CrimeNEWS

ಮಗಳ ಅದ್ದೂರಿ ಮದುವೆ: ಶಾಸಕ ಜಮೀರ್ ಮನೆ ಮೇಲೆ ಇಡಿ ದಾಳಿಗೆ ಕಾರಣವಾಯ್ತ..!?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಮನೆ ಮೇಲೆ ನಡೆದ ಇಡಿ ಅಧಿಕಾರಿಗಳ ದಾಳಿ ಸತತ 23 ಗಂಟೆ ಗಳ ಬಳಿಕ ಅಂತ್ಯವಾಗಿದೆ.

ಇಡಿ ದಾಳಿಗೆ ಪ್ರಮುಖ ಕಾರಣಗಳನ್ನು ನೋಡುತ್ತಾ ಹೋದರೆ ಮೊದಲಿಗೆ ಸಿಗೋದೆ ಜಮೀರ್ ಅವರ ಮಗಳ ಮದುವೆ ಅದ್ದೂರಿಯಾಗಿ ಮಾಡಿದ್ದು ಎಂಬ ವದಂತಿ ಹರಿದಾಡುತ್ತಿದೆ.

ಜಮೀರ್ ಮನೆ ಮೇಲಿನ ಇಡಿ ದಾಳಿ ಏಕಾಯಿತು ಎಂಬುವುದು ಎಲ್ಲರ ಕುತೂಹಲವಾಗಿದೆ. ಈ ದಾಳಿಗೆ ಮೊದಲ ಕಾರಣ ಜಮೀರ್ ಅವರ ಮಗಳ ಅದ್ದೂರಿ ಮದುವೆ ಎಂಬ ಮಾತು ಕೇಳಿಬರುತ್ತಿದೆ.

ಕಳೆದ ಜುಲೈ 22 ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ನಡೆದ ಆ ಅದ್ದೂರಿ ಮದುವೆ ಯಾವ ಮಹಾರಾಜರ ಮದುವೆಗೂ ಕಡಿಮೆ ಇರಲಿಲ್ಲ. ಬಾಲಿವುಡ್ ನಟ -ನಟಿಯರು, ರಾಜಕೀಯ ಮುಖಂಡರು, ಉದ್ಯಮಿಗಳು ಸೇರಿದಂತೆ ಗಣ್ಯರು ಮದುವೆಗೆ ಆಗಮಿಸಿ ವಧು ವರರಿಗೆ ಶುಭ ಕೋರಿದ್ದರು.

ಮಗಳ ಮೈಮೇಲೆ ಲಕ್ಷಾಂತರ ರೂ. ಮೌಲ್ಯದ ಕೆಜಿ, ಕೆಜಿ ಚಿನ್ನಾಭರಣ, ಲಕ್ಷಾಂತರ ರೂ. ಬೆಲೆಯ ಬಟ್ಟೆಗಳು. ಅಣ್ಣ ಅಂದವರಿಗೆ ಕೈತುಂಬಾ ಕಾಸು, ಮದುವೆಗೆ ಬಂದವರಿಗೆ ಬೆಲೆಬಾಳುವ ವಸ್ತ್ರಗಳನ್ನು ಉಡುಗೊರೆಯಾಗಿ ನೀಡಿದ್ದರು. ಇದು ಇಡಿ ಕಣ್ಣು ಇವರತ್ತ ಬೀಳಲು ಪ್ರಮುಖ ಕಾರಣಗಳಲ್ಲಿ ಒಂದು ಎಂದು ಹೇಳಲಾಗುತ್ತಿದೆ.

ಮದುವೆಯ ಅಲಂಕಾರಕ್ಕೆ ವಿದೇಶದಿಂದ ಬಂದಿದ್ದ ವಸ್ತ್ರಗಳ ಅಲಂಕಾರಿಗರು, ಹೀಗೆ ಹಲವು ವಿಶೇಷತೆಯಿಂದ ಅದ್ದೂರಿಯಾಗಿ ಮದುವೆ ನಡೆದಿತ್ತು. ಐಎಂಎ ಸಂಸ್ಥಾಪಕ ಮಾನ್ಸೂರ್ ಖಾನ್ ಕೊಟ್ಟ ಕೋಟ್ಯಂತರ ಹಣ, ಕೆಜಿಗಟ್ಟಲೇ ಚಿನ್ನಾಭರಣವನ್ನು ಜಮೀರ್‌ಗೆ ನೀಡಿರುವ ಬಗ್ಗೆ ಆರೋಪ ಕೂಡ ಕೇಳಿಬಂದಿತ್ತು.

ಹಾಗಾಗಿ ಈ ಎಲ್ಲದರಲ್ಲೂ ಇಡಿ ದಾಳಿಗೆ ಇದು ಕೂಡ ಒಂದು ಕಾರಣವಾಗಿದೆ. ಇದರೊಂದಿಗೆ ಮಗಳ ಅದ್ದೂರಿ ಮದುವೆ ನಂತರ ಐಟಿ ಮತ್ತು ಇಡಿಗೆ ಸುಳ್ಳು ಲೆಕ್ಕ ತೋರಿಸಿರುವ ಬಗ್ಗೆ ಮಾಹಿತಿ ಹೋಗಿದೆ ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು