CrimeNEWSಬೆಂಗಳೂರು

ಭೀಕರ ರಸ್ತೆ ಅಪಘಾತ: ಹೊತ್ತಿ ಉರಿದ ಕಾರು – ತಾಯಿ, ಎರಡು ವರ್ಷದ ಮಗು ಸಜೀವ ದಹನ, ತಂದೆ ಮತ್ತೊಂದು ಮಗು ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೈಸ್ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮಗು ಇಬ್ಬರು ಸಜೀವ ದಹನಗೊಂಡಿರುವ ಘಟನೆ ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಸೋಂಪುರ ಬಳಿ ಜರುಗಿದೆ.

ಅಪಘಾತದ ರಭಸಕ್ಕೆ ಕಾರು ತಡೆಗೋಡೆ ದಾಟಿ ಪಕ್ಕದ ರಸ್ತೆಗೆ ಬಂದಿದ್ದು, ಅಪಘಾತದ ತೀವ್ರತೆಗೆ ಕಾರು ಪಲ್ಟಿಯಾಗಿ ಬೆಂಕಿ ಹೊತ್ತುಕೊಂಡಿದೆ. ದುರ್ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರ ಪೈಕಿ ಸಿಂಧು (28) ಹಾಗೂ ಎರಡು ವರ್ಷದ ಮಗು ಸಾವನ್ನಪ್ಪಿದ್ದು, ಕಾರು ಚಾಲಕ ಮಹೇಂದ್ರನ್ ಹಾಗೂ ಮತ್ತೊಂದು ಮಗುವಿಗೆ ತೀವ್ರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಪಲ್ಟಿಯಾಗಿ ಬೆಂಕಿ ಹೊತ್ತುಕೊಂಡಿದ್ದದಿಂದ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಕಾರು ಗುದ್ದಿದ್ದರಿಂದ ಲಾರಿ ಸಹ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ.

ಘಟನೆ ವಿವರ: ಮೂಲತಃ ಸೇಲಂ ನವರಾಗಿರುವ ಮಹೇಂದ್ರನ್ ಎಂಬುವರು ಹಾಲಿ ರಾಮಮೂರ್ತಿನಗರ ಬಳಿಯ ವಿಜಿನಾಪುರದಲ್ಲಿ ವಾಸವಿದ್ದಾರೆ. ಅವರು ಕುಟುಂಬ ಸಮೇತ ಇಂದು ಮುಂಜಾನೆ ನೈಸ್‌ ರಸ್ತೆಯಲ್ಲಿ ಬರುತ್ತಿದ್ದ ಕಾರು ಮೊದಲು ಲಾರಿಗೆ ಡಿಕ್ಕಿ ಹೊಡೆದಿದೆ ನಂತರ ರಸ್ತೆ ವಿಭಜಕಕ್ಕೆ ಗುದ್ದಿಕೊಂಡು ಹೋಗಿ ಪಲ್ಟಿಹೊಡೆದು ಬೆಂಕಿಹೊತ್ತಿಕೊಂಡಿದ್ದರಿಂದ ಈ ಅನಾಹುತ ಜರುಗಿದೆ.

ಅನ್​ಲೈನ್ ಮೂಲಕ ಕಾರನ್ನು ಮಹೇಂದ್ರನ್ ಬಾಡಿಗೆಗೆ ಪಡೆದಿದ್ದರು. ರಾಮಮೂರ್ತಿನಗರದಿಂದ ಕನಕಪುರ ನೈಸ್ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ ಬೆಂಗಳೂರಿನ ಸೋಂಪುರ ಬಳಿ ಕಾರು ಬರುತ್ತಿದಂತೆ ಈ ಘಟನೆ ನಡೆದಿದೆ.

ಈ ಸಂಬಂಧ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರಗಿಸುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್