NEWSನಮ್ಮಜಿಲ್ಲೆ

ಬೀಡನಹಳ್ಳಿಯಲ್ಲಿ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ

ಚರಂಡಿಗಳಿಗೆ ಬ್ಲೀಚಿಂಗ್‌ ಪೌಡರ್‌ ಸಿಂಪಡಣೆ l ಪಿಡಿಒ ಲಿಂಗರಾಜು ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಆರೋಗ್ಯ ಇಲಾಖೆ ಮತ್ತು ಬೀಡನಹಳ್ಳಿ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ  ಬೀಡನಹಳ್ಳಿ ಗ್ರಾಮದ ಎಲ್ಲಾ ರಸ್ತೆ ಮತ್ತು ಚರಂಡಿಗಳಿಗೆ ಶುಕ್ರವಾರ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಪಿಡಿಒ ಲಿಂಗರಾಜು, ಕೋವಿಡ್-19 ನಿಯಂತ್ರಣದಲ್ಲಿ ಸಾರ್ವಜನಿಕರ ಜವಾಬ್ದಾರಿ ಮಹತ್ವದ್ದಾಗಿದೆ. ವಿನಾ ಕಾರಣ ಮನೆಯಿಂದ ಹೊರಗೆ ಸುತ್ತಾಡಬೇಡಿ. ತಮ್ಮ ತಮ್ಮ ಮನೆಯಲ್ಲಿ ಉಳಿದುಕೊಳ್ಳುವುದೇ ಸುರಕ್ಷಿತವಾದ ಮಾರ್ಗ. ಹೀಗಾಗಿ ಎಲ್ಲಾ ಜನರು ಆರೋಗ್ಯವನ್ನು ಕಾಪಾಡುವ ಜತೆಗೆ ನಿಮ್ಮ ಸುತ್ತಮುತ್ತಲಿನ ನಿವಾಸಿಗಳ ಅರೋಗ್ಯದ ಬಗ್ಗೆಯೂ ಗಮನಹರಿಸುವುದು ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.

ಅರ್ಧ ಗಂಟೆಗೊಮ್ಮೆ ಕೈ ಗಳನ್ನು ಸಾಬೂನಿನಿಂದ ತೊಳೆದುಕೊಳ್ಳಿ, ಸುಮ್ಮ ಸುಮ್ಮನೆ ಯಾವುದೇ ವಸ್ತುಗಳನ್ನು ಮುಟ್ಟಬಾರದು. ರಸ್ತೆಯಲ್ಲಿ ಉಗುಳಬಾರದು. ಬಿಸಿಯಾದ ನೀರು ಆಹಾರ ಸೇವಿಸಿ, ಕೆಮ್ಮುವಾಗ ಸೀನುವಾಗ ಕರವಸ್ತ್ರ ಬಳಕೆ ಮಾಡಿ, ಅಗತ್ಯ ಸಾಮಗ್ರಿಗಳನ್ನು ಕೊಳ್ಳುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ. ಜ್ವರ ಕೆಮ್ಮು ನೆಗಡಿ ಲಕ್ಷಣಗಳು ಕಾಣಿಸಿಕೊಂಡರೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ, ಜ್ವರ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರ ಸಲಹೆ ಮೇರೆಗೆ ಔಷಧ ಪಡೆದುಕೊಳ್ಳಬೇಕು.  ಆದರೆ ಸ್ವಯಂ ಚಿಕಿತ್ಸೆ ಅಪಾಯಕಾರಿ ಎಂದು ಹೇಳಿದರು.

ಈಗಾಗಲೇ ಎಲ್ಲಾ ಚರಂಡಿಗಳಿಗೂ ಬ್ಲೀಚಿಂಗ್‌ ಪಂಡರ್‌ ಸಿಂಪಡಿಸಿದ್ದು, ಚರಂಡಿಗಳ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ