಾದರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಅವರ ರೀತಿ ಬುಲ್ಡೇಜರ್‌ನಿಂದ ಅತ್ಯಾಚಾರಿಗಳ ಮನೆಗಳನ್ನು ನೆಲಸಮ ಮಾಡಬೇಕು ಎಂಬ ಆಕ್ರೋಶ ಎಲ್ಲೆಡೆ ಕೇಳಿ ಬರುತ್ತಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ