NEWSನಮ್ಮಜಿಲ್ಲೆನಮ್ಮರಾಜ್ಯ

ಮಂಡ್ಯ ಜಿಲ್ಲೆ ಕೊಡಿಯಾಲ: KSRTC ಬಸ್‌ ತಡೆದು ಶಾಲಾ- ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಶ್ರೀರಂಗಪಟ್ಟಣ : ಸರಿಯಾದ ಸಮಯಕ್ಕೆ ಬಸ್‌ಗಳು ಬರದೆ ಶಾಲಾ- ಕಾಲೇಜಿಗೆ ತೆರಳಲು ತೊಂದರೆಯಾಗುತ್ತಿದೆ ಎಂದು ರೊಚ್ಚಿಗೆದ್ದ ವಿದ್ಯಾರ್ಥಿಗಳು ಗ್ರಾಮಸ್ಥರ ಜೊತೆಗೂಡಿ ತಾಲೂಕಿನ ಕೊಡಿಯಾಲ ಗ್ರಾಮದಲ್ಲಿ ರಸ್ತೆ ತಡೆ ನಡೆಸಿದರು.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ಜನಪ್ರತಿನಿಧಿಗಳು ಮತ್ತು ಸಾರಿಗೆ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೊಡಿಯಾಲ ಗ್ರಾಮ ಸೇರಿ ಸುತ್ತಮುತ್ತಲ ಗ್ರಾಮದ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಿತ್ಯ ಮೈಸೂರು ಮಂಡ್ಯದ ವಿವಿಧ ಶಾಲಾ- ಕಾಲೇಜುಗಳಿಗೆ ತರಳುತ್ತಾರೆ. ಆದರೆ ಸಕಾಲದಲ್ಲಿ ಬಸ್‌ಗಳು ಬಾರದ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕೆ ಶಾಲೆಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಬಸ್‌ಗಳು ಬಂದರೂ ಸಹ ವಿದ್ಯಾರ್ಥಿಗಳು ಮತ್ತು ಇತರೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಮುಂದಾಗುತ್ತಿಲ್ಲ, ವಿದ್ಯಾರ್ಥಿಗಳ ಜತೆ ಉಡಾಫೆಯಾಗಿ ವರ್ತಿಸುತ್ತಾರೆ. ನಿಲ್ದಾಣಗಳಲ್ಲಿ ನಿಲುಗಡೆ ಮಾಡದೆ ಸ್ವಲ್ಪ ದೂರ ಮುಂದೆ ಹೋಗಿ ನಿಲ್ಲಿಸುತ್ತಾರೆ. ಅಲ್ಲದೆ ಬಸ್‌ಗಳಲ್ಲಿ ಪ್ರಯಾಣಿಕರು ತುಂಬಿದ್ದಾರೆ ಎಂದು ನಿಲ್ಲಿಸದೆ ಹೋಗುತ್ತಾರೆ ಎಂದು ಅಳಲು ತೋಡಿಕೊಂಡರು.

ಪೊಲೀಸರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಮನವೊಲಿಕೆಗೆ ಮುಂದಾದರೂ ಸಹ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ ನಿಗಮದ ಅಧಿಕಾರಿಯೊಬ್ಬರು ಸ್ಥಳಕ್ಕೆ ಭೇಟಿ ನೀಡಿ ಬಸ್‌ಗಳು ಸಕಾಲಕ್ಕೆ ಬರುವಂತೆ ನೋಡಿಕೊಳ್ಳಲಾಗುವುದು ಅಷ್ಟೇ ಅಲ್ಲದೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ರಸ್ತೆ ತಡೆ ವಾಪಸ್ ಪಡೆದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!