NEWSನಮ್ಮಜಿಲ್ಲೆ

ಬಳ್ಳಾರಿ: ಒತ್ತುವರಿ ಕಾರ್ಯಾಚರಣೆಲಿ ನೆಲೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ – ಎಎಪಿ ಜಿಲ್ಲಾಧ್ಯಕ್ಷ ಮಂಜುನಾಥ್

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ನಗರದ 24ನೇ ವಾರ್ಡ್‌ನ ಗಿರಿನಗರದಲ್ಲಿ ಕಾಲುವೆ ಒತ್ತುವರಿಯಾಗಿದೆ ಎಂದು ತೆರವುಗೊಳಿಸಲು ಅಧಿಕಾರಿಗಳು ಮುಂದಾಗಿದ್ದು, ಅಲ್ಲಿನ ನಿವಾಸಿಗಳು ಬೀದಿಗೆ ಬೀಳುವ ಆತಂಕದಲ್ಲಿದ್ದು, ಅವರಿಗೆ ಮನೆಗಳನ್ನು ತೆರವು ಮಾಡಲು ಐದು ದಿನ ಅವಕಾಶ ಕೊಡಬೇಕು ಎಂದು ಆಮ್ ಆದ್ಮಿ ಪಾರ್ಟಿ ಬಳ್ಳಾರಿ ಜಿಲ್ಲಾಧ್ಯಕ್ಷ ಮಂಜುನಾಥ್ ಅಧಿಕಾರಿಗಳಿಗೆ ಮನವಿ ಮಾಡಿದರು.

ತೆರವು ಕಾರ್ಯಾಚರಣೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಮಂಜುನಾಥ್ ಸ್ಥಳೀಯರ ಕಷ್ಟಗಳನ್ನು ಆಲಿಸಿದರು. ಬಳಿಕ ಮಾತನಾಡಿ, ಅಧಿಕಾರಿಗಳು ಒಂದು ವಾರದ ಮುಂಚೆಯೇ ನೋಟಿಸ್ ನೀಡಿದ್ದಾರೆ. ಆದರೆ, ಇಲ್ಲಿನ ಮುಗ್ದಜನಗಳಿಗೆ ಕಾನೂನಿನ ಅರಿವು ಇಲ್ಲ.

ಈಗ ಅಧಿಕಾರಿಗಳು ತೆರವುಗೊಳಿಸಲು ಬಂದಿದ್ದು, ಜನ ಬೀದಿಗೆ ಬೀಳುವ ಭಯದಲ್ಲಿದ್ದಾರೆ, ಅವರು ಜಾಗವನ್ನು ತೆರವು ಮಾಡುತ್ತಾರೆ. ಆದರೆ, ಇನ್ನು ಐದು ದಿನ ಸಮಯ ಕೊಡಿ ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.

ಜನರು ಜಾಗವನ್ನು ಖಾಲಿ ಮಾಡಲ್ಲ ಎಂದು ಹೇಳುತ್ತಿಲ್ಲ. ಆದರೆ, ಅವರಿಗೆ ಯಾವ ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡುತ್ತಿದ್ದಾರೆ. ಶಾಸಕರು ಜಾಗ ಮಾಡಿಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ, ಅವರು ಸದ್ಯ ಊರಲ್ಲಿಲ್ಲ.

ಹೀಗಾಗಿ ಇವರಿಗೆ ಸಮಸ್ಯೆಯಾಗಿದೆ. ಸರ್ಕಾರ ಮತ್ತು ಜನಪ್ರತಿನಿಧಿಗಳು, ಜಿಲ್ಲಾಡಳಿತ ಕೂಡಲೇ ಮನೆ ಕಳೆದುಕೊಳ್ಳುತ್ತಿರುವ ಬಡಜನರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ