NEWSಕೃಷಿನಮ್ಮರಾಜ್ಯ

ಮಂಡ್ಯ-ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ: ರೈತರ, ಸಿಎಂ ಮುಖದಲ್ಲಿ ಮಂದಹಾಸ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಈ ವರ್ಷದ ವರುಣ ರಾಜ್ಯದಲ್ಲಿ ಅಬ್ಬರಿಸುತ್ತಿದ್ದು, ಕೆರೆ, ಕಟ್ಟೆಗಳು ತುಂಬುತ್ತಿವೆ. ಇದರಿಂದ ಅನ್ನದಾತರಿಗಂತೂ ಸಂತಸ ಮನೆ ಮಾಡಿದ್ದು, ಉತ್ತಮ ಬೆಳೆ ತೆಗೆಯುವುದಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಜತೆಗೆ ಈ ಬಾರಿ ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಸರ್ಕಾರಕ್ಕೂ ಖುಷಿಯ ವಿಷಯವಾಗಿದೆ.

ಹೌದು! ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದೆ ಹೀಗಾಗಿ ಕೃಷ್ಣರಾಜ ಸಾಗರ ಅಣೆಕಟ್ಟೆಗೆ ನೀರು ಹರಿದು ಬರುತ್ತಿದೆ. ಇದು ರೈತರ ಮತ್ತು ರಾಜ್ಯದ ಮುಖ್ಯಮಂತ್ರಿಗಳ ಮುಖದಲ್ಲೂ ಮಂದಹಾಸ ಮೂಡುವಂತೆ ಮಾಡಿದೆ.

ರಾಜ್ಯದಲ್ಲಿ ಕಾವೇರಿ ಒಡಲನ್ನೇ ನಂಬಿಕೊಂಡೇ ಕೋಟ್ಯಂತರ ಕುಟುಂಬಗಳು ಜೀವನ ನಡೆಸುತ್ತಿವೆ. ಕೃಷಿ, ಕುಡಿಯಲು ಕಾವೇರಿಯನ್ನೇ ನಂಬಿರುವ ಕೋಟ್ಯಂತರ ಕುಟುಂಬಗಳಿವೆ. ಆದರೆ ಕಳೆದ ವರ್ಷ ಕಾವೇರಿ ನೀರಿನ ಅಭಾವ ಉಂಟಾಗಿ ಬೆಂಗಳೂರಿನ ಜನತೆಯೂ ತತ್ತರಿಸಿ ಹೋಗಿದ್ದರು. ಈ ವರ್ಷದ ವರುಣನ ಅಬ್ಬರ ನೋಡಿದರೆ ಕೆಆರ್​ಎಸ್ ಅತೀ ಶೀಘ್ರದಲ್ಲೇ ತುಂಬಲಿದೆ ಎಂಬ ಭರವಸೆ ಮೂಡುತ್ತಿದೆ.

ಇನ್ನು ಇಂದಿನ ಕೆಆರ್‌ಎಸ್ ನೀರಿನ ಮಟ್ಟ ತಿಳಿಯುವುದಾದರೆ:
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 84.95 ಅಡಿ
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 13.142 ಟಿಎಂಸಿ
ಒಳ ಹರಿವು – 1,423 ಕ್ಯೂಸೆಕ್
ಹೊರ ಹರಿವು – 444 ಕ್ಯೂಸೆಕ್

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ