NEWSನಮ್ಮಜಿಲ್ಲೆ

ಬೆಂಗಳೂರಿನ ಎಲ್ಲೆಡೆ ಸೋಂಕು ನಿವಾರಕ ಔಷಧ ಸಿಂಪಡಣೆ

ಕೊರೊನಾ ಹತೋಟಿಗೆ ಬಿಬಿಎಂಪಿ ಕ್ರಮ l ಮೇಯರ್‌ ಗೌತಮ್‌ ಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನ ವೈರೆಸ್ ಸೋಂಕು ನಿಯಂತ್ರಿಸುವ ಸಲುವಾಗಿ ರಸ್ತೆ ಮಾರ್ಗ, ಮಾರುಕಟ್ಟೆ, ಕಚೇರಿಗಳು, ಸೋಂಕು ಕಂಡು ಬಂದ ಪ್ರದೇಶಗಳು ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸುವ ವಾಹನ ಹಾಗೂ ಡ್ರೋನ್‌ಗೆ ಮೇಯರ್‌ ಗೌತಮ್‌ ಕುಮಾರ್‌ ಜೈನ್‌ ಚಾಲನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನ ವೈರೆಸ್ ಸೋಂಕು ಹಾಗೂ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರಾದ್ಯಂತ ಸೋಂಕು ನಿವಾರಕ ದ್ರಾವಣ(ಸೋಡಿಯಮ್ ಹೈಪೊ ಕ್ಲೋರೈಡ್) ಸಿಂಪಡಿಸಲು ಕ್ರಮ ವಹಿಸಲಾಗಿದೆ ಎಂದು ಮೇಯರ್‌ ತಿಳಿಸಿದರು.

ನಾಗರೀಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಪಾಲಿಕೆಯು ಈಗಾಗಲೇ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ ವಾರ್ಡ್‌ಗಳಲ್ಲಿ ಸಿಬ್ಬಂದಿ ಹಾಗೂ ಟ್ರ್ಯಾಕ್ಟರ್ ಗಳಲ್ಲಿ ಡ್ರಮ್‌ಗಳನ್ನಿಟ್ಟು ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗುತ್ತಿದೆ. ಅದರ ಜೊತೆಗೆ ಇಂದಿನಿಂದ ಜಲಮಂಡಳಿಯಿಂದ 7 ಸಾವಿರ ಲೀಟರ್ ಸಾಮರ್ಥ್ಯದ 10 ಜೆಟ್ಟಿಂಗ್ ಯಂತ್ರಗಳನ್ನು ಪಾಲಿಕೆಗೆ ತಾತ್ಕಾಲಿಕವಾಗಿ ಹಸ್ತಾಂತರಿಸಿಕೊಳ್ಳಲಾಗಿದ್ದು, ನಗರಾದ್ಯಂತ ಸಿಂಪಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಜೆಟ್ಟಿಂಗ್ ಯಂತ್ರಗಳ ಮೂಲಕ ಹಡ್ಸನ್ ವೃತ್ತ, ಟೌನ್ ಹಾಲ್, ಕೆ.ಆರ್.ಮಾರುಕಟ್ಟೆ ಸೇರಿದಂತೆ ಸುತ್ತಮುತ್ತಲಿನ  ಪ್ರದೇಶಗಳಲ್ಲಿ ಸೋಂಕು ನಿವಾರಕ ಸಿಂಪಡಿಸಲಾಗುತ್ತದೆ. ಇದಲ್ಲದೆ ಡ್ರೋನ್ ಮೂಲಕ ಸೋಂಕು ನಿವಾರಕ ಸಿಂಪಡಿಸಲು ಕ್ರಮವಹಿಸಲಾಗುತ್ತಿದೆ. ಅಗ್ನಿ ಶಾಮಕ ವಾಹನಗಳನ್ನೂ ಸೋಂಕು ನಿವಾರಕ ಸಿಂಪಡಿಸಲು ನಿಯೋಜಿಸಿಕೊಳ್ಳಲಾಗುತ್ತಿದೆ ಎಂದರು.

ನಗರವನ್ನು ಶುಚಿತ್ವ ಕಾಪಾಡುವ ಸಲುವಾಗಿ ಕಸಗುಡಿಸುವ ಯಂತ್ರಗಳ ಮೂಲಕ ಪ್ರಮುಖ ರಸ್ತೆಗಳನ್ನು ಸ್ವಚ್ಛವಾಗಿರುವಂತೆ ಕ್ರಮವಹಿಸಲಾಗಿದ್ದು, ಮೇಲ್ಸೇತುವೆ, ಆರ್ಟೀರಿಯಲ್, ಸಬ್ ಆರ್ಟೀರಿಯಲ್ ರಸ್ತೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ ಎಂದು ಹೇಳಿದರು.

ಆಯುಕ್ತ ಅನಿಲ್‌ ಕುಮಾರ್‌, ವಿಶೇಷ ಆಯುಕ್ತರು(ಘನತ್ಯಾಜ್ಯ) ಡಿ.ರಂದೀಪ್, ಜಂಟಿ ಆಯುಕ್ತರು(ಘನತ್ಯಾಜ್ಯ) ಸರ್ಪರಾಜ್ ಖಾನ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ