NEWSವಿಜ್ಞಾನ-ತಂತ್ರಜ್ಞಾನ

ಮೃಗಾಲಯಕ್ಕೆ ಎಸ್.ಟಿ.ಸೋಮಶೇಖರ್ ಬಳಗದಿಂದ  1.19 ಕೋಟಿ ರೂ. ದೇಣಿಗೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಈಗಾಗಲೇ ಮೈಸೂರು ಮೃಗಾಲಯಕ್ಕೆ 73.60 ಲಕ್ಷ ರೂ. ದೇಣಿಗೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಶನಿವಾರ ಎರಡನೇ ಬಾರಿಗೆ 45.30 ಲಕ್ಷ ರೂಪಾಯಿ ಚೆಕ್ ನೀಡಿದ್ದು, ಈ ಮೂಲಕ ಒಟ್ಟು 1 ಕೋಟಿ 18 ಲಕ್ಷ 90 ಸಾವಿರ ರೂಪಾಯಿಯನ್ನು ಮೃಗಾಲಯಕ್ಕೆ ಹಸ್ತಾಂತರ ಮಾಡಿದ್ದಾರೆ.

ಮೃಗಾಲಯದ ಸ್ಥಿತಿ-ಗತಿ ಪರಿಶೀಲನೆ ನಡೆಸಲು  ಆಹಾರ ಸಚಿವ ಗೋಪಾಲಯ್ಯ ನವರ ಜೊತೆ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದ್ದು, ಈ ವೇಳೆ ತಮ್ಮ ಕ್ಷೇತ್ರದ ಜನರಿಂದ ಸಂಗ್ರಹಿಸಿದ 45.30 ಲಕ್ಷ ರೂ. ಚೆಕ್ ಅನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಅಜಿತ್ ಕುಲಕರ್ಣಿ ಅವರಿಗೆ ಹಸ್ತಾಂತರ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಮೈಸೂರು ಮೃಗಾಲಯದ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಾನು ಎಲ್ಲ ಸಚಿವರು, ವಿಧಾನಪರಿಷತ್ ಸದಸ್ಯರು ಹಾಗೂ ಶಾಸಕರು ಸೇರಿದಂತೆ ಸಮಾಜದ ಗಣ್ಯರು ಮತ್ತು ನಾಗರಿಕರಿಗೆ ಮನವಿ ಮಾಡಿ ಆರ್ಥಿಕ ಸಹಾಯ ಮಾಡುವಂತೆ ಈಗಾಗಲೇ ಕೋರಿದ್ದೇನೆ. ಅಲ್ಲದೆ, ನನ್ನ ಕ್ಷೇತ್ರದಿಂದ ಈಗ 2ನೇ ಬಾರಿ 45.30 ಲಕ್ಷ ರೂಪಾಯಿಯನ್ನು ಸಂಗ್ರಹಿಸಿ ಮೃಗಾಲಯಕ್ಕೆ ನೀಡುತ್ತಿದ್ದೇನೆ ಎಂದು ತಿಳಿಸಿದರು.

 8 ಲಕ್ಷ ರೂ. ದೇಣಿಗೆ ನೀಡಿದ ಸಚಿವ ಗೋಪಾಲಯ್ಯ
ಆಹಾರ ಸಚಿವ ಕೆ.ಗೋಪಾಲಯ್ಯ  ವೈಯಕ್ತಿಕವಾಗಿ ಮೈಸೂರು ಜಯಚಾಮರಾಜೇಂದ್ರ ಮೃಗಾಲಯದ ನಿರ್ವಹಣಿಗೆ 8 ಲಕ್ಷ ರೂ. ಹಾಗೂ ಮೃಗಾಲಯದ 300 ಮಂದಿ ಸಿಬ್ಬಂದಿಗೆ ತಲಾ 25 ಕೆ.ಜಿ. ಅಕ್ಕಿಯನ್ನು ನೀಡಿದರು.

ಮೈಸೂರು ಜಯಚಾಮರಾಜೇಂದ್ರ ಮೃಗಾಲಯ ಪರಿಶೀಲನೆಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರೊಡನೆ ಭೇಟಿ ನೀಡಿದ ಸಚಿವ ಗೋಪಾಲಯ್ಯ ಅವರು, ಮೃಗಾಲಯವನ್ನು ಪರಿಶೀಲಿಸಿ ಅಲ್ಲಿನ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಬಳಿಕ ಅವರು 8 ಲಕ್ಷ ರೂಪಾಯಿ ಹಾಗೂ ಮೃಗಾಲಯದ 300 ಮಂದಿ ಸಿಬ್ಬಂದಿಗೆ ತಲಾ 25 ಕೆ.ಜಿ. ಅಕ್ಕಿಯನ್ನು ದೇಣಿಗೆಯಾಗಿ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಮೂಲಕ ಹಸ್ತಾಂತರಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು