NEWSಸಂಸ್ಕೃತಿ

ಬಸವಣ್ಣನವರ ತತ್ವಾದರ್ಶವನ್ನು ಎಲ್ಲರೂ ಪಾಲಿಸೋಣ

ಹಾಸನ ಜಿಲ್ಲಾ ಪಂಚಾಯಿತಿ ಜಿಲ್ಲಾಧ್ಯಕ್ಷೆ ಶ್ವೇತಾ ದೇವರಾಜ್ ಕರೆ

ವಿಜಯಪಥ ಸಮಗ್ರ ಸುದ್ದಿ

ಹಾಸನ:  ಜಗ ಜ್ಯೋತಿ ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿ ವ್ಯವಸ್ಥೆ ಹಾಗೂ ಸಾಮಾಜಿಕ ಪಿಡುಗುಗಳನ್ನು ತೊಡೆದು ಹಾಕಲು ಶ್ರಮಿಸಿದ ಮಹಾ ದಾರ್ಶನಿಕರು ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತತವಾಗಿದ್ದು ಎಲ್ಲರೂ ಪಾಲಿಸೋಣ  ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ತಿಳಿಸಿದ್ದಾರೆ.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಏರ್ಪಡಿಸಿದ್ದ ಜಗ ಜ್ಯೋತಿ ಬಸವಣ್ಣನವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನವರು ತಮ್ಮ ಚಿಂತನೆ, ವಚನ ಹಾಗೂ ಸಾಹಿತ್ಯಗಳ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿ ಅನೇಕ ಮೂಡನಂಬಿಕೆಗಳನ್ನು ಹೋಗಲಾಡಿಸಿದರು ಎಂದು ಹೇಳಿದರು.

12ನೇ ಶತಮಾನದಲ್ಲಿದ್ದ. ಜಾತಿ ವ್ಯವಸ್ಥೆ, ಲಿಂಗ ತಾರತಮ್ಯದ ವಿರುದ್ಧ ಹೋರಾಡಿ ಎಲ್ಲರೂ ಸಮಾನರು ಎಂದು ಪ್ರತಿಪಾದಿಸಿ ಅದನ್ನು ಆಚರಣೆಗೆ ತಂದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ ಎಂದು ಹೇಳಿದರು.

 ಜಿಲ್ಲಾಧಿಕಾರಿ ಆರ್.ಗಿರೀಶ್ ಬಸವಣ್ಣ ಜಾತಿ ಪದ್ದತಿ, ಮೂಢ ನಂಬಿಕೆಗಳ ವಿರುದ್ಧ ಹೋರಾಡುವ ಜೊತೆಗೆ  ಅನುಭವ ಮಂಟಪವನ್ನು ಸ್ಥಾಪಿಸಿ ನೂರಾರು ಶಿವಶರಣರನ್ನು ರೂಪಿಸಿದರು, ಇದರಿಂದ ಹೊಸ ಸಾಮಾಜಿಕ ವ್ಯವಸ್ಥೆ ಪ್ರಾರಂಭವಾಯಿತು ಎಂದರು.

ಶತಶತಮಾನಗಳ ನಂತರವೂ ಬಸವಣ್ಣ ನವರನ್ನು ಸ್ಮರಿಸಲಾಗಿತ್ತಿದೆ. ಅದಕ್ಕೆ ಅವರ ಚಿಂತನೆ, ಜೀವನಾದರ್ಶಗಳಲ್ಲಿದ್ದ ಗಟ್ಟಿತನ ಜನಪರ ಕಾಳಜಿ ಹಾಗೂ ಸರ್ವಕಾಲಕ್ಕೂ ಪ್ರಸ್ತುತ ವಾಗಿರುವುದೇ ಕಾರಣ ಎಂದರು.

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ಮಾತನಾಡಿ ಮಹಾನ್ ಮಾನವತವಾದಿ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಜಗತ್ತಿಗೆ ಸಾರಿದವರು ಹಾಗೂ ಜಾತಿ ಪದ್ದತಿಯನ್ನು ಹೋಗಲಾಡಿಸಲು ಹೊರಾಡಿದವರು ಹಾಗಾಗಿ ಎಲ್ಲರೂ ಅವರ ದಾರಿಯಲ್ಲಿ ನಡೆಯೋಣ ಎಂದರು.

 ತಾಲೂಕು ಪಂಚಾಯ್ತಿ ಅಧ್ಯಕ್ಷರಾದ ನಿಂಗೇಗೌಡ ಬಸವಣ್ಣನವರ ವಚನಗಳನ್ನು ಹೇಳುತ್ತಾ ಮೂಡನಂಬಿಕೆ, ಜಾತಿ ಪದ್ದತಿ, ವರ್ಣಬೇದ ಮತ್ತು ವರ್ಗಬೇದಗಳ ವಿರುದ್ಧ ಹೋರಾಡಿ ನಾವೆಲ್ಲರೂ ಒಂದೇ, ಎಲ್ಲರು ನಮ್ಮವರೆ ಎಂದು ಜಗತ್ತಿಗೆ ಸಾರಿದವರು ಎಂದರು.

 ವೀರ ಶೈವ ಸಮಾಜದ ಪ್ರಮುಖರಾದ ಜಿಲ್ಲಾ ಪತ್ರಕರ್ತಸಂಘದ ಅಧ್ಯಕ್ಷರಾದ ಉದಯ್ ಕುಮಾರ್, ವೀರಶೈವ ಸಂಘದ ಕಾರ್ಯದರ್ಶಿ ಭುವನಾಕ್ಷ, ಬಸವ ಕೇಂದ್ರದ ಕಾರ್ಯದರ್ಶಿ ಸೋಮಶೇಖರ್ ಅವರು ಮಾತನಾಡಿ ಬಸವಣ್ಣನವರು ಎಲ್ಲಾ ಕಾಲಕ್ಕೂ ದಾರಿ ದೀಪವಾಗಿದ್ದಾರೆ, ಅವರ ಚಿಂತನೆಯನ್ನು ಎಲ್ಲರೂ ಅಳವಡಿಸಿಕೊಂಡರೆ ಸಮಾಜ ಉನ್ನತ ಹಾದಿಯಲ್ಲೂ ಸಾಗಲು ಸಾಧ್ಯ ಎಂದರು.

 ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪ ವಿಭಾಗಾಧಿಕಾರಿ ಡಾ. ನವೀನ್ ಭಟ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಶವಲಿಂಗಪ್ಪ ಕುಂಬಾರ, ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಂ. ಶಿವಣ್ಣ, ಸಮಾಜದ ಮುಖಂಡರು ಹಾಗೂ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ