NEWSದೇಶ-ವಿದೇಶ

ಭಾರತದ ಎಫ್‌ಡಿಐ ಮಾನದಂಡ ಮುಕ್ತ ವ್ಯಾಪಾರಕ್ಕೆ ವಿರುದ್ಧ

ಚೀನಾದ ರಾಯಭಾರ ಕಚೇರಿಯ ವಕ್ತಾರ ಜಿ ರಾಂಗ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಿದೇಶಿ ನೇರ ಬಂಡವಾಳ ಹೂಡಿಕೆಗಾಗಿ (ಎಫ್‌ಡಿಐ) ಭಾರತ ಮಾಡಿರುವ ಹೊಸ ಮಾನದಂಡಗಳು ವಿಶ್ವ ವ್ಯಾಪಾರ ಸಂಘಟನೆಯ ತಾರತಮ್ಯ ರಹಿತ ತತ್ವಗಳು ಹಾಗೂ ಮುಕ್ತ ವ್ಯಾಪಾರದ ಸಾಮಾನ್ಯ ಪ್ರವೃತ್ತಿಗಳಿಗೆ ವಿರುದ್ಧವಾಗಿವೆ ಎಂದು ಚೀನಾದ ರಾಯಭಾರ ಕಚೇರಿಯ ವಕ್ತಾರ ಜಿ ರಾಂಗ್ ಟೀಕಿಸಿದ್ದಾರೆ.

ಸೋಮವಾರ ಈ ಕುರಿತು ಹೇಳಿಕೆ ನೀಡಿರುವ ಚೀನಾ ಅಧಿಕಾರಿ ನಿರ್ದಿಷ್ಟ ದೇಶಗಳಿಂದ ವಿದೇಶಿ ನೇರ ಹೂಡಿಕೆಗಾಗಿ ಭಾರತ ಹೊಸದಾಗಿ ಪರಿಚಯಿಸಿರುವ ‘ಹೆಚ್ಚುವರಿ ಅಡೆತಡೆಗಳು’ ನೀತಿಗಳು ಮುಕ್ತ, ನ್ಯಾಯ ಸಮ್ಮತ, ತಾರತಮ್ಯ ರಹಿತ, ಪ್ರಾಮಾಣಿಕ ವಾತಾವರಣ ಸೃಷ್ಟಿಸಬೇಕು ಆದರೆ ಇವು ಜಿ-20 ಗುಂಪಿನಿಂದ ಹೊರಬಂದ ಒಮ್ಮತದ ನಿರ್ಣಯಗಳಿಗೂ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗ ಉಲ್ಬಣದ ನಂತರ  ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ದೇಶಗಳಿಂದ ವಿದೇಶಿ ಹೂಡಿಕೆಗಳಿಗೆ ಅನುಮತಿಯನ್ನು ಭಾರತ ಕಳೆದ ವಾರ ಕಡ್ಡಾಯಗೊಳಿಸಿದೆ. ಇದರಿಂದ ಡಬ್ಲ್ಯುಟಿಒ ತತ್ವಗಳು ಉಲ್ಲಂಘನೆಯಾಗಿವೆ ಎಂದು ತಿಳಿಸಿದ್ದಾರೆ.

ನಿರ್ದಿಷ್ಟ ರಾಷ್ಟ್ರಗಳಿಂದ ವಿದೇಶಿ ನೇರ ಹೂಡಿಕೆಗಾಗಿ ಭಾರತ ರೂಪಿಸಿರುವ ಹೆಚ್ಚುವರಿ ಅಡೆತಡೆಗಳು ನೀತಿಯಿಂದಾಗಿ ಉದಾರೀಕರಣ ಮತ್ತು ವ್ಯಾಪಾರ ಮತ್ತು ಹೂಡಿಕೆಯ ಅನುಕೂಲತೆಯ ಸಾಮಾನ್ಯ ಪ್ರವೃತ್ತಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ