NEWSವಿಜ್ಞಾನ-ತಂತ್ರಜ್ಞಾನಸಂಸ್ಕೃತಿ

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣಗೆ ಪದ್ಮವಿಭೂಷಣ, ಸುಧಾಮೂರ್ತಿ, ಭೈರಪ್ಪಗೆ ಪದ್ಮ ಭೂಷಣ ಪ್ರಶಸ್ತಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ, ಸುಧಾಮೂರ್ತಿ, ಎಸ್‍ಎಲ್ ಭೈರಪ್ಪ ಅವರಿಗೆ ಪದ್ಮ ಭೂಷಣ ಹಾಗೂ 5 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.

2023ನೇ ಸಾಲಿನ ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ. ಈ ಬಾರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ ಲಭಿಸಿದೆ. ಒಬ್ಬರಿಗೆ ಪದ್ಮವಿಭೂಷಣ, ಇಬ್ಬರಿಗೆ ಪದ್ಮಭೂಷಣ, 5 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ.

ಖಾದರ್ ವಲ್ಲಿ ದೂದೇಕುಲ (ವಿಜ್ಞಾನ ಮತ್ತು ಇಂಜಿನಿಯರಿಂಗ್), ರಾಣಿ ಮಾಚಯ್ಯ (ಕಲೆ), ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ (ಕಲೆ), ಐ ಶಾ ರಶೀದ್ ಅಹಮದ್ ಕ್ವಾದ್ರಿ (ಕಲೆ), ಸುಬ್ಬರಾಮನ್ (ಪುರಾತತ್ವ ಶಾಸ್ತ್ರ) ಅವರಿಗೆ ಪದ್ಮ ಪ್ರಶಸ್ತಿ ಲಭಿಸಿದೆ.

ಮೋದಿ ಪ್ರಧಾನಿಯಾಗಿದ್ರಿಂದ ನನಗೆ ಪ್ರಶಸ್ತಿ ಬಂತು: ನರೇಂದ್ರ ಮೋದಿ ಅವರು ಪ್ರಧಾನಿ ಆದ ಕಾರಣವೇ ನನಗೆ ಪದ್ಮಭೂಷಣ ಪ್ರಶಸ್ತಿ ಬಂತು. ಇಲ್ಲದೆ ಇದ್ದರೆ ಬರುತ್ತಿರಲಿಲ್ಲ ಎಂದು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹೇಳಿದ್ದಾರೆ.

ಮೈಸೂರಿನ ಕುವೆಂಪು ನಗರದ ತಮ್ಮ ನಿವಾಸದಲ್ಲಿ ಶಾಸಕ ರಾಮದಾಸ್ ಅವರಿಂದ ಸನ್ಮಾನ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮೋದಿ ಅವರು ಪ್ರಧಾನಿ ಆದ ಕಾರಣವೇ ನನಗೆ ಈ ಪ್ರಶಸ್ತಿ ಬಂತು.

ಇಲ್ಲದೆ ಇದ್ದರೆ ಬರುತ್ತಿರಲಿಲ್ಲ. ಲೇಖಕ ಸತ್ತೇ ಸಾಯುತ್ತಾನೆ. ಆದರೆ ಅವನು ಬರೆದ ಪುಸ್ತಕ ಎಷ್ಟು ದಿನ ಪ್ರಸ್ತುತ ಇರುತ್ತದೋ ಅಲ್ಲಿಯವರೆಗೆ ಲೇಖಕ ಸದಾ ಜೀವಂತ. ನನ್ನ ಕೃತಿಗಳಿಗೆ ಅಂತಹ ಶಕ್ತಿ ಇದ್ದರೆ ನನಗೆ ಸಂತೋಷ ಎಂದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು