NEWSಸಂಸ್ಕೃತಿಸಿನಿಪಥ

ಮಕ್ಕಳ ಮನೋರಂಜನೆಗಾಗಿ ಯೂಟ್ಯೂಬ್ ಚಾನಲ್‌ ಆರಂಭ 

“ಮಕ್ಕಳ ವಾಣಿ – ನಲಿಯೋಣ ಕಲಿಯೋಣ”  ಚಾನಲ್‌ಗೆ ಸಿಎಂ ಯಡಿಯೂರಪ್ಪ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯವು ಕೊರೊನಾ ಸಂಕಷ್ಟದಲ್ಲಿ ಇರುವ ಈ ಸಮಯದಲ್ಲಿ ಮನೆಯಲ್ಲಿ ಇರುವ ಮಕ್ಕಳ ಮನೋರಂಜನೆಗಾಗಿ ಶಿಕ್ಷಣ ಇಲಾಖೆಯು ಆರಂಭಿಸಿರುವ ಮಕ್ಕಳ ವಾಣಿ ನಲಿಯೋಣ ಕಲಿಯೋಣ ಮಕ್ಕಳ ಯೂಟ್ಯೂಬ್ ಚಾನಲ್ ನ್ನು ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಶಿಕ್ಷಣ ಇಲಾಖೆಯ ಈ ಕ್ರಮವು ಅತ್ಯಂತ ಸಕಾಲಿಕವೂ ಸಮರ್ಪಕವೂ ಆಗಿದ್ದು, ತಂತ್ರಜ್ಞಾನದ ಸದ್ಬಳಕೆಗೆ ಇದೊಂದು ಉದಾಹರಣೆಯಾಗಿದೆ ಎಂದರು.  ಶಾಲಾ ಮಕ್ಕಳು ಸುದೀರ್ಘ ಅವದಿಗೆ ಶಾಲೆಯಿಂದ ದೂರವಿರುವ ವಿದ್ಯಾರ್ಥಿಗಳಿಗೆ ಅವರ ಬುದ್ಧಿಯನ್ನು ಪ್ರಚೋದಿಸುವ ಚಟುವಟಿಕೆಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಈ ಮಾರ್ಗೋಪಾಯ ವಿನೂತನವಾಗಿದೆ ಹಾಗೂ ಸರ್ಕಾರದ ಈ ಕ್ರಮ ವಿದ್ಯಾರ್ಥಿಗಳ ಮತ್ತು ಪೋಷಕರ ಮನ ಗೆಲ್ಲಲಿದೆ ಎಂದು ಹೇಳಿದರು.

ಮನೆಯಲ್ಲಿ ಇರುವ ಮಕ್ಕಳನ್ನು ಕತೆ, ಹಾಡು, ಚಿತ್ರಕಲೆ, ಸಂಗೀತ, ಕಿರು ನಾಟಕ, ಕ್ರಾಪ್ಟ್, ಒಗಟು, ಗಾದೆ, ಮ್ಯಾಜಿಕ್, ಪದಬಂಧ ಮುಂತಾದವುಗಳ ಮೂಲಕ ತಲುಪಿ ಅವರನ್ನು ರಂಜಿಸುವುದರ ಜೊತೆಗೆ ಆಸಕ್ತಿಕರವಾದ ಕಲಿಕೆಗೆ ಅವರನ್ನು ತೊಡಗಿಸಿಕೊಳ್ಳಲು ಉದ್ದೇಶಿಸಿರುವ ಈ ಪ್ರಯತ್ನವು ಅನನ್ಯವಾಗಿದ್ದು ಈ ಯೋಜನೆಯ ರೂವಾರಿ ಶಿಕ್ಷಣ ಸಚಿವ ಶ್ರೀ ಎಸ್. ಸುರೇಶ್ ಕುಮಾರ್ ಅವರನ್ನು ಹಾಗೂ ಇಲಾಖೆಯ ಅಧಿಕಾರಿಗಳನ್ನು ಅಭಿನಂದಿಸಿದರು.

ಮಕ್ಕಳ ವಾಣಿ ಯೂಟ್ಯೂಬ್ ಚಾನಲ್ ನಲ್ಲಿ ಪ್ರಸಾರ ಮಾಡಲು ಉದ್ದೇಶಿಸಿರುವ ಕಾರ್ಯಕ್ರಮಗಳು ಇತರೆ ಮಾಧ್ಯಮಗಳಾದ ರೇಡಿಯೋ, ಟಿವಿಗಳಲ್ಲಿಯೂ ಸಹ ಪ್ರಸಾರ ಮಾಡಲು ಸೂಕ್ತವಾಗಿರುವಂತೆ ರೂಪಿಸಲಾಗಿದ್ದು ಪ್ರತಿ ದಿನ ಮುಂಜಾನೆ 10.30 ಗಂಟೆಗೆ https://www.youtube.com/channel/ UCDaVbK0F5b7y4hgSZr TwZNg ಲಿಂಕ್ನಲ್ಲಿ ಈ ಕಾರ್ಯಕ್ರಮಗಳು ಒಂದು ಗಂಟೆ ಅವಧಿಗೆ ಪ್ರಸಾರಗೊಳ್ಳಲಿವೆ.

ಈ ಚಾನಲ್ನಲ್ಲಿ ಪ್ರಸಾರ ಮಾಡುವ ಕಾರ್ಯಕ್ರಮಗಳನ್ನು ಶಿಕ್ಷಕರು, ಶಿಕ್ಷಣಾಸಕ್ತರು ತಯಾರಿಸಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದು ಸ್ವೀಕೃತವಾಗುವ ಸಾಮಗ್ರಿಗಳನ್ನು ಅವುಗಳ ನಾವೀನ್ಯತೆ, ಸೂಕ್ತತೆ ಹಾಗೂ ಸಮಂಜಸತೆಯ ಬಗ್ಗೆ ಪರಿಶೀಲಿಸಿ ಪ್ರಸಾರ ಮಾಡುವ ನಿರ್ಧಾರವನ್ನು ಇದಕ್ಕಾಗಿಯೇ ರಚಿಸಲಾಗಿರುವ ಸಂಪಾದಕ ಮಂಡಳಿಯು ತೆಗೆದುಕೊಳ್ಳಲಿದೆ ಎಂದಿದ್ದಾರೆ.

ಮಕ್ಕಳ ಮನೋರಂಜನೆಗಾಗಿ ಅತ್ಯುತ್ತಮ ಗುಣಮಟ್ಟದ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಉದ್ದೇಶವನ್ನು ಹೊಂದಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದು ಮಕ್ಕಳ ವಾಣಿ ನಲಿಯೋಣ ಕಲಿಯೋಣ ಚಾನಲ್ ನಲ್ಲಿ ಪ್ರತಿದಿನ ಬೆಳಗ್ಗೆ 10.30 ಗಂಟೆಗೆ ಪ್ರಸಾರಗೊಳ್ಳುವ ಕಾರ್ಯಕ್ರಮಗಳನ್ನು ವೀಕ್ಷಿಸಲು ರಾಜ್ಯದ ಎಲ್ಲಾ ಶಿಕ್ಷಕರು, ಪೋಷಕರು ತಮ್ಮ ಮಕ್ಕಳಿಗೆ ಪ್ರೇರೇಪಿಸಬೇಕೆಂದು ಮನವಿ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ