NEWSನಮ್ಮರಾಜ್ಯರಾಜಕೀಯ

ಬೆಳಗಾವಿ ಗಡಿ ವಿವಾದ: ಸರ್ವಪಕ್ಷ ಸಭೆಗೆ AAP ಆಗ್ರಹ, ಭಾಗವಹಿಸಲು ಅವಕಾಶಕ್ಕೆ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕ ಕೂಡ ಸರ್ವಪಕ್ಷಗಳ ಸಭೆ ನಡೆಸಿ ದಿಟ್ಟ ನಿಲುವು ತೆಗೆದುಕೊಳ್ಳಬೇಕೆಂದು ಆಮ್‌ ಆದ್ಮಿ ಪಾರ್ಟಿ ಆಗ್ರಹಿಸಿದ್ದು, ಸಭೆಯಲ್ಲಿ ಭಾಗವಹಿಸಲು ಆಮ್‌ ಆದ್ಮಿ ಪಾರ್ಟಿ ಪ್ರತಿನಿಧಿಗೂ ಅವಕಾಶ ನೀಡಬೇಕೆಂದು ಕೋರಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದ ಹಿತಾಸಕ್ತಿ ಕಾಪಾಡಲು ಆಮ್‌ ಆದ್ಮಿ ಪಾರ್ಟಿ ಬದ್ಧವಾಗಿದೆ ಎಂದು ತಿಳಿಸಿರುವ ಪೃಥ್ವಿ ರೆಡ್ಡಿ, ನಮ್ಮ ರಾಜ್ಯದ ಹಿತಾಸಕ್ತಿಗೆ ಧಕ್ಕೆ ಉಂಟುಮಾಡುವ ಪ್ರಯತ್ನಗಳ ವಿರುದ್ಧ ಎಲ್ಲ ಪಕ್ಷಗಳೂ ಒಗ್ಗೂಡಿ ಹೋರಾಡಬೇಕಾದ ಸಮಯ ಬಂದಿದೆ. ಈ ವಿಷಯದಲ್ಲಿ ನಮ್ಮ ಆಮ್‌ ಆದ್ಮಿ ಪಾರ್ಟಿಯು ರಾಜ್ಯದ ಹಿತಾಸಕ್ತಿ ಕಾಪಾಡಲು ಬದ್ಧವಾಗಿದ್ದು, ಸರ್ವಪಕ್ಷ ಸಭೆಗೆ ರಾಜ್ಯ ಸರ್ಕಾರವು ಆಮ್‌ ಆದ್ಮಿ ಪಾರ್ಟಿಯನ್ನೂ ಆಹ್ವಾನಿಸಬೇಕು.

ಭಾರತದ ಚುನಾವಣಾ ಆಯೋಗದ ಕಾನೂನಿನ ಪ್ರಕಾರ ಆಮ್‌ ಆದ್ಮಿ ಪಾರ್ಟಿಗೆ ಇನ್ನೂ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಸಿಗದಿದ್ದರೂ, ಪ್ರಸ್ತುತ ವಸ್ತುಸ್ಥಿತಿಯ ಪ್ರಕಾರ ಆಮ್‌ ಆದ್ಮಿ ಪಾರ್ಟಿಯನ್ನು ರಾಷ್ಟ್ರೀಯ ಪಕ್ಷವೆಂದು ಪರಿಗಣಿಸಿ ಸಭೆಗೆ ಕರೆಯಬಹುದು ಎಂದು ಪತ್ರದಲ್ಲಿ ಹೇಳಿದ್ದಾರೆ.

ನಮ್ಮ ರಾಜ್ಯದ ಹಿತಾಸಕ್ತಿ ಕಾಪಾಡಲು ಸದಾ ಬದ್ಧವಾಗಿರುವ ಅನುಭವಿ ಹಾಗೂ ಜ್ಞಾನವುಳ್ಳ ವ್ಯಕ್ತಿಗಳು ಆಮ್‌ ಆದ್ಮಿ ಪಾರ್ಟಿಯಲ್ಲಿ ಇದ್ದಾರೆ. ಉದಾಹರಣೆಗೆ, ಕಳೆದ ಒಂದು ದಶಕದಿಂದ ನೀರುಹಂಚಿಕೆ ವಿವಾದ ಹಾಗೂ ಗಡಿ ವಿವಾದಕ್ಕೆ ಸಂಬಂಧಿಸಿದ ಸರ್ವಪಕ್ಷ ಸಭೆಗಳಲ್ಲಿ ಭಾಗವಹಿಸಿರುವ ಬ್ರಿಜೇಶ್‌ ಕಾಳಪ್ಪ ಅವರು ಇದ್ದಾರೆ.

ಆದ್ದರಿಂದ ಸರ್ವಪಕ್ಷ ಸಭೆಗೆ ನಮ್ಮ ಪಕ್ಷದ ಕೊಡುಗೆಯು ಸತ್ವಯುತವಾಗಿ, ಹೊಸತನವಾಗಿ ಹಾಗೂ ಯೋಗ್ಯವಾಗಿ ಇರುತ್ತದೆ ಎಂದು ಭರವಸೆ ನೀಡುತ್ತಿದ್ದೇನೆ. ರಾಜ್ಯದ ಹಿತಾಸಕ್ತಿಗಾಗಿ ಮುಖ್ಯಮಂತ್ರಿಯವರು ಪರಿಪೂರ್ಣವಾದ ಪ್ರಯತ್ನಗಳನ್ನು ಮಾಡಬೇಕು ಎಂದು ಪೃಥ್ವಿ ರೆಡ್ಡಿ ಪತ್ರದಲ್ಲಿ ಹೇಳಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ