NEWSಆರೋಗ್ಯನಮ್ಮರಾಜ್ಯ

ಬೆಳಗಾವಿ: ಉಪವಾಸ ಸತ್ಯಾಗ್ರಹ ನಿರತ ಸಾರಿಗೆ ಮಹಿಳಾ ಸಿಬ್ಬಂದಿ ಅಸ್ವಸ್ಥ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣ ಸೌಧದ ಬಳಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಉಪವಾಸವಿದ್ದ ಸಾರಿಗೆಯ ಮಹಿಳಾ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡು ಆಸ್ಪತ್ರಗೆ ದಾಖಲಾಗಿರುವ ಘಟನೆ ಇಂದು ರಾತ್ರಿ 9ಗಂಟೆ ಸುಮಾರಿಗೆ ನಡೆದಿದೆ.

ಅಸ್ವಸ್ಥಗೊಂಡ ಮಹಿಳಾ ಸಿಬ್ಬಂದಿಯನ್ನು ನಗರದ ಜಿಲ್ಲಾಸ್ಪತ್ರೆಗೆ 108 ಆಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗಿ ದಾಖಲು ಮಾಡಲಾಗಿದ್ದು, ಅವರ ಉಸಿರಾಟಕ್ಕೆ ಆಮ್ಲಜನಕ (ಆಕ್ಸಿಜನ್‌) ನೀಡಲಾಗಿದೆ.

ಇತ್ತ ನಿನ್ನೆಯಿಂದ ಉಪವಾಸ ಕುಳಿತಿರುವ ನೌಕರರಲ್ಲಿ ಇನ್ನು ಒಂದಿಬ್ಬರು ನೌಕರರ ಆರೋಗ್ಯದಲ್ಲೂ ಏರುಪೇರಾಗುತ್ತಿದೆ ಎಂದು ಪ್ರತಿಭಟನಾ ನಿರತ ನೌಕರರು ತಿಳಿಸಿದ್ದಾರೆ.

ಇನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿಯ ಬಗ್ಗೆ ವೈದ್ಯರು ನಿಗಾವಹಿಸುತ್ತಿದ್ದು, ಅವರ ಆರೋಗ್ಯದ ಬಗ್ಗೆ ಇನ್ನೂ ಏನು ಹೇಳಿಲ್ಲ ಎಂದು ನೌಕರರು ತಿಳಿಸಿದ್ದಾರೆ.

ನಮ್ಮ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಮೀನಮೇಷ ಎಣಿಸುತ್ತಿರುವುದರಿಂದ ನೂರಾರು ಕಿಲೋ ಮೀಟರ್‌ನಲ್ಲಿ ತಮ್ಮ ಸಂಸಾರವನ್ನು ಬಿಟ್ಟು ಹೋರಾಟಕ್ಕೆ ಧುಮುಕಿರುವ ಸಿಬ್ಬಂದಿ ಪ್ರಾಣದ ಹಂಗುತೊರೆದು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ