NEWSನಮ್ಮಜಿಲ್ಲೆನಮ್ಮರಾಜ್ಯ

ಭಾಗ್ಯ, ಕುಟೀರ, ಅಮೃತ ಜ್ಯೋತಿಗಳು ಗೃಹ ಜ್ಯೋತಿ ಯೋಜನೆಯಲ್ಲಿ ವಿಲೀನ: ಸಚಿವ ಜಾರ್ಜ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಈ ಹಿಂದೆ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳನ್ನು ಗೃಹ ಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಿದೆ. ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ಲಾಭ ದಕ್ಕಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಕೊಟ್ಟ ಮಾತಿನಂತೆ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಫ್ರೀ ನೀಡಲಾಗುತ್ತಿದೆ.

ಅದು ಕೂಡ ಇದೇ ಜುಲೈ 1ರಿಂದಲೇ ಜಾರಿಗೆ ಬಂದಿದೆ. ಆದರೆ ಈಗಾಗಲೇ ಜಾರಿಯಲ್ಲಿರುವ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳ ಭವಿಷ್ಯವೇನು, ಇದರ ಫಲಾನುಭವಿಗಳಿಗೆ ಏನಾಗುತ್ತೆ ಎಂಬ ಪ್ರಶ್ನೆಯ ಜತೆಗೆ ಗೊಂದಲ ಕಾಡುತ್ತಿತ್ತು. ಇದೀಗ ಇಂಧನ ಸಚಿವರು ವಿಶೇಷ ಕಾಳಜಿ ವಹಿಸಿ ಹೊಸ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ಈ ಎಲ್ಲ ಫಲಾನುಭವಿಗಳಿಗೆ ಖುಷಿ ನೀಡಿದ್ದಾರೆ.

ಭಾಗ್ಯ ಜ್ಯೋತಿಗೆ ಈವರೆಗೆ 40 ಯೂನಿಟ್ ಫ್ರೀ ಇತ್ತು, ಅದನ್ನು ಈಗ 53 ಯೂನಿಟ್ ಹಾಗೂ ಶೇ.10 ಹೆಚ್ಚುವರಿ ಫ್ರೀ ಕರೆಂಟ್ ನೀಡುವುದಾಗಿ ಘೋಷಿಸಿದೆ. ಹಾಗೆಯೇ ಅಮೃತ ಜ್ಯೋತಿಗೆ 75 ಯೂನಿಟ್ ಇತ್ತು. ಈಗ ಅದನ್ನು 75 ಯೂನಿಟ್ ಜತೆಗೆ ಶೇ.10 ಮಾಡಿದ್ದಾರೆ. ಈ ಮೂಲಕ ಈಗ ಎಲ್ಲರೂ ಗೃಹಜ್ಯೋತಿ ವ್ಯಾಪ್ತಿಗೆ ಬರುತ್ತಾರೆ. ಅವರಿಗೆ ಹೆಚ್ಚುವರಿ ಯೂನಿಟ್‌ಗಳನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೂರು ಜ್ಯೋತಿಗಳ ಫಲಾನುಭವಿಗಳಲ್ಲಿ ಇದ್ದಂತಹ ಗೊಂದಲವನ್ನು ಇಂಧನ ಸಚಿವ ಕೆ.ಜೆ. ಜಾರ್ಜ್ ನಿವಾರಿಸಿದ್ದಾರೆ. ಅಷ್ಟೇ ಅಲ್ಲ ಇವರಿಗೂ ಹೆಚ್ಚುವರಿ ಫ್ರೀ ಕರೆಂಟ್ ನೀಡುವ ಮೂಲಕ ರಾಜ್ಯ ಸರ್ಕಾರ ಬಡ ಕುಟುಂಬಗಳ ನೆರವಿಗೆ ನಿಂತಿದೆ. ಸರ್ಕಾರದ ಈ ಹೊಸ ನಿರ್ಧಾರದಿಂದಾಗಿ ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ಇದರಿಂದ ನೇರ ಲಾಭ ಸಿಗಲಿದೆ.

ಇನ್ನು ಇದರ ನಡುವೆ ನೀವು ಹೇಳಿದ್ದು ಪ್ರತಿ ಕುಟುಂಬಕ್ಕೆ 200 ಯೂನಿಟ್‌ ವಿದ್ಯುತ್‌ ಫ್ರೀ ಎಂದು ಹೇಳಿದ್ದೀರಿ ಅದರಂತೆ ನಡೆದುಕೊಳ್ಳಬೇಕು ಎಂದು ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲೂ ಆಗ್ರಹಿಸುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಅದನ್ನು ನಾವು ಕೊಡುವುದಿಲ್ಲ ಎಂಬಂತೆಯೇ ನಡೆದುಕೊಳ್ಳುತ್ತಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು