NEWSದೇಶ-ವಿದೇಶನಮ್ಮಜಿಲ್ಲೆ

ಭಾರತೀಯ ಸೇನೆಗೆ ಸೇರುವವರಿಗೆ ಉಚಿತ ತರಬೇತಿ, ವೃತ್ತಿ ಮಾರ್ಗದರ್ಶನ: ಶಿವು

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ದೇಶ ಸೇವೆಯ ಕನಸ್ಸು ಹೊತ್ತು ಸೇನಾಪಡೆಗೆ ಸೇರ ಬಯಸುವ ಯುವಕ/ಯುವತಿಯರಿಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಶಿವು ಸೈನಿಕ್ ಅಕಾಡೆಮಿ ಅಧ್ಯಕ್ಷ ಶಿವು ತಿಳಿಸಿದರು.

ಪಟ್ಟಣದ ಹರವೆ ಮಲ್ಲರಾಜಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಉಚಿತ ವೃತ್ತಿ ತರಬೇತಿ, ಮಾರ್ಗದರ್ಶನ ಕಾರ್ಯಾಗಾರ ಡೆಮೋ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ಇದೇ ಜೂನ್ 28 ರಂದು ಕೊಡಗಿನ ಮಡಿಕೇರಿಯಲ್ಲಿ ಭಾರತೀಯ ಸೇನೆಯ ರ‍್ಯಾಲಿ ನಡೆಯಲಿದ್ದು, ಈ ರ‍್ಯಾಲಿಯಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳಿಗೆ ಮುಂಚಿತವಾಗಿ ಡೆಮೋ ರ್ಯಾಲಿ ನೀಡಲಾಗುತ್ತಿದೆ. ಈ ರ‍್ಯಾಲಿಯಲ್ಲಿ ಭಾಗಿಯಾಗಲು ವಿದ್ಯಾರ್ಥಿಗಳು ಧೈರ್ಯ ಹಾಗೂ ಸ್ಥೈರ್ಯವನ್ನು ಮೈಗೂಡಿಸಿಕೊಂಡಿರಬೇಕು ಎಂದರು.

ಈ ಎಲ್ಲ ವಿಚಾರಗಳನ್ನು ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡುತ್ತಿದ್ದೇವೆ. ಸೇನಾಪಡೆಯತ್ತ ಯುವಕರನ್ನು ಆಕರ್ಷಿಸುವ ಉದ್ದೇಶದಿಂದ ನಮ್ಮ ಸಂಸ್ಥೆ ಅನೇಕ ಯೋಜನೆಗಳನ್ನು ಆರಂಭಿಸಿದೆ. ಸೇನಾ ನೇಮಕಾತಿ ರ‍್ಯಾಲಿಯ ಪರೀಕ್ಷೆ ಎದುರಿಸಲು ಅಭ್ಯರ್ಥಿಗಳನ್ನು ಸಜ್ಜುಗೊಳಿಸಲಾಗುತ್ತದೆ ಎಂದು ವಿವರಿಸಿದರು.

ಈ ತರಬೇತಿ ಶಿಬಿರಕ್ಕೆ ನೆರೆ ಜಿಲ್ಲೆ ಮತ್ತು ತಾಲೂಕುಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದು ಅವರಿಗೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡಲಾಗುತ್ತಿದೆ ಯುವಕರಲ್ಲಿ ಇದೆ ಎಂದರು.

ಶಿವು ಸೈನಿಕ್ ಅಕಾಡೆಮಿ ಕಾರ್ಯದರ್ಶಿ ಸ್ವಾಮಿ, ಸದಸ್ಯರಾದ ಮಹಾದೇವ್, ರವಿ, ಗಣೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ