NEWSದೇಶ-ವಿದೇಶಸಿನಿಪಥ

ಬಾಲಿವುಡ್‌ ನಟ ಇಫಾರ್ನ್‌ ಖಾನ್‌ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ (53) ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

ಖಾನ್ ನಿಧನ ಬಾಲಿವುಡ್ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಿನಿಮಾ, ರಂಗಭೂಮಿ, ರಾಜಕೀಯ ಮತ್ತುಉದ್ಯಮಿಗಳು ಸೇರಿದಂತೆ ಎಲ್ಲಾ ರಂಗದ ಗಣ್ಯರು  ಕಂಬನಿ ಮಿಡಿದಿದ್ದಾರೆ.

ದೊಡ್ಡ ಕರುಳು ಸಮಸ್ಯೆಯಿಂದ ಬಳಲುತ್ತಿದ್ದ ಇರ್ಫಾನ್ ಖಾನ್ ಅವರನ್ನು ಮಂಗಳವಾರ ಮಧ್ಯಾಹ್ನ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ ಅಸುನೀಗಿದ್ದಾರೆ ಎಂದು ಕುಟುಂಬ ಮೂಲಗಳು ಖಚಿತಪಡಿಸಿವೆ.

ಇತ್ತೀಚೆಗೆ ಇರ್ಫಾನ್ ತಾಯಿ ಸಯೀದಾ ಬೇಗಂ(95ವರ್ಷ) ಅವರು ವಯೋಸಹಜ ಕಾಯಿಲೆಯಿಂದ ಜೈಪುರದಲ್ಲಿ ನಿಧನರಾಗಿದ್ದರು. ಆದರೆ ಪುತ್ರ ಇರ್ಫಾನ್‌ಗೆ ಲಾಕ್ ಡೌನ್‌ನಿಂದಾ ಮುಂಬೈನಲ್ಲಿ ಇದ್ದಿದ್ದು, ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ವಾಟ್ಸ್‌ಆಪ್‌ ವೀಡಿಯೋ ಮೂಲಕ ತನ್ನ ಮೃತ ತಾಯಿಯ ಅಂತಿಮ ದರ್ಶನ ಪಡೆದಿದ್ದರು.

ಈ ಹಿಂದೆ ನಟ ಇರ್ಫಾನ್ ಖಾನ್ ನ್ಯೂರೋಎಂಡೋಕ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕಾಗಿ ತಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು 2018ರಲ್ಲಿ ಘೋಷಿಸಿದ್ದರು. ಅದಕ್ಕಾಗಿ ಅವರು ವಿದೇಶಕ್ಕೆ ತೆರಳಿ ಚಿಕಿತ್ಸೆಯನ್ನು ಪಡೆದಿದ್ದರು.

ಬಾಲಿವುಡ್ ನ ವಾರಿಯರ್, ಮಕ್ಬೂಲ್, ಹಾಸಿಲ್, ಪಾನ್ ಸಿಂಗ್ ತೋಮರ್, ರೋಗ್. ಲೈಫ್ ಆಫ್ ಪೈ, ನೇಮ್ ಸೇಕ್, ಸೇರಿದಂತೆ ಹಲವು ಚಿತ್ರಗಳ ಮೂಲಕ ಇರ್ಫಾನ್ ಚಿತ್ರಪ್ರೇಮಿಗಳ ಮನಗೆದ್ದಿದ್ದರು.

ಇರ್ಫಾನ್ ಖಾನ್ ನಿಧನಕ್ಕೆ ಗಣ್ಯರ ಸಂತಾಪ

ನಟನ ಅಗಲಿಕೆಯ ಸುದ್ದಿ ತಿಳಿದ ಸಿನಿಮಾ ತಾರೆಯರು, ರಾಜಕೀಯ ವ್ಯಕ್ತಿಗಳು, ಉದ್ಯಮಿಗಳು ಸೇರಿ ಎಲ್ಲಾ ರಂಗದ ಗಣ್ಯರು ಇರ್ಫಾನ್ ಖಾನ್ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವಂತ ಶಕ್ತಿಯನ್ನು ದೇವರು ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವ ಮೂಲಕ ಸಂತಾಪ ಸೂಚಿಸಿದ್ದಾರೆ.

#IrrfanKhan.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ