CrimeNEWSನಮ್ಮಜಿಲ್ಲೆ

ಮಂಡ್ಯ: ಸಂಸದರು ಗುಡುಗಿದ ಬೆನ್ನಲ್ಲೇ ಅಕ್ರಮ ಗಣಿಗಾರಿಕೆ ಅಡ್ಡೆ ಮೇಲೆ ತಹಸೀಲ್ದಾರ್‌ ದಾಳಿ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಸಂಸದೆ ಸುಮಲತಾ ಅಕ್ರಮ ಗಣಿಗಾರಿಕೆಯಿಂದ ಕೆಅರ್‌ಎಸ್‌ ಡ್ಯಾಂ ಬಿರುಕು ಬಿಟ್ಟಿದೆ ಎಂಬ ಹೇಳಿಕೆ ನೀಡಿ ಅಕ್ರಮ ಗಣಿಗಾರಿಕೆ ಮೇಲೆ ದಾಳಿ ಮಾಡಲು ಹೊರಟ ಬೆನ್ನಲ್ಲೇ ಶ್ರೀರಂಗಪಟ್ಟಣ ತಹಸೀಲ್ದಾರ್ ಅಕ್ರಮ ಗಣಿಗಳ ಮೇಲೆ ದಾಳಿ ನಡೆಸಿ ಬಂದ್ ಮಾಡಿಸಿದ್ದಾರೆ.

ಶ್ರೀರಂಗಪಟ್ಟಣದ ಚೆನ್ನನಕೆರೆ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಕ್ವಾರೆ ಹಾಗೂ ಶ್ರೀರಂಗಪಟ್ಟಣ ಕ್ವಾರೆಗಳ ಮೇಲೆ ತಹಸೀಲ್ದಾರ್ ರೂಪಾ ಇಂದು ಪೊಲೀಸರ ಜತೆಗೆ ದಾಳಿ ಮಾಡಿ ಬಂದ್ ಮಾಡಿಸಿದ್ದಾರೆ.

ಇತ್ತೀಚೆಗಷ್ಟೇ ಈ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಸಂಸದೆ ಸುಮಲತಾ ಅವರು ಅಕ್ರಮ ಕಲ್ಲು ಕ್ವಾರೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಅಧಿಕಾರಿಗಳು ಅಕ್ರಮ ಗಣಿಗಾಕೆ ಮೇಲೆ ದಾಳಿ ಮಾಡಿದ್ದು, ಕಲ್ಲು ಗಣಿಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಕೆರೆ ಮತ್ತು ಹಂಗರಹಳ್ಳಿಯಲ್ಲಿ ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಮನೆಗಳನ್ನು ನೋಡಿ ಸಂಸದರು ಶಾಕ್ ಆಗಿದ್ದರು. ಈ ವೇಳೆ ಮಾಜಿ ಶಾಸಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಭೇಟಿ ನೀಡುವಂತೆ ಘೋಷಣೆ ಕೂಗಿದರು. ಆ ಬಳಿಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಸುಮಲತಾ ಭೇಟಿ ನೀಡಿ ಪರಿಶೀಲಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು