NEWSನಮ್ಮರಾಜ್ಯಸಂಸ್ಕೃತಿ

ಮುಂಜಾನೆಯ ದಟ್ಟ ಮಂಜಿನ ನಡುವೆಯು ವಿಶ್ವದಾಖಲೆಗಾಗಿ ಯೋಗಾಯೋಗ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ/ಬೀದರ್‌ : ಮುಂಜಾನೆ ದಟ್ಟ ಮಂಜಿನ ನಡುವೆಯು ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡುವ ಮೂಲಕ ವಿಶ್ವದಾಖಲೆ ಮಾಡಲು ಹೊರಟಿದ್ದಾರೆ.

ಹೌದು ಭಾನುವಾರ   ಬೆಳ್ಳಂಬೆಳಗ್ಗೆ ವಿಶ್ವದಾಖಲೆಗಾಗಿ 12 ಸಾವಿರ ವಿದ್ಯಾರ್ಥಿಗಳು ಏಕಕಾಲಕ್ಕೆ ಹಾವೇರಿಯ ಕ್ರೀಡಾಂಗಣದಲ್ಲಿ ದಟ್ಟವಾದ ಮಂಜಿನೊಂದಿಗೆಯೇ ಯೋಗಾಭ್ಯಾಸ ಮಾಡಿದ ದೃಶ್ಯ ನೋವುದಕ್ಕೂ ಮೈ ನವಿರೇಳಿಸುವಂತಿತ್ತು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವದಾಖಲೆಗಾಗಿ ಯೋಗಾಥಾನ್ ಕಾರ್ಯಕ್ರಮ ಆಯೋಜನೆಗೊಂಡಿತು. ದಟ್ಟವಾದ ಮಂಜಿನಲ್ಲೇ ಕುಳಿತು ಜಿಲ್ಲೆಯ ವಿವಿಧ ಶಾಲಾ – ಕಾಲೇಜುಗಳಿಂದ ಆಗಮಿಸಿದ್ದ 12 ಸಾವಿರ ವಿದ್ಯಾರ್ಥಿಗಳು ಯೋಗಾಥಾನ್‌ನಲ್ಲಿ ಭಾಗಿಯಾಗಿದ್ದರು.

ಆ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಪಂ ಸಿಇಒ  ಮೊಹಮ್ಮದ ರೋಷನ್, ಎಸ್ಪಿ ಹನುಮಂತರಾಯ, ಶಾಸಕ ನೆಹರು ಓಲೇಕಾರ, ನಗರಸಭೆ ಅಧ್ಯಕ್ಷ ಸಂಜೀವ ನೀರಲಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಯೋಗಾಥಾನ್‌ನಲ್ಲಿ ಭಾಗವಹಿಸುವ ಮೂಲಕ ಸಾಥ್‌ ನೀಡಿದರು.

ಬೀದರ್‌ನಲ್ಲೂ 3 ಸಾವಿರಕ್ಕೂ ಜನ ಭಾಗಿ: ರಾಜ್ಯಾದ್ಯಂತ ಗಿನ್ನಿಸ್ ದಾಖಲೆಗಾಗಿ‌ ನಡೆಯುತ್ತಿರುವ ಯೋಗಾಥಾನ್ ಕಾರ್ಯಕ್ರಮದಲ್ಲಿ ಗಡಿ ಜಿಲ್ಲೆ ಬೀದರ್‌ನಲ್ಲಿ 3 ಸಾವಿರಕ್ಕೂ ಹೆಚ್ಚು ಜನ ಏಕಕಾಲಕ್ಕೆ ಯೋಗದಲ್ಲಿ ಭಾಗಿಯಾದರು. ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಬೀದರ್ ನಗರದ ನೆಹರೂ ಸ್ಟೇಡಿಯಂನಲ್ಲಿ ಯೋಗಾಥಾನ್ ಕಾರ್ಯಕ್ರಮ ನಡೆಯಿತು.

ಯೋಗಾಥಾನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಚಾಲನೆ ನೀಡಿದ್ದು, ಎಸ್ಪಿ ಕಿಶೋರ್ ಬಾಬು, ಶಾಸಕ ರಹೀಂಖಾನ್, ಯೋಗಪಟುಗಳು, ಶಾಲಾ – ಕಾಲೇಜಿನ ವಿದ್ಯಾರ್ಥಿಗಳು, ಅಧಿಕಾರಿಗಳು, ಸಾರ್ವಜನಿಕರು ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು