NEWSವಿಡಿಯೋ

ಬೀದಿಗೆ ಬಿದ್ದ ಗುಲಾಬಿ ಬೆಳೆಗಾರರು

ವಿಜಯಪಥ ಸಮಗ್ರ ಸುದ್ದಿ

ದೊಡ್ಡಬಳ್ಳಾಪುರ:  ಇಡೀ ದೇಶವೇ ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ  ಹೂ ಬೆಳಗಾರರು ಬೀದಿಗೆ ಬೀಳುವಂತಾಗಿದೆ. ತಾಲೂಕಿನಲ್ಲಿ ಗುಲಾಬಿ, ಜರ್ಬಾರ್,   ಸೆವಂತಿಗೆ  ಹೂ ಗಳನ್ನು  ಬೆಳೆದ ರೈತರು ಕಂಗಾಲಾಗಿದ್ದು ಹೂ ಗಿಡದಲ್ಲೇ ಕೊಳೆಯುತ್ತಿದೆ.

ಕೊರೊನಾ ಲಾಕ್ ಡೌನ್  ಹಿನ್ನೆಲೆಯಲ್ಲಿ  ಯಾವುದೇ ದೇವಾಲಯಗಳು ಶುಭ ಸಮಾರಂಭಗಳು ನಡೆಯದೇ ಇರುವುದರಿಂದ ಹೂ ಮಾರಾಟ ಗಣನೀಯವಾಗಿ ಇಳಿಕೆಯಾಗಿದೆ. ಆದರೆ ಸಾಲ ಮಾಡಿ ಬಂಡವಾಳ ಹೂಡಿರುವ ರೈತರ ಪರಿಸ್ಥಿತಿ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಸುಮಾರು 10 ಎಕರೆ  ಪ್ರದೇಶದಲ್ಲಿ ಗುಲಾಬಿ, ಜರ್ಬಾರ್, ಸೆವಂತಿಗೆ ಬೆಳೆದ ಮುನಿಕೃಷ್ಣಪ್ಪ ಎಂಬ  ರೈತ  ಬ್ಯಾಂಕ್ನಲ್ಲಿ ಸಾಲ ಮಾಡಿ ಬಂಡವಾಳ ಹೂಡಿಕೆ ಮಾಡಿದ್ದೇವೆ ಆದರೆ ವೈರಸ್ ಕಾರಣದಿಂದ ಹೂಗಳನ್ನು ಯಾರು ಕೊಳ್ಳುತ್ತಿಲ್ಲ ಇದರಿಂದ ಕಿತ್ತು ಎಲ್ಲ ತಿಪ್ಪೆಗೆ ಸುರಿಯುತ್ತಿದ್ದೇವೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನು ಸಂಬಂಧಪಟ್ಟ ತೋಟಗಾರಿಕಾ ಅಧಿಕಾರಿಗಳು ಇಂತಹ ಬೆಳೆಗಳಿಗೆ ಪರಿಹಾರ ನೀಡಬೇಕೆಂದು ರೈತ ಮುನಿಕೃಷ್ಣಪ್ಪ ಮನವಿ ಮಾಡಿದ್ದಾರೆ. ಅಲ್ಲದೇ ಹೂವನ್ನು ಮಾರಲು ಮಾರುಕಟ್ಟೆ ಸೌಲಭ್ಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಇಂದು ಕೊರೊನಾ ಮಹಾಮಾರಿಗೆ ಜಗತ್ತೇ ತತ್ತರಿಸಿ ಹೋಗಿದ್ದು, ಒಂದೆಡೆ ವಸ್ತುಗಳ ಬೆಲೆ ಏರಿಕೆಯಾದರೆ ಮತ್ತೊಂದೆಡೆ ರೈತರು ಸಂಕಷ್ಟಪಡುವ ಸ್ಥಿತಿ ನಿರ್ಮಾಣವಾಗಿದೆ ಇದಕ್ಕೆ ಸರ್ಕಾರ ಸೂಕ್ತ ಪರಿಹಾರ ಕಂಡುಕೊಂಡು ರೈತರಿಗೆ ನೆರವಾಗಬೇಕಿದೆ.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ