Please assign a menu to the primary menu location under menu

Crimeಕೃಷಿ

ಬೆಳೆ ಪರಿಹಾರ ಅವ್ಯವಹಾರದಲ್ಲಿ ಭಾಗೀಯಾದ 11 ಜನರ ಬಂಧನ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಅತಿವೃಷ್ಟಿ ನೆರೆಯಿಂದ ಹಾನಿಯಾದ ಬೆಳೆಪರಿಹಾರ ವಿತರಣೆಯ ಅವ್ಯವಹಾರ ಕುರಿತಂತೆ ಪೊಲೀಸ್ ತನಿಖೆ ಮುಂದುವರಿದಿದ್ದು, ಈವರೆಗೆ ಅವ್ಯವಹಾರದಲ್ಲಿ ಭಾಗೀಯಾದ ಆರೋಪದ ಮೇಲೆ 11 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿದ ಅವರು ನೆರೆ ಪರಿಹಾರದಲ್ಲಿ ಈವರೆಗೆ 18ರಿಂದ 20 ಕೋಟಿ ರೂ.ಗಳಷ್ಟು ಅವ್ಯವಹಾರ ನಡೆದಿರುವುದು ಅಂದಾಜಿಸಲಾಗಿದೆ. ಬೆಳೆಪರಿಹಾರ ಮಾದರಿಯಲ್ಲಿ ವಸತಿ ಯೋಜನೆ ಪರಿಹಾರದಲ್ಲಿ ಲೋಪವಾಗಿದೆಯಾ ಎಂಬುದನ್ನು ಪರಿಶೀಲಿಸಲು ಪ್ರಾದೇಶಿಕ ಆಯುಕ್ತರು, ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನಾ ತಂಡ ರಚಿಸಿದ್ದಾರೆ ಎಂದು ವಿವರಿಸಿದರು.

ಎನ್.ಡಿ.ಆರ್.ಎಫ್/ ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ 4.38 ಎಕರೆವರೆಗೆ ಒಂದು ಖಾತೆಗೆ ಪರಿಹಾರ ಒದಗಿಸಬೇಕು. ಇದಕ್ಕಿಂತ ಹೆಚ್ಚುವ ಹಿಡುವಳಿ ಹೊಂದಿದವರ ಜಮೀನು ವಿಭಾಗೀಸಿ ಬೇರೆ ಬೇರೆ ಆಧಾರ್ ಸಂಖ್ಯೆ ಜೋಡಿಸಿ ಹಣ ಬೇರೆ ಬೇರೆಯವರಿಗೆ ಹಣ ಪಾವತಿಯಾಗಿರುವುದು ಕಂಡುಬಂದಿದೆ. ಬಹುಪಾಲು ಪ್ರಕರಣಗಳಲ್ಲಿ ಪ್ರಕೃತಿ ವಿಕೋಪ ಕಾಯ್ದೆಯಡಿ ನಿಯಮಾನುಸಾರ ಪರಿಹಾರ ವಿತರಿಸುವ ಮೊದಲು ನಮೂನೆ 1ರಲ್ಲಿ ಜಮೀನು ಪರಿಶೀಲಿಸಿ ರೈತರು ಬೆಳೆದ ಬೆಳೆಯ ಮಾಹಿತಿ, ಹಿಡುವಳಿ ಮಾಹಿತಿಯನ್ನು ನಿರ್ವಹಣೆಮಾಡಿರುವುದಿಲ್ಲ.

ಸೊನ್ನೆಯಿಂದ 1.5 ಮ್ಯಾಚ್ ಸ್ಕೋರ್ ಕಡಿಮೆ ಇರುವ 23,468 ಪ್ರಕರಣಗಳು ಪತ್ತೆಯಾಗಿವೆ. ಈ ಪ್ರಕರಣಗಳಲ್ಲಿ ಪರಿಹಾರವಾಗಿ 36.49 ಕೋಟಿ ರೂ. ಹಣ ಪಾವತಿಯಾಗಿದೆ. 0 ದಿಂದ 1.5 ಮ್ಯಾಚ್ ಸ್ಕೋರ್ ಹೊಂದಿರುವ ಪ್ರಕರಣಗಳ ಪರಿಶೀಲನೆಗೆ ಹಿಂದಿರುಗಿಸಿ ಪರಿಶೀಲನೆ ನಡೆಸುವ ಅವಕಾಶವಿದ್ದರೂ ಗ್ರಾಮ ಲೆಕ್ಕಾಧಿಕಾರಿಗಳು ಯಾವುದೇ ಆಕ್ಷೇಪಣೆ ಇಲ್ಲದೆ ಪರಿಶೀಲನೆಗೂ ಹಿಂದಿರುಗಿಸದೆ ಅಪ್ರೂಲ್ ಮಾಡಿರುವುದು ಕಂಡುಬಂದಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 3,71,459  ಹೆಕ್ಟೇರ್ ಬಿತ್ತನೆಯಾಗಿದೆ. ಈ ಪೈಕಿ 3,10,537 ಹೆಕ್ಟೇರ್ ಬೆಳೆ ನಷ್ಟವಾಗಿದೆ. ಈವರೆಗೆ ಬೆಳೆನಷ್ಟ  ಪರಿಹಾರವಾಗಿ 202,01,76,625 ರೂ. ಪಾವತಿಸಲಾಗಿದೆ. 105 ಕೋಟಿ  ರೂ. ವಸತಿಗಾಗಿ ಬಿಡುಗಡೆಯಾಗಿದೆ. (ಸರ್ಕಾರದಿಂದ 95 ಕೋಟಿ ರೂ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 10 ಕೋಟಿ ರೂ.) ಮೂಲಭೂತ ಸೌಕರ್ಯಗಳಿಗಾಗಿ 35 ಕೋಟಿ ರೂ. ಬಿಡುಗಡೆಯಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ