NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಮಣಿಪುರ ಹಿಂಸಾಚಾರ- ಪ್ರಧಾನಿ ಮೋದಿ ರಾಜೀನಾಮೆಗೆ ಎಎಪಿ ಪಟ್ಟು, ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೂರು ತಿಂಗಳಿನಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ರಾಷ್ಟ್ರದ ಜನತೆಯ ಮುಂದೆ ಕ್ಷಮೆಯಾಚಿಸಿ ರಾಜೀನಾಮೆ ನೀಡಬೇಕೆಂದು ರಾಜ್ಯ ಆಮ್ ಆದ್ಮಿ ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಅಗ್ರಹಿಸಿದ್ದಾರೆ.

ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮಣಿಪುರ ರಾಜ್ಯದಲ್ಲಿನ ವರ್ಗ ಸಂಘರ್ಷಗಳನ್ನು ಹತ್ತಿಕ್ಕುವ ಬದಲು ಕೇಂದ್ರ ಸರ್ಕಾರ ತಾನೇ ಖುದ್ದಾಗಿ ನಿಂತು ವೋಟ್ ರಾಜಕಾರಣಕ್ಕಾಗಿ ಹಿಂಸಾಚಾರಗಳಿಗೆ ಆಸ್ಪದ ನೀಡುತ್ತಿರುವ ದುರುಳ ನೀತಿಯನ್ನು ಖಂಡಿಸಲೇ ಬೇಕಾಗಿದೆ ಎಂದು ಹೇಳಿದರು.

ಗೃಹ ಸಚಿವರು ಖುದ್ದಾಗಿ ಐದು ದಿನಗಳ ಕಾಲ ಮಣಿಪುರ ರಾಜ್ಯದಲ್ಲಿ ಮೊಕ್ಕಾಂ ಹೂಡಿ ಬಂದಿದ್ದರೂ ಸಹ ಹಿಂಸಾಚಾರವನ್ನು ತಹ ಬದಿಗೆ ತರಲು ಸಾಧ್ಯವಾಗಲಿಲ್ಲ. ಎರಡು ತಿಂಗಳುಗಳ ಹಿಂದೆ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಬೆತ್ತಲೆ ಪೆರೇಡ್ ಮಾಡಿದ ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಪ್ರಕರಣವನ್ನು ಮುಚ್ಚಿ ಹಾಕುವ ಕೇಂದ್ರ ಸರ್ಕಾರದ ತಂತ್ರಗಾರಿಕೆ ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.

ಇನ್ನು ಈ ಬಗ್ಗೆ ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚಿಸದೆ ನಮ್ಮ ಪಕ್ಷದ ಸಂಸದ ಸಂಜಯ್ ಸಿಂಗ್ ಅವರನ್ನು ಸಂಪೂರ್ಣ ಅವಧಿಗೆ ಅಮಾನತು ಮಾಡಿರುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ನಡೆ. ಇಂದು ವಿಶ್ವದಲ್ಲಿ ಭಾರತವು ತಲೆತಗ್ಗಿಸುವಂತಹ ಪರಿಸ್ಥಿತಿಗೆ ತಳ್ಳಿರುವ ವಿಶ್ವಗುರು ನರೇಂದ್ರ ಮೋದಿಯವರು ಈ ಕೂಡಲೇ ರಾಷ್ಟ್ರದ ಜನತೆಯ ಮುಂದೆ ಕ್ಷಮೆ ಯಾಚಿಸಿ ರಾಜೀನಾಮೆ ಕೊಟ್ಟು ತೊಲಗಬೇಕು ಎಂದು ನಾಗಣ್ಣ ಆಗ್ರಹಿಸಿದರು.

ಮಹಿಳಾ ಘಟಕದ ಅಧ್ಯಕ್ಷೆ ಕುಶಲಾ ಸ್ವಾಮಿ ಮಾತನಾಡಿ, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ. ಅತ್ಯಾಚಾರವನ್ನು ಮಾಡಿ ಬೆತ್ತಲೆ ಮೆರವಣಿಗೆ ಮಾಡುವಂತಹ ಹೀನಾತಿ ಹೀನರಿಗೆ ರಕ್ಷಣೆ ನೀಡುತ್ತಿರುವ ಬಿಜೆಪಿ ಕೇಂದ್ರ ಸರ್ಕಾರ ನಿಜಕ್ಕೂ ದೇಶದಿಂದ ತೊಲಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಇತ್ತೀಚಿನ ಕುಸ್ತಿ ಪಟು ಅತ್ಯಾಚಾರ ಪ್ರಕರಣದಲ್ಲಿ ಸಂಸದ ಬ್ರಿಜ್ ಭೂಷಣ್ ರಕ್ಷಣೆಗೆ ನಿಂತಿರುವ ಪ್ರೀತಿಯನ್ನು ಗಮನಿಸಿದರೆ ಕೇವಲ ಭ್ರಷ್ಟಾಚಾರಿಗಳನ್ನು ರಕ್ಷಿಸುತ್ತಿರುವ ಕೇಂದ್ರ ಸರ್ಕಾರ ಈಗ ಅತ್ಯಾಚಾರಿಗಳನ್ನು ಸಹ ಸಂರಕ್ಷಿಸುವ ಕಾರ್ಯದಲ್ಲಿ ತೊಡಗಿರುವುದು ಈ ದೇಶದ ದುರಂತವೇ ಸರಿ ಎಂದರು.

ಇತ್ತ ಭಾರತ ಮಾತೆಯನ್ನು ಪೂಜಿಸುವಂತಹ ಸಂಸ್ಕೃತಿ ರಕ್ಷಕರು ಎಂದು ಫೋಜು ನೀಡುತ್ತಾ ಬಂದಿರುವ ಬಿಜೆಪಿಯ ನಿಜ ಬಣ್ಣ ದೇಶದ ಮುಂದೆ ಬೆತ್ತಲಾಗಿದೆ. ಮುಂದಿನ ದಿನಗಳಲ್ಲಿ ತಕ್ಕ ಪಾಠವನ್ನು ದೇಶ ಜನ ಕಲಿಸಿಕೊಡುತ್ತಾರೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಹಿರಿಯ ನಾಯಕ ವಿಜಯ ಶರ್ಮ, ಮಾಧ್ಯಮ ವಕ್ತಾರೆ ಉಷಾ ಮೋಹನ್, ಪ್ರಕಾಶ್ ನಡುಂಗಡಿ, ಸುಷ್ಮಾ ವೀರ, ಹರಿಹರನ್, ಗೋಪಾಲ್, ಮಹದೇವಸ್ವಾಮಿ, ಫರೀದ್, ಫಿರೋಜ್ ಖಾನ್, ಜ್ಯೋತಿಶ್ ಕುಮಾರ್, ಮರಿಯ, ಮಹಾಲಕ್ಷ್ಮಿ, ಸುಹಾಸಿನಿ ಪಣಿರಾಜ್, ಪುಷ್ಪ ಕೇಶವ್ ಸೇರಿದಂತೆ ಅನೇಕ ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ