ನಮ್ಮಜಿಲ್ಲೆ

ಬುಡಕಟ್ಟು ಜನರ ಸರ್ವಾಂಗೀಣ ಅಭಿವೃದ್ಧಿ: ಸಂಸದ ಶ್ರೀನಿವಾಸಪ್ರಸಾದ್    

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಇರುವ ಬುಡಕಟ್ಟು ಜನರ ಸರ್ವಾಂಗೀಣ ಅಭಿವೃದ್ಧಿಗಾಗಿ ಕೇಂದ್ರ ಬಹು ಆಯಾಮಗಳ ಕಾರ್ಯಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವರಾದ ರೇಣುಕಾಸಿಂಗ್ ಸರೂಠ ತಿಳಿಸಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಚಾಮರಾಜನಗರ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಚಾಮರಾಜನಗರ ಜಿಲ್ಲೆಯ ಬುಡಕಟ್ಟು ಜನರ ಜೀವನ, ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಸ್ಮಾರ್ಟ್ ವಿಲೇಜ್ ಯೋಜನೆಯಡಿ ಒದಗಿಸಬಹುದಾದ ಸೋಲಾರ್ ಪವರ್ ಪ್ಲಾಂಟ್ ಕುರಿತು ಕೇಳಲಾದ ಚುಕ್ಕೆ ರಹಿತ ಪ್ರಶ್ನೆಗೆ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರು ಉತ್ತರಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಕಾಡಂಚಿನ ಹಾಗೂ ದುರ್ಗಮ ಅರಣ್ಯ ಪ್ರದೇಶಗಳು, ಸಂಪರ್ಕ ಸಾಧನ ಸೌಲಭ್ಯಗಳು ಇಲ್ಲದ ಬುಡಕಟ್ಟು ಪ್ರದೇಶಗಳಲ್ಲಿ ಶಿಕ್ಷಣ, ವಿದ್ಯುತ್, ನೀರು ಪೂರೈಕೆ, ವಿದ್ಯುತ್ ಇಲ್ಲದ ಕಡೆ ಸೋಲಾರ್ ಪವರ್ ಪ್ಲಂಟ್ ಮೂಲಕ ಸ್ಮಾರ್ಟ್‍ವಿಲೇಜ್ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸುವುದು ಮತ್ತು ಇನ್ನಿತರ ಯಾವ ಕ್ರಮಗಳಿಂದ ಬುಡಕಟ್ಟು ಜನರ ಸೌಕರ್ಯಗಳನ್ನು ಸುಧಾರಿಸಬಹುದು ಎಂಬ ಪ್ರಶ್ನೆಗೆ ಬುಡಕಟ್ಟು ವ್ಯವಹಾರಗಳ ಸಚಿವರು ವಿವರವಾಗಿ ಉತ್ತರಿಸಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಮಂಗಲ ಗ್ರಾಮದಲ್ಲಿ 2010-11ನೇ ಸಾಲಿನಲ್ಲಿ ಒಂದು ಏಕಲವ್ಯ ಮಾದರಿ ವಸತಿ ಶಾಲೆಯನ್ನು ಗುಣಮಟ್ಟದ ಮಾಧ್ಯಮಿಕ ಮತ್ತು ಉನ್ನತಮಟ್ಟದ ಶಿಕ್ಷಣವನ್ನು ದುರ್ಗಮ ಅರಣ್ಯ ಪ್ರದೇಶಗಳ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ನೀಡುವ ಉದ್ದೇಶದಿಂದ ತೆರೆಯಲಾಗಿದೆ. ಉನ್ನತ ಮತ್ತು ವೃತ್ತಿಪರ ಶಿಕ್ಷಣ ಕೋರ್ಸ್‍ಗಳನ್ನು ಪಡೆದು ಸರ್ಕಾರಿ ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಉದ್ಯೋಗ ಅವಕಾಶ ಪಡೆಯಲು ಅನುವು ಮಾಡಿಕೊಡುವುದು ಶಾಲೆಯ ಉದ್ದೇಶವಾಗಿದೆ. ಈ ವಸತಿ ಶಾಲೆಗೆ 2019-20ನೇ ಸಾಲಿನಲ್ಲಿ ಒಟ್ಟು 275 ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಬುಡಕಟ್ಟು ವ್ಯವಹಾರಗಳ ಸಚಿವರು ತಿಳಿಸಿದ್ದಾರೆ.

ಬುಡಕಟ್ಟು ಜನರಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯಸರ್ಕಾರದ ವಿವಿಧ ಯೋಜನೆ, ಕಾರ್ಯಕ್ರಮಗಳ ಮೂಲಕ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಇತರೆ ಸೌಲಭ್ಯಗಳನ್ನು ಬುಡಕಟ್ಟು ಮಂತ್ರಾಲಯದ ಮೂಲಕ ಒದಗಿಸಲಾಗುತ್ತಿದೆ. ಈ ಮೂಲಕ ಬುಡಕಟ್ಟು ಜನರ ತೀವ್ರ ಕೊರತೆಗಳನ್ನು ನೀಗಿಸಲು ಕ್ರಮ ವಹಿಸಲಾಗುತ್ತಿದೆ.

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸ್ವೀಕರಿಸಲಾದ ಪ್ರಸ್ತಾವನೆಗಳನ್ನು ಪರಿಗಣಿಸಿ ಬೇಡಿಕೆಗೆ ಅನುಗುಣವಾಗಿ ವಿವಿಧ ಯೋಜನೆ, ಕಾರ್ಯಕ್ರಮಗಳ ಅಡಿಯಲ್ಲಿ ಅನುದಾನ ಒದಗಿಸಲಾಗುತ್ತಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳರಾಜ್ಯ ಸಚಿವರಾದ ರೇಣುಕಾಸಿಂಗ್ ಸರೂಠ ಅವರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ