NEWSದೇಶ-ವಿದೇಶನಮ್ಮರಾಜ್ಯ

ಭಗವದ್ ಶಕ್ತಿ, ಸಾಮಾಜಿಕ ಶಕ್ತಿಯ ಜೋಡಣೆಯ ಪ್ರೇರಣೆ ಸಂತ ಕನಕದಾಸ : ಪ್ರಧಾನಿ ನರೇಂದ್ರ ಮೋದಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭಗವದ್ ಶಕ್ತಿ ಹಾಗೂ ಸಾಮಾಜಿಕ ಶಕ್ತಿಯ ಜೋಡಣೆಯ ಪ್ರೇರಣೆ ಸಂತ ಕನಕದಾಸರಿಂದ ದೊರೆತಿದೆ. ಶ್ರೀಕೃಷ್ಣನ ಭಕ್ತರಾಗಿದ್ದ ಅವರು “ಕುಲ ಕುಲವೆಂದು ಹೊಡೆದಾಡದಿರಿ ” ಎಂದು ಸಹಬಾಳ್ವೆಯ ಸಂದೇಶ ಸಾರಿದರು. ರಾಮಧಾನ್ಯ ಚರಿತೆ ಕೃತಿಯ ಮೂಲಕ ರಾಗಿಯ ಮಹತ್ವದ ಜೊತೆಗೆ ಸಿರಿಧಾನ್ಯಗಳು ಹಾಗೂ ಸಾಮಾಜಿಕ ಸಂದೇಶ ಹಾಗೂ ವೀರ ವನಿತೆ ಒನಕೆ ಓಬವ್ವನ ಸಾಹಸ ಮನೋಭಾವವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಶಂಸಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಟರ್ಮಿನಲ್ 2 ಹಾಗೂ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಭವ್ಯ ಪ್ರಗತಿ ಪ್ರತಿಮೆ ಲೋಕಾರ್ಪಣೆ ನಂತರ ನಡೆದ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ವೈವಿಧ್ಯಗಳ ತವರೂರು ಅಷ್ಟೇ ಅಲ್ಲ ಇಲ್ಲಿ ದೇಶದ ಎಲ್ಲ ಸಂಪತ್ತುಗಳನ್ನು ಹೊಂದಿರುವ ಖಣಜ ಎಂದು ಬಣ್ಣಿಸಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಮಾತನಾಡಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಟರ್ಮಿನಲ್ ಉದ್ಘಾಟನೆಯಾಗಿತ್ತು. ಇದೀಗ ಪ್ರಧಾನಿ ಮೋದಿಯವರು ಎರಡನೇ ಟರ್ಮಿನಲ್ ಲೋಕಾರ್ಪಣೆಯಾಗಿದೆ ಎಂದು ಹೇಳಿದರು.

ಇನ್ನು ಮೆಟ್ರೋ, ಉಪನಗರ ರೈಲು ಯೋಜನೆಗಳು ಬೆಂಗಳೂರಿನ ಸರ್ವಾಂಗೀಣ ವಿಕಾಸಕ್ಕೆ ಮುನ್ನುಡಿ ಬರೆಯುತ್ತಿವೆ. ಬೆಳಗಾವಿಯ ಸಾಮಾನ್ಯ ನಾಗರಿಕರಾದ ಶ್ರೀಠಾಣೇದಾರ್ ಎಂಬುವರು ಅಮೆರಿಕದ ಕಾಂಗ್ರೆಸ್ಸಿಗೆ ಸಂಸದರಾಗಿ ಚುನಾಯಿತರಾಗಿರುವುದು ಸಮಸ್ತ ಕನ್ನಡಿಗರು ಹಾಗೂ ಭಾರತೀಯರು ಹೆಮ್ಮೆಪಡಬೇಕಾದ ಸಂಗತಿಯಾಗಿದೆ ಎಂದರು.

ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ ಮಾತನಾಡಿ, ಕೊರೊನಾ ತುತ್ತ ತುದಿಯಲ್ಲಿದ್ದ ಸಂಕಷ್ಟದ ದಿನಗಳಲ್ಲಿ 2020 ರ ಜೂನ್ ತಿಂಗಳಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು. ಸಂಸ್ಕೃತಿ, ಪರಂಪರೆ, ಆಧ್ಯಾತ್ಮ ಅರಿತವರು ಭವಿಷ್ಯ ಸೃಷ್ಟಿಸಬಲ್ಲರು. ಜ್ಞಾನದ ಜೊತೆ ಕರ್ಮ ಜ್ಞಾನವೂ ಬೇಕು. ಭಾರತ ಉಳಿದರೆ ಎಲ್ಲರೂ ಉಳಿಯುತ್ತಾರೆ. ಭಾರತ ಅಳಿದರೆ ಎಲ್ಲರೂ ಅಳಿಯುತ್ತಾರೆ. ಕೊರೊನಾ ಸಂಕಷ್ಟದ ಕಾಲವನ್ನು ಭಾರತ ಸಮರ್ಥವಾಗಿ ಎದುರಿಸಿ ದೇಶ ಮುನ್ನಡೆಯುತ್ತಿದೆ ಎಂದರು.

ಇನ್ನು ಸುಮಾರು 500 ವರ್ಷಗಳ ಹಿಂದೆ ಯಾವುದೇ ಜಾತಿ, ಪಂಥಗಳಿಗೆ ಸೀಮಿತವಾಗದೇ ದೂರದೃಷ್ಟಿಯಿಂದ ಮಾನವ ಸಂಪನ್ಮೂಲದ ಸದ್ವಿನಿಯೋಗ ಹಾಗೂ ಕೌಶಲ್ಯಗಳನ್ನು ಆಧರಿಸಿ ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ 64 ಮಾರುಕಟ್ಟೆಗಳು ಬೆಂಗಳೂರನ್ನು ಆರ್ಥಿಕ, ವಾಣಿಜ್ಯ ಶಕ್ತಿ ಕೇಂದ್ರವಾಗಿಸಿವೆ. ಪ್ರಧಾನಿ ಮೋದಿಯವರೂ ಕೂಡ ಅಂತಹ ದೂರದೃಷ್ಟಿಯ ನೇತಾರರಾಗಿದ್ದಾರೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಬೆಂಗಳೂರು -ಮೈಸೂರು ಹಾಗೂ ಬೆಂಗಳೂರು-ಚೆನ್ನೈ ಮಹಾನಗರಗಳಿಗೆ ಸಂಪರ್ಕಿಸುವ ವಂದೇಭಾರತ್ ರೈಲು ನೀಡಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಎರಡನೇ ಟರ್ಮಿನಲ್ ಲೋಕಾರ್ಪಣೆ ಮೂಲಕ ಇದು ದೇಶದ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣ ಎಂಬ ಹಿರಿಮೆಗೆ ಪಾತ್ರವಾಗಿದೆ ಎಂದರು.

ವಿಜಯನಗರದ ಕಾಲದ ಸುವರ್ಣಯುಗದ ದರ್ಶನವನ್ನು ನಾಡಪ್ರಭು ಕೆಂಪೇಗೌಡರ ಯೋಜನಾಬದ್ಧ ನಗರ ನಿರ್ಮಾಣದ ಮೂಲಕ ತಮ್ಮ ದೂರದೃಷ್ಟಿಯ ಕನಸುಗಳನ್ನು ಸಾಕಾರಗೊಳಿಸಿದರು. ಅವರ ವಿಚಾರ, ರೀತಿ, ನೀತಿಗಳ ಧಾರೆಯಲ್ಲಿ ನಾಡು ಕಟ್ಟಲು ಸರ್ಕಾರ ಸಂಕಲ್ಪ ಮಾಡುತ್ತದೆ. ದೇಶದ ಹತ್ತು ಹಲವು ಸಮಸ್ಯೆಗಳನ್ನು ಪರಿಹರಿಸಿ ಅಭಿವೃದ್ಧಿಯಲ್ಲಿ ಸರ್ವರಿಗೂ ಸಮಪಾಲು ನೀಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಹೆಮ್ಮೆಯಿಂದ ಮುನ್ನಡೆಯುತ್ತಿದೆ. ನವಭಾರತ ನಿರ್ಮಾಣಕ್ಕಾಗಿ ಕನ್ನಡ ನಾಡಿನ ಅಭಿವೃದ್ಧಿಗೆ ಪ್ರಧಾನಿ ಮೋದಿಯವರು ಅನೇಕ ಕೊಡುಗೆಗಳನ್ನು ನಿರಂತರವಾಗಿ ನೀಡುತ್ತಿರುವುದನ್ನು ಮುಖ್ಯಮಂತ್ರಿ ಬೊಮ್ಮಾಯಿ ಹೆಮ್ಮೆಯಿಂದ ಸ್ಮರಿಸಿದರು.

ಇದೇ ಸಂದರ್ಭದಲ್ಲಿ ನಾಡಪ್ರಭು ಕೆಂಪೇಗೌಡರ ಜೊತೆಗೆ ಸಂತ ಕನಕದಾಸ ಹಾಗೂ ವೀರ ವನಿತೆ ಒನಕೆ ಓಬವ್ವ ಜಯಂತಿ ಅಂಗವಾಗಿ ವೇದಿ ಕೆಯಲ್ಲಿ ಅವರ ಭಾವಚಿತ್ರಗಳಿಗೆ ಪ್ರಧಾನಿಯವರು ಗೌರವ ಸಲ್ಲಿಸಿದರು‌. ಪ್ರಧಾನ ಮಂತ್ರಿಯವರಿಗೆ ಪ್ರಗತಿ ಪ್ರತಿಮೆಯ ಬೆಳ್ಳಿಯ ಪ್ರತಿಕೃತಿ ನೀಡಿ ಮುಖ್ಯಮಂತ್ರಿಯವರು ಗೌರವಿಸಿದರು. ಕೆಂಪೇಗೌಡರ ಕುರಿತ ಕಿರು ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು‌.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್,ಕೇಂದ್ರ ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ,ನಂಜಾವಧೂತ ಸ್ವಾಮೀಜಿ, ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ,ಭಗವಂತ್ ಖೂಬಾ,ಶೋಭಾ ಕರಂದ್ಲಾಜೆ,ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಸಂಸದ ಸದಾನಂದಗೌಡ, ಸಚಿವರಾದ ಅರಗ ಜ್ಞಾನೇಂದ್ರ, ಸಿ.ಎನ್.ಅಶ್ವತ್ಥನಾರಾಯಣ, ಆರ್.ಅಶೋಕ, ನಾರಾಯಣಗೌಡ, ಸುನೀಲ್‌ಕುಮಾರ್, ಬಿ.ಎ.ಬಸವರಾಜ, ಕೆ‌.ಗೋಪಾಲಯ್ಯ, ಮುನಿರತ್ನ, ಎಂ.ಟಿ.ಬಿ.ನಾಗರಾಜ, ವಿ.ಸೋಮಣ್ಣ, ಡಾ.ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್ ವೇದಿಕೆಯಲ್ಲಿದ್ದರು.

ಮನಸೆಳೆದ ಕಲಾಪ್ರದರ್ಶನ ಕಾರ್ಯಕ್ರಮಕ್ಕೂ ಮುನ್ನ ವಿವಿಧ ಕಲಾತಂಡಗಳ ಕಲಾವಿದರು ಪ್ರದರ್ಶಿಸಿದ ನಾಡಪ್ರಭು ಕೆಂಪೇಗೌಡರ ಬದುಕು, ಸಾಧನೆಗಳ ಕುರಿತ ನೃತ್ಯರೂಪಕ,ನಾಟಕ,ಜನಪದ ಹಾಗೂ ಶಾಸ್ತ್ರೀಯ ಸಂಗೀತ, ಕನ್ನಡ ನಾಡಗೀತೆಗಳು ಗಮನ ಸೆಳೆದವು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ