NEWSನಮ್ಮರಾಜ್ಯರಾಜಕೀಯ

ಮಾಜಿ ಸಿಎಂ ಡಿವಿಎಸ್‌ ಅವರಾಗೇ ರಾಜಕೀಯ ನಿವೃತ್ತಿ ಘೋಷಿಸಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ವಿಜಯಪಥ ಸಮಗ್ರ ಸುದ್ದಿ

ಈಗ ಈಶ್ವರಪ್ಪ ಪಕ್ಷ ಬಿಡ್ತಾರಾ?, ಸಂಸದ ಶ್ರೀನಿವಾಸಪ್ರಸಾದ್‌ ಕೂಡ ನಿವೃತ್ತಿ ಘೋಷಣೆ ಮಾಡಲು ಸಿದ್ಧ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಲಿ ಸಂಸದ ಡಿ.ವಿ.ಸದಾನಂದಗೌಡ ಅವರು ಸೇರಿದಂತೆ ಬೇರೆ ನಾಯಕರು ಸ್ವಯಂ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದು ಬಿಜೆಪಿಯ ಈ ನಾಯಕರು ಸ್ವಯಂ ನಿವೃತ್ತಿ ಘೋಷಣೆ ಮಾಡಿರುವುದಲ್ಲ, ಒತ್ತಾಯದಿಂದ ಆಗಿರುವುದು ಎಂದು ಕಾಂಗ್ರೆಸ್‌ ನಾಯಕ, ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮಾಜಿ ಸಚಿವರು ಆದ ಸದಾನಂದಗೌಡ ಅವರು ಮಾನಸಿಕವಾಗಿ, ದೈಹಿಕವಾಗಿ ಫಿಟ್ ಇದ್ದಾರೆ, ಆದರೂ ನಿವೃತ್ತಿ ಘೊಷಣೆ ಮಾಡಿದ್ದಾರೆ ಎಂದರೆ, ಬಿಜೆಪಿಯವರು ತಮ್ಮ ನಾಯಕರನ್ನೇ ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂಬುವುದು ತಿಳಿಯುತ್ತದೆ. ಅವರು ನೊಂದು ಪಕ್ಷವನ್ನು ಬಿಟ್ಟಿದ್ದಾರೆ ಎಂದು ಕುಟುಕಿದರು.

ಸದಾನಂದಗೌಡ ಅವರು ದೆಹಲಿಗೆ ಹೋದರು ಬಾಗಿಲು ತೆಗೆದಿಲ್ಲ. ಬಿಜೆಪಿ ವರ್ಸಸ್ ಬಿಜೆಪಿ ಆಗಿದೆ. ಬಿಜೆಪಿ ಬಿಟ್ಟು ಎಷ್ಟು ಜನ ಬರ್ತಾರೆ ನೀವೆ ನೋಡಿ. ಬೂತ್ ಮಟ್ಟ, ಸಂಘದಲ್ಲಿ‌ ಕೆಲಸ ಮಾಡಿದ್ದೇನೆ, ಸಚಿವನಾಗಿದ್ದೆ. ನಾನು ಏನು ಮಾತನಾಡಿದರು ತಿರುಗುಬಾಣ ಆಗಲಿದೆ ಎಂದು ತಿಳಿಸಿದ್ದರು.

ಈಗ ಈಶ್ವರಪ್ಪ ಪಕ್ಷ ಬಿಡ್ತಾರಾ?: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಎಲ್ಲಿಗೆ ಹೋದರು? ಈಶ್ವರಪ್ಪ ನನಗೆ ಬಚ್ಚಾ ಎನ್ನುತ್ತಿದ್ದರು, ಈಗ ಹೋಗಿ ಮಂಡಿ ಊರುತ್ತೀರಾ? ಮೊದಲು ನಿಮ್ಮ ಮನೆಯನ್ನು ನೋಡಿಕೊಳ್ಳಿ. ಬಿಜೆಪಿ ಲೆಕ್ಕಾಚಾರ ಏನು ಅನ್ನೋದು ಅವರಿಗೆ ಬಿಟ್ಟಿದು. ನಾವು ನಮ್ಮ ಬಲದ ಮೇಲೆ ತಂತ್ರಗಾರಿಕೆ ಮಾಡ್ತೇವೆ. ಸಮುದಾಯ ಬೆಂಬಲ ಇಲ್ಲ ಎಂದು ಒಪ್ಪಿಕೊಂಡಂಗೆ ಅಲ್ವಾ ಎಂದು ಪ್ರಿಯಾಂಕ್ ಖರ್ಗೆ ಚಾಟಿ ಬೀಸಿದ್ದಾರೆ.

ಈ ನಡುವೆ ಚಾಮರಾಜನಗರ ಸಂಸದ ಶ್ರೀನಿವಾಸ್‌ ಪ್ರಸಾದ್‌ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಜ್ಯ ಮತ್ತು ಕೇಂದ್ರ ನಾಯಕರು ಯೋಚನೆ ಮಾಡಲಿ, ಕರ್ನಾಟಕದಲ್ಲಿ ನಾವು ಯಾವ ರೀತಿ ದಿವಾಳಿ ಆಗುತ್ತಿದ್ದೇವೆ ಎಂದು ವ್ಯಂಗ್ಯವಾಗಿ ಕುಟುಕಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ