ನಮ್ಮರಾಜ್ಯ

ಮದ್ಯಪ್ರಿಯರಿಗೂ ಯಮನಾದ ಕೊರೊನಾ

ವೈನ್‌ ಸಿಗುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡರೆ ವ್ಯಸನಿಗಳು?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮದ್ಯ ಸರಬರಾಜು ಮಾಡಿ ಎಂದು ಮದ್ಯಪ್ರಿಯರು ಸರ್ಕಾರಕ್ಕೆ ದುಂಬಾಲು ಬೀಳುತ್ತಿದ್ದು, ಇನ್ನೊಂದೆಡೆ ಆತ್ಮಹತ್ಯೆಗೂ ಶರಣಾಗಿದ್ದಾರೆ ಎಂದು ಹೇಳಲಾಗುತ್ತದೆ.

ಇಡೀ ವಿಶ್ವವನ್ನೇ ಕೊರೊನಾ ಎಂಬ ಹೆಮ್ಮಾರಿ ಕಾಡುತ್ತಿದ್ದರೆ ಇತ್ತ ನಮಗೆ ವೈನ್‌ಕೊಡಿ ಎಂದು ಮದ್ಯವ್ಯಸನಿಗಳು ಕುಡಿತವನ್ನು ತಾತ್ಕಾಲಿಕವಾಗಿ ತ್ಯೆಜಿಸಲಾರದೆ. ಹುಚ್ಚರಂತೆ ನಡೆದುಕೊಳ್ಳುತ್ತಿದ್ದಾರೆ. ಇತ್ತ ಕೊರೊನಾ ಭೀತಿ ದೇಶ ಮತ್ತು ರಾಜ್ಯವನ್ನು ಕಾಡುತ್ತಿದ್ದು, ಜನರು ಮನೆಯಿಂದ ಹೊರ ಬಾರದಂತೆ ಸರ್ಕಾರ ಕರ್ಫ್ಯೂ ವಿಧಿಸಿದೆ.

ಆದರೂ ಮದ್ಯವೆಸನಿಗಳು ನಮಗೆ ಮದ್ಯಬೇಕು ಎಂದು ಪತ್ರವನ್ನು ಬರೆದಿದ್ದಾರೆ. ಇನ್ನೊಂದೆಡೆ ಕೊರೊನಾ ವೈರಸ್‌ಗೆ ತುತ್ತಾಗುತ್ತಿರುವವರ ಸಂಖ್ಯೆ ಏರುತ್ತಿರುವುದು ದೇಶವನ್ನು ಇನ್ನಿಲ್ಲದಂತೆ ಕಾಡುತ್ತಿದೆ.

ಮಂಗಳಮುಖಿಯರ ಕಣ್ಣೀರು

ಕೊರೊನಾ ಬಾಧೆಯಿಂದ ಮನೆಯಿಂದ ಹೊರಬಾರದಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿರುವ ಆದೇಶವನ್ನು ಪಾಲಿಸುತ್ತಿದೆ. ಅದಕ್ಕೆ ರಾಜ್ಯದ ಜನತೆಯು ಬೆಂಬಲ ನೀಡಿದ್ದಾರೆ. ಈ ನಡುವೆ ಮಂಗಳಮುಖಿಯರು ನಮಗೆ ಆಹಾರ ಸಿಗುತ್ತಿಲ್ಲ. ನಮಗೆ ಹಣಬೇಡ ಅನ್ನಹಾಕಿ ಎಂದು ಸರ್ಕಾರದ ಮೊರೆ ಹೋಗುತ್ತಿದ್ದಾರೆ. ಇನ್ನು ಭಿಕ್ಷುಕರನ್ನು ಹಲವು ಸಂಘಸಂಸ್ಥೆಗಳು ಗುರುತಿಸಿ ಆಹಾರವನ್ನು ನೀಡುತ್ತಿದ್ದು, ಅವರ ಆರೋಗ್ಯದ ದೃಷ್ಟಿಯಿಂದ ಎಲ್ಲಾ ಸೌಲಭ್ಯವನ್ನು ಒದಗಿಸುತ್ತಿವೆ.

ಸರ್ಕಾರವು ಸಂಘಸಂಸ್ಥೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಹಲವು ಉದ್ಯಮಿಗಳು, ಸಿನಿಮಾ ತಾರೆಯರು, ನಾಗರಿಕರು ಸರ್ಕಾರಕ್ಕೆ ದೇಣಿಗೆಯನ್ನು ನೀಡುತ್ತಿದ್ದಾರೆ. ಆದರೆ ಒಂದಿಬ್ಬರು ರಾಜಕಾರಣಿಗಳನ್ನು ಬಿಟ್ಟರೆ ಉಳಿದ ರಾಜಕಾರಣಿಗಳು ಯಾವುದೇ ಸಹಾಯ ಮಾಡಲು ಮುಂದಾಗುತ್ತಿಲ್ಲ. ಇದು ರಾಜ್ಯದ ಜನತೆಯ ದೌರ್ಭಾಗ್ಯ. ಇನ್ನು ಮೇಲಾದರು ತಮ್ಮ ಕ್ಷೇತ್ರಗಳಲ್ಲಾದರೂ ನಿರ್ಗತಿಕ ಜನರಿಗೆ ನೆರವಾಗಬೇಕಿದೆ.

 

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇ ₹10 : ಟಿಸಿಗೆ ಡಿಎಂ ಸಾಥ್‌ ... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು